ಹೌದು, ಸಮೀಪದ ರಾಜೂರ, ಭೈರಾಪುರ, ಜಿಗೇರಿ, ದಿಂಡೂರ, ಲಕ್ಕಲಕಟ್ಟಿ, ನಾಗೇಂದ್ರಗಡ ಗ್ರಾಮಗಳನ್ನು ಒಳಗೊಂಡ ಕಾಲಕಾಲೇಶ್ವರ ಸುಕ್ಷೇತ್ರ ಒಂದು ಕಾಲದಲ್ಲಿ ಸ್ಮಶಾನ ಆಗಿತ್ತಂತೆ. ಐತಿಹ್ಯದ ಪ್ರಕಾರ ಹಿಂದೆ ಈ ಬೆಟ್ಟದಲ್ಲಿ ಗಜಾಸುರನೆಂಬ ರಾಕ್ಷಸ ನೆಲೆಸಿದ್ದನೆಂದು ಅವನ ಉಪಟಳ ತಾಳಲಾರದೆ ಋಷಿ-ಮುನಿಗಳು ಶಿವನಿಗೆ ಮೊರೆಯಿಟ್ಟಾಗ ಶಿವನು ಆ ರಾಕ್ಷಸನನ್ನು ಸಂಹರಿಸಿ ಅವನ ಚರ್ಮವನ್ನು ಸುತ್ತಿಕೊಂಡಿದ್ದರಿಂದ ಗಜಚರ್ಮಾಂಬರನಾಗಿ ಇಲ್ಲಿಯೇ ನೆಲೆಸಿದನೆಂದು ಹೇಳಲಾಗುತ್ತದೆ.