ಹೆಚ್ಚುವರಿ ಜಾಗದ ಸಲುವಾಗಿ ಕೃಷಿ ಪತ್ತಿನ ಸಹಕಾರಿ ಸಂಘದ ಜಾಗ ಖರೀದಿಗೆ ಮುಂದಾಗಿ ಪಟ್ಟಣ ಪಂಚಾಯ್ತಿ ಮಾರ್ಚ್ 2017ರ ಸಾಮಾನ್ಯ ಸಭೆಯಲ್ಲಿ ಠರಾವು ಪಾಸು ಮಾಡಿದೆ. ಆದರೆ ಇಲ್ಲೀವರೆಗೂ ಯಾವುದೇ ಪ್ರಕ್ರಿಯೆ ನಡೆದಿಲ್ಲ. ಸಭೆ ಸಮಾರಂಭಗಳಲ್ಲಿ ಗಾಂಧೀಜಿ ಭಾವಚಿತ್ರಕ್ಕೆ ಪೂಜಿಸಿ, ಅವರ ಆದರ್ಶಗಳನ್ನು ಅನುಸರಿಸುವಂತೆ ಭಾಷಣ ಮಾಡುವ ಜನಪ್ರತಿನಿಧಿಗಳು ಪ್ರತಿಮೆ ಸ್ಥಾಪನೆ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸಿರುವುದು ನೋವಿನ ಸಂಗತಿಯಾಗಿದೆ ಎಂದು ಎಂ.ಎಸ್.ಕಣವಿ ಹೇಳಿದರು.