<p>ಗಜೇಂದ್ರಗಡ: ಸಮೀಪದ ರಾಜೂರು ಗ್ರಾಮದಲ್ಲಿ ಶುಕ್ರವಾರ ಬೀರಲಿಂಗೇಶ್ವರ ಸೇವಾ ಸಮಿತಿ ವತಿಯಿಂದ ಬೀರಲಿಂಗೇಶ್ವರರ ಪಲ್ಲಕ್ಕಿ ಮೆರವಣಿಗೆ ವಿಜೃಂಭಣೆಯಿಂದ ನಡೆಯಿತು.</p>.<p>ಗುರುವಾರ ವಿವಿಧ ಊರುಗಳಿಂದ ಗ್ರಾಮಕ್ಕೆ ಕರೆತರಲಾಯಿತು. ಭಾನುವಾರ ದೇವಸ್ಥಾನದಿಂದ ಬೆಳಿಗ್ಗೆ ಪಾಲಕಿಗಳನ್ನು ತೆಗೆದುಕೊಂಡು ಹೋಗಿ ಊರ ಹೊರಗಿನ ಹಳ್ಳದಲ್ಲಿ ಹೊಳೆಸ್ನಾನ ಮಾಡಿಸಿ ಗ್ರಾಮದ ಎಲ್ಲ ದೇವಸ್ಥಾನಗಳಿಗೆ ಪಾಲಕಿಗಳನ್ನು ಕೊಂಡ್ಯೊಯ್ದು ಪೂಜೆ ಸಲ್ಲಿಸಿ, ನಂತರ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಯಿತು.</p>.<p>ಮೆರವಣಿಗೆಯಲ್ಲಿ ಪೂಜಾರಿಗಳು ಕಬ್ಬಿಣದ ಗುಂಡುಗಳಿಂದ ಹೊಡೆದುಕೊಳ್ಳುವ ಹಾಗೂ ಖಡ್ಗ ಪವಾಡ, ಡೊಳ್ಳು ಕುಣಿತದ ಜೊತೆಗೆ ಸಾಹಸ ಪ್ರದರ್ಶನ ನಡೆಸಿದರು.</p>.<p>ಆಲಮಟ್ಟಿಯ ಪೂರ್ಣಾನಂದ ಆಶ್ರಮದ ವಶಿಷ್ಟ ಸ್ವಾಮೀಜಿ ಮೆರವಣಿಗೆಯ ನೇತೃತ್ವ ವಹಿಸಿದ್ದರು. ಗ್ರಾಮಸ್ಥರು ಪಾಲಕಿಗಳಿಗೆ ಪೂಜೆ ಸಲ್ಲಿಸಿ ಭಕ್ತಿ ಸಮರ್ಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260418-23-1108530018</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗಜೇಂದ್ರಗಡ: ಸಮೀಪದ ರಾಜೂರು ಗ್ರಾಮದಲ್ಲಿ ಶುಕ್ರವಾರ ಬೀರಲಿಂಗೇಶ್ವರ ಸೇವಾ ಸಮಿತಿ ವತಿಯಿಂದ ಬೀರಲಿಂಗೇಶ್ವರರ ಪಲ್ಲಕ್ಕಿ ಮೆರವಣಿಗೆ ವಿಜೃಂಭಣೆಯಿಂದ ನಡೆಯಿತು.</p>.<p>ಗುರುವಾರ ವಿವಿಧ ಊರುಗಳಿಂದ ಗ್ರಾಮಕ್ಕೆ ಕರೆತರಲಾಯಿತು. ಭಾನುವಾರ ದೇವಸ್ಥಾನದಿಂದ ಬೆಳಿಗ್ಗೆ ಪಾಲಕಿಗಳನ್ನು ತೆಗೆದುಕೊಂಡು ಹೋಗಿ ಊರ ಹೊರಗಿನ ಹಳ್ಳದಲ್ಲಿ ಹೊಳೆಸ್ನಾನ ಮಾಡಿಸಿ ಗ್ರಾಮದ ಎಲ್ಲ ದೇವಸ್ಥಾನಗಳಿಗೆ ಪಾಲಕಿಗಳನ್ನು ಕೊಂಡ್ಯೊಯ್ದು ಪೂಜೆ ಸಲ್ಲಿಸಿ, ನಂತರ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಯಿತು.</p>.<p>ಮೆರವಣಿಗೆಯಲ್ಲಿ ಪೂಜಾರಿಗಳು ಕಬ್ಬಿಣದ ಗುಂಡುಗಳಿಂದ ಹೊಡೆದುಕೊಳ್ಳುವ ಹಾಗೂ ಖಡ್ಗ ಪವಾಡ, ಡೊಳ್ಳು ಕುಣಿತದ ಜೊತೆಗೆ ಸಾಹಸ ಪ್ರದರ್ಶನ ನಡೆಸಿದರು.</p>.<p>ಆಲಮಟ್ಟಿಯ ಪೂರ್ಣಾನಂದ ಆಶ್ರಮದ ವಶಿಷ್ಟ ಸ್ವಾಮೀಜಿ ಮೆರವಣಿಗೆಯ ನೇತೃತ್ವ ವಹಿಸಿದ್ದರು. ಗ್ರಾಮಸ್ಥರು ಪಾಲಕಿಗಳಿಗೆ ಪೂಜೆ ಸಲ್ಲಿಸಿ ಭಕ್ತಿ ಸಮರ್ಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260418-23-1108530018</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>