<p><strong>ಗದಗ</strong>: ಗದಗ ಶಹರ, ಗ್ರಾಮೀಣ ಸೇರಿದಂತೆ ಜಿಲ್ಲೆಯ 12 ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ದೀಪಾವಳಿ ಸಂದರ್ಭದಲ್ಲಿ ಜೂಜಾಟ ಆಡುತ್ತಿದ್ದ 463 ಮಂದಿ ಮೇಲೆ 61 ಪ್ರಕರಣಗಳನ್ನು ದಾಖಲಿಸಿ, ₹5.15 ಲಕ್ಷ ಹಣ ಜಪ್ತಿ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ತಿಳಿಸಿದ್ದಾರೆ.</p>.<p>ಅ.20ರಿಂದ 22ರ ವರೆಗೆ ಜಿಲ್ಲೆಯಾದ್ಯಂತ ಈ ವಿಶೇಷ ಕಾರ್ಯಾಚರಣೆ ನಡೆಸಲಾಗಿದೆ ಎಂದು ಅವರು ತಿಳಿಸಿದ್ದಾರೆ.</p>.<p>ಗದಗ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ 8 ಪ್ರಕರಣ ದಾಖಲಿಸಿ, ₹2.03 ಲಕ್ಷ ವಶಕ್ಕೆ ಪಡೆಯಲಾಗಿದೆ. 93 ಮಂದಿ ಮೇಲೆ ಪ್ರಕರಣ ದಾಖಲಿಸಲಾಗಿದೆ. ಗದಗ ಶಹರ ಠಾಣೆ ವ್ಯಾಪ್ತಿಯಲ್ಲಿ 6 ಪ್ರಕರಣ ದಾಖಲಿಸಿ, ₹31 ಸಾವಿರ ವಶಕ್ಕೆ ಪಡೆಯಲಾಗಿದೆ.</p>.<p>ಅದೇರೀತಿ, ಶಿರಹಟ್ಟಿ ತಾಲ್ಲೂಕಿನಲ್ಲಿ 12 ಪ್ರಕರಣಗಳಲ್ಲಿ ₹54 ಸಾವಿರ ವಶಕ್ಕೆ ಪಡೆದು 86 ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.</p>.<p>ಲಕ್ಷ್ಮೇಶ್ವರ ಠಾಣೆ ವ್ಯಾಪ್ತಿಯಲ್ಲಿ 5, ರೋಣ ಠಾಣೆ ವ್ಯಾಪ್ತಿಯಲ್ಲಿ 6, ಗಜೇಂದ್ರಗಡ 5, ಬೆಟಗೇರಿ ಬಡಾವಣೆ 3, ಬೆಟಗೇರಿ 6, ಮುಳಗುಂದ 4, ನರೇಗಲ್ 3, ಮುಂಡರಗಿ 2 ಹಾಗೂ ನರಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 1 ಪ್ರಕರಣ ದಾಖಲಿಸಿ, ಹಣ ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ</strong>: ಗದಗ ಶಹರ, ಗ್ರಾಮೀಣ ಸೇರಿದಂತೆ ಜಿಲ್ಲೆಯ 12 ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ದೀಪಾವಳಿ ಸಂದರ್ಭದಲ್ಲಿ ಜೂಜಾಟ ಆಡುತ್ತಿದ್ದ 463 ಮಂದಿ ಮೇಲೆ 61 ಪ್ರಕರಣಗಳನ್ನು ದಾಖಲಿಸಿ, ₹5.15 ಲಕ್ಷ ಹಣ ಜಪ್ತಿ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ತಿಳಿಸಿದ್ದಾರೆ.</p>.<p>ಅ.20ರಿಂದ 22ರ ವರೆಗೆ ಜಿಲ್ಲೆಯಾದ್ಯಂತ ಈ ವಿಶೇಷ ಕಾರ್ಯಾಚರಣೆ ನಡೆಸಲಾಗಿದೆ ಎಂದು ಅವರು ತಿಳಿಸಿದ್ದಾರೆ.</p>.<p>ಗದಗ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ 8 ಪ್ರಕರಣ ದಾಖಲಿಸಿ, ₹2.03 ಲಕ್ಷ ವಶಕ್ಕೆ ಪಡೆಯಲಾಗಿದೆ. 93 ಮಂದಿ ಮೇಲೆ ಪ್ರಕರಣ ದಾಖಲಿಸಲಾಗಿದೆ. ಗದಗ ಶಹರ ಠಾಣೆ ವ್ಯಾಪ್ತಿಯಲ್ಲಿ 6 ಪ್ರಕರಣ ದಾಖಲಿಸಿ, ₹31 ಸಾವಿರ ವಶಕ್ಕೆ ಪಡೆಯಲಾಗಿದೆ.</p>.<p>ಅದೇರೀತಿ, ಶಿರಹಟ್ಟಿ ತಾಲ್ಲೂಕಿನಲ್ಲಿ 12 ಪ್ರಕರಣಗಳಲ್ಲಿ ₹54 ಸಾವಿರ ವಶಕ್ಕೆ ಪಡೆದು 86 ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.</p>.<p>ಲಕ್ಷ್ಮೇಶ್ವರ ಠಾಣೆ ವ್ಯಾಪ್ತಿಯಲ್ಲಿ 5, ರೋಣ ಠಾಣೆ ವ್ಯಾಪ್ತಿಯಲ್ಲಿ 6, ಗಜೇಂದ್ರಗಡ 5, ಬೆಟಗೇರಿ ಬಡಾವಣೆ 3, ಬೆಟಗೇರಿ 6, ಮುಳಗುಂದ 4, ನರೇಗಲ್ 3, ಮುಂಡರಗಿ 2 ಹಾಗೂ ನರಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 1 ಪ್ರಕರಣ ದಾಖಲಿಸಿ, ಹಣ ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>