<p><strong>ಗದಗ</strong>: ಸರ್ಕಾರಿ ಅಲ್ಪಸಂಖ್ಯಾತರ ಮಹಿಳಾ ಕಾಲೇಜನ್ನು ನಗರದ ಹೊರವಲಯದಲ್ಲಿ ಆರಂಭಿಸಲು ಉದ್ದೇಶಿಸಿರುವ ಅಧಿಕಾರಿಗಳ ಕ್ರಮವನ್ನು ಖಂಡಿಸಿದ ಗದಗ-ಬೆಟಗೇರಿ ಮುಸ್ಲಿಂ ಸಮಾಜದ ವೇದಿಕೆಯ ಕಾರ್ಯಕರ್ತರು ಸೋಮವಾರ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.</p>.<p>ವೇದಿಕೆ ಅಧ್ಯಕ್ಷ ಮಹಮ್ಮದ ಯೂಸುಫ್ ನಮಾಜಿ ಮಾತನಾಡಿ, ಸದ್ಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮೂಲಕ ನಗರದ ಹೊರವಲಯದ ಕಾರವಾರ-ಬಳ್ಳಾರಿ ರಸ್ತೆಯ ಖಬ್ರಸ್ತಾನ ಜಾಗೆಯ ಕಟ್ಟಡದಲ್ಲಿ ಮಹಿಳಾ ಕಾಲೇಜನ್ನು ಪ್ರಾರಂಭಿಸಲು ಅಧಿಕಾರಿಗಳು ಉದ್ದೇಶಿಸಿದ್ದು ಖಂಡನೀಯ. ಅಲ್ಲಿಗೆ ಹೋಗಲು ವಾಹನಗಳ ವ್ಯವಸ್ಥೆ ಇಲ್ಲ, ಸುರಕ್ಷತೆ ಇಲ್ಲ ಎಂದು ಅವರು ದೂರಿದರು.</p>.<p>‘ಈ ಕಟ್ಟಡದ ಬದಲು ನಗರದ ಮಧ್ಯಭಾಗದಲ್ಲಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಸತಿ ಶಾಲೆಯೊಂದನ್ನು ಬೇರೆಡೆ ಸ್ಥಳಾಂತರಿಸಿ, ಅಲ್ಲಿ ಕಾಲೇಜು ಆರಂಭಿಸಬೇಕು’ ಎಂದು ಕೋರಿದರು.</p>.<p>ವೇದಿಕೆ ಕಾರ್ಯದರ್ಶಿ ಇಮ್ತಿಯಾಜ ಆರ್. ಮಾನ್ವಿ ಮಾತನಾಡಿ, ಖಾಸಗಿ ಕಟ್ಟಡಗಳ ಬಾಡಿಗೆಗೆ ಲಕ್ಷಾಂತರ ರೂಪಾಯಿ ಹಣ ಸುರಿಯುವ ಬದಲು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಹಾಸ್ಟೆಲ್ ಕಟ್ಟಡದಲ್ಲಿಯೇ ಹೊಸ ಕಾಲೇಜು ಆರಂಭಿಸಬೇಕು ಎಂದು ಒತ್ತಾಯಿಸಿದರು.</p>.<p>ಅಂಜುಮನ್ ಸಂಸ್ಥೆ ಸದಸ್ಯರಾದ ಬಾಷಾಸಾಬ ಮಲ್ಲಸಮುದ್ರ ಮಾತನಾಡಿ ದರು. ವೇದಿಕೆಯ ಮುಖಂಡರಾದ ಬಾಬಾಜಾನ ಬಳಗಾನೂರ, ಎಂ.ಎಂ.ಮಾಳೆಕೊಪ್ಪ, ಅನ್ವರ ಶಿರಹಟ್ಟಿ, ರಫೀಕ ಜಮಾಲಖಾನವರ, ಯುಸುಫಸಾಬ ಕೊಟ್ಟೂರ, ಮುನ್ನಾ ಶೇಖ, ಅಬ್ದುಲರಜಾಕ ಶಿರಹಟ್ಟಿ, ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260512-23-770104371</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ</strong>: ಸರ್ಕಾರಿ ಅಲ್ಪಸಂಖ್ಯಾತರ ಮಹಿಳಾ ಕಾಲೇಜನ್ನು ನಗರದ ಹೊರವಲಯದಲ್ಲಿ ಆರಂಭಿಸಲು ಉದ್ದೇಶಿಸಿರುವ ಅಧಿಕಾರಿಗಳ ಕ್ರಮವನ್ನು ಖಂಡಿಸಿದ ಗದಗ-ಬೆಟಗೇರಿ ಮುಸ್ಲಿಂ ಸಮಾಜದ ವೇದಿಕೆಯ ಕಾರ್ಯಕರ್ತರು ಸೋಮವಾರ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.</p>.<p>ವೇದಿಕೆ ಅಧ್ಯಕ್ಷ ಮಹಮ್ಮದ ಯೂಸುಫ್ ನಮಾಜಿ ಮಾತನಾಡಿ, ಸದ್ಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮೂಲಕ ನಗರದ ಹೊರವಲಯದ ಕಾರವಾರ-ಬಳ್ಳಾರಿ ರಸ್ತೆಯ ಖಬ್ರಸ್ತಾನ ಜಾಗೆಯ ಕಟ್ಟಡದಲ್ಲಿ ಮಹಿಳಾ ಕಾಲೇಜನ್ನು ಪ್ರಾರಂಭಿಸಲು ಅಧಿಕಾರಿಗಳು ಉದ್ದೇಶಿಸಿದ್ದು ಖಂಡನೀಯ. ಅಲ್ಲಿಗೆ ಹೋಗಲು ವಾಹನಗಳ ವ್ಯವಸ್ಥೆ ಇಲ್ಲ, ಸುರಕ್ಷತೆ ಇಲ್ಲ ಎಂದು ಅವರು ದೂರಿದರು.</p>.<p>‘ಈ ಕಟ್ಟಡದ ಬದಲು ನಗರದ ಮಧ್ಯಭಾಗದಲ್ಲಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಸತಿ ಶಾಲೆಯೊಂದನ್ನು ಬೇರೆಡೆ ಸ್ಥಳಾಂತರಿಸಿ, ಅಲ್ಲಿ ಕಾಲೇಜು ಆರಂಭಿಸಬೇಕು’ ಎಂದು ಕೋರಿದರು.</p>.<p>ವೇದಿಕೆ ಕಾರ್ಯದರ್ಶಿ ಇಮ್ತಿಯಾಜ ಆರ್. ಮಾನ್ವಿ ಮಾತನಾಡಿ, ಖಾಸಗಿ ಕಟ್ಟಡಗಳ ಬಾಡಿಗೆಗೆ ಲಕ್ಷಾಂತರ ರೂಪಾಯಿ ಹಣ ಸುರಿಯುವ ಬದಲು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಹಾಸ್ಟೆಲ್ ಕಟ್ಟಡದಲ್ಲಿಯೇ ಹೊಸ ಕಾಲೇಜು ಆರಂಭಿಸಬೇಕು ಎಂದು ಒತ್ತಾಯಿಸಿದರು.</p>.<p>ಅಂಜುಮನ್ ಸಂಸ್ಥೆ ಸದಸ್ಯರಾದ ಬಾಷಾಸಾಬ ಮಲ್ಲಸಮುದ್ರ ಮಾತನಾಡಿ ದರು. ವೇದಿಕೆಯ ಮುಖಂಡರಾದ ಬಾಬಾಜಾನ ಬಳಗಾನೂರ, ಎಂ.ಎಂ.ಮಾಳೆಕೊಪ್ಪ, ಅನ್ವರ ಶಿರಹಟ್ಟಿ, ರಫೀಕ ಜಮಾಲಖಾನವರ, ಯುಸುಫಸಾಬ ಕೊಟ್ಟೂರ, ಮುನ್ನಾ ಶೇಖ, ಅಬ್ದುಲರಜಾಕ ಶಿರಹಟ್ಟಿ, ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260512-23-770104371</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>