<p><strong>ಗಜೇಂದ್ರಗಡ:</strong> ‘ಮಹಾಸಾದ್ವಿ ಹೇಮರಡ್ಡಿ ಮಲ್ಲಮ್ಮ ಸ್ತ್ರೀ ಕುಲಕ್ಕೆ ಮಾದರಿಯಾಗಿದ್ದು, ಶ್ರದ್ಧೆ ಮತ್ತು ನಂಬಿಕೆಯಿಂದ ಏನನ್ನಾದರೂ ಸಾಧಿಸಬಹುದು ಎಂಬುದನ್ನು ಇಡೀ ಜಗತ್ತಿಗೆ ತೋರಿಸಿಕೊಟ್ಟಿದ್ದಾರೆ’ ಎಂದು ರೋಣ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಮಿತುನ್ ಪಾಟೀಲ ಹೇಳಿದರು.</p>.<p>ಪಟ್ಟಣದ ರಡ್ಡಿ ಸಮಾಜದ ಕಚೇರಿಯಲ್ಲಿ ಭಾನುವಾರ ನಡೆದ ಹೇಮರಡ್ಡಿ ಮಲ್ಲಮ್ಮ ಜಯಂತಿ ಹಾಗೂ ಭಾವಚಿತ್ರ ಮೆರವಣಿಗೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.</p>.<p>ಗಜೇಂದ್ರಗಡ ತಾಲ್ಲೂಕು ರಡ್ಡಿ ಸಮಾಜದ ಅಧ್ಯಕ್ಷ ಹೇಮರಡ್ಡಿ ದೇವರಡ್ಡಿ ಮಾತನಾಡಿ, ಹೇಮರಡ್ಡಿ ಮಲ್ಲಮ್ಮ ಅವರ ತತ್ವಾದರ್ಶಗಳು ಇಂದಿಗೂ ಪ್ರಸ್ತುತವಾಗಿವೆ. ಅವುಗಳನ್ನು ಎಲ್ಲರೂ ಪಾಲಿಸಬೇಕು ಎಂದು ಹೇಳಿದರು.</p>.<p>ಸಮಾರಂಭದ ಬಳಿಕ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಹೇಮರಡ್ಡಿ ಮಲ್ಲಮ್ಮ ಭಾವಚಿತ್ರ ಮೆರವಣಿಗೆ ನಡೆಯಿತು.</p>.<p>ದೊಡ್ಡನಗೌಡ ಅಮರೇಗೌಡ ಪಾಟೀಲ, ಬಸವರಡ್ಡಿ ಶಿರೋಳ, ಸುರೇಶ ಸಿದ್ದರಡ್ಡಿ, ಎಸ್.ಎಸ್.ರಡ್ಡೇರ, ಪಿ.ಸಿ.ಜೋಗರಡ್ಡಿ, ಗಂಗಾದರರೆಡ್ಡಿ ಬಯ್ಯಪಾಪುರ, ವಿ.ಎಂ.ಗಡ್ಡದ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260513-23-1009246702</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಜೇಂದ್ರಗಡ:</strong> ‘ಮಹಾಸಾದ್ವಿ ಹೇಮರಡ್ಡಿ ಮಲ್ಲಮ್ಮ ಸ್ತ್ರೀ ಕುಲಕ್ಕೆ ಮಾದರಿಯಾಗಿದ್ದು, ಶ್ರದ್ಧೆ ಮತ್ತು ನಂಬಿಕೆಯಿಂದ ಏನನ್ನಾದರೂ ಸಾಧಿಸಬಹುದು ಎಂಬುದನ್ನು ಇಡೀ ಜಗತ್ತಿಗೆ ತೋರಿಸಿಕೊಟ್ಟಿದ್ದಾರೆ’ ಎಂದು ರೋಣ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಮಿತುನ್ ಪಾಟೀಲ ಹೇಳಿದರು.</p>.<p>ಪಟ್ಟಣದ ರಡ್ಡಿ ಸಮಾಜದ ಕಚೇರಿಯಲ್ಲಿ ಭಾನುವಾರ ನಡೆದ ಹೇಮರಡ್ಡಿ ಮಲ್ಲಮ್ಮ ಜಯಂತಿ ಹಾಗೂ ಭಾವಚಿತ್ರ ಮೆರವಣಿಗೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.</p>.<p>ಗಜೇಂದ್ರಗಡ ತಾಲ್ಲೂಕು ರಡ್ಡಿ ಸಮಾಜದ ಅಧ್ಯಕ್ಷ ಹೇಮರಡ್ಡಿ ದೇವರಡ್ಡಿ ಮಾತನಾಡಿ, ಹೇಮರಡ್ಡಿ ಮಲ್ಲಮ್ಮ ಅವರ ತತ್ವಾದರ್ಶಗಳು ಇಂದಿಗೂ ಪ್ರಸ್ತುತವಾಗಿವೆ. ಅವುಗಳನ್ನು ಎಲ್ಲರೂ ಪಾಲಿಸಬೇಕು ಎಂದು ಹೇಳಿದರು.</p>.<p>ಸಮಾರಂಭದ ಬಳಿಕ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಹೇಮರಡ್ಡಿ ಮಲ್ಲಮ್ಮ ಭಾವಚಿತ್ರ ಮೆರವಣಿಗೆ ನಡೆಯಿತು.</p>.<p>ದೊಡ್ಡನಗೌಡ ಅಮರೇಗೌಡ ಪಾಟೀಲ, ಬಸವರಡ್ಡಿ ಶಿರೋಳ, ಸುರೇಶ ಸಿದ್ದರಡ್ಡಿ, ಎಸ್.ಎಸ್.ರಡ್ಡೇರ, ಪಿ.ಸಿ.ಜೋಗರಡ್ಡಿ, ಗಂಗಾದರರೆಡ್ಡಿ ಬಯ್ಯಪಾಪುರ, ವಿ.ಎಂ.ಗಡ್ಡದ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260513-23-1009246702</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>