<p><strong>ರೋಣ (ಗದಗ ಜಿಲ್ಲೆ):</strong> ತಾಲ್ಲೂಕಿನ ಸಂದಿಗವಾಡ ಗ್ರಾಮದಲ್ಲಿ ಮಸೀದಿಯಲ್ಲಿಯೇ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿದ್ದು, ನಿತ್ಯವೂ ಮುಸ್ಲಿಂ ಯುವಕರೇ ಮೂರ್ತಿ ಪೂಜೆ ನಡೆಸುವ ಮೂಲಕ ಗಮನಸೆಳೆದಿದ್ದಾರೆ.</p>.<p>‘ಗ್ರಾಮದಲ್ಲಿ ಹಬ್ಬ, ಜಾತ್ರೆ, ಉತ್ಸವಗಳ ಆಚರಣೆಗೆ ಜಾತಿ ಭೇದವಿಲ್ಲ. ಇಡೀ ಗ್ರಾಮ ಒಗ್ಗಟ್ಟಿನಿಂದ ಇದ್ದು, ಒಂದೇ ಮನೆಯವರಂತೆ ಬದುಕುತ್ತಿದ್ದೇವೆ’ ಎನ್ನುತ್ತಾರೆ ಗ್ರಾಮಸ್ಥರು.</p>.<p>ಗಣೇಶ ಚತುರ್ಥಿಯಂದು ಅದ್ದೂರಿ ಮೆರವಣಿಗೆಯಲ್ಲಿ ಮುಸ್ಲಿಂ ಯುವಕರೇ ಗಣೇಶನ ಮೂರ್ತಿ ತಂದು ಮಸೀದಿಯಲ್ಲಿ ಪ್ರತಿಷ್ಠಾಪಿಸಿದ್ದಾರೆ. ಮುಸ್ಲಿಂ ಯುವಕರೇ ನಿತ್ಯವೂ ಅವರೇ ಪೂಜೆ, ಪ್ರಾರ್ಥನೆ ಮಾಡುವುದು ವಿಶೇಷ. ಗಣೇಶ ಸ್ತೋತ್ರಗಳನ್ನು ನಿರರ್ಗಳವಾಗಿ ಹೇಳುತ್ತಾರೆ.</p>.<p>ಮುಸ್ಲಿಂ ಯುವಕರ ಜೊತೆಗೆ ಹಿಂದೂ ಯುವಕರು, ಹಿರಿಯರು ಗಣೇಶ ಪೂಜೆಯಲ್ಲಿ ಪಾಲ್ಗೊಳ್ಳುವ ಮೂಲಕ ಭಾವೈಕ್ಯತೆಯಿಂದ ಹಬ್ಬ ಆಚರಿಸುತ್ತಾರೆ. </p>.<p>‘ಕಳೆದ 3 ವರ್ಷದಿಂದ ಗ್ರಾಮದ ಮಸೀದಿಯಲ್ಲಿ ಮೂರ್ತಿ ಪ್ರತಿಷ್ಠಾಪಿಸಲಾಗುತ್ತಿದೆ. ಇದಕ್ಕೆ ಯಾರದ್ದು ವಿರೋಧವಿಲ್ಲ. ಇದು ಸೌಹಾರ್ದಕ್ಕೆ ಸಾಕ್ಷಿಯಾಗಿದೆ ಎನ್ನುತ್ತಾರೆ’ ಗ್ರಾಮಸ್ಥರು.</p>.<p>ಕೇವಲ ಗಣೇಶೋತ್ಸವ ಮಾತ್ರವಲ್ಲ ಶ್ರಾವಣ ಮಾಸದಲ್ಲಿ ಜರುಗುವ ಭಜನೆಯಲ್ಲಿ ರಾಜೇಸಾಬ ಗಂಗೂರ ಎಂಬುವ ಮುಸ್ಲಿಂ ಯುವಕ ತಬಲಾ ಬಾರಿಸುತ್ತಾ ಭಕ್ತಿ ಗೀತೆಗಳನ್ನು ಹಾಡುತ್ತಾನೆ.</p>.<p>ದೀಪಾವಳಿ, ದಸರಾ, ಯುಗಾದಿ, ಮೊಹರಂ, ರಂಜಾನ್, ಈದ್ ಮಿಲಾದ್, ಗಣೇಶ ಹಬ್ಬ ಹೀಗೆ ಗ್ರಾಮದಲ್ಲಿ ಜರುಗುವ ಪ್ರತಿಯೊಂದು ಹಬ್ಬ ಹರಿದಿನ, ಜಾತ್ರೆ, ಉತ್ಸವಗಳನ್ನು ಯಾವುದೇ ಜಾತಿ ಭೇದವಿಲ್ಲದೇ ಎಲ್ಲರೂ ಪಾಲ್ಗೊಳ್ಳುತ್ತಾರೆ. </p>.<p>‘ಗ್ರಾಮದಲ್ಲಿಎಲ್ಲ ಹಬ್ಬಗಳನ್ನು ಭಾವೈಕ್ಯದಿಂದ ಆಚರಿಸುತ್ತೇವೆ‘ ಎನ್ನುತ್ತಾರೆ ಮುಸ್ಲಿಂ ಯುವಕರಾದ ಮುನ್ನಾ ನದಾಫ, ಹಸನ್ಸಾಬ ನದಾಫ, ದಾವಲಸಾಬ ನದಾಫ, ಲಾಡಸಾಬ ನದಾಫ.</p>.<p>ಮೂರ್ತಿ ಪ್ರತಿಷ್ಠಾಪಿಸಿರುವ ಮಸೀದಿಗೆ ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ, ರೋಣ ಸಿಪಿಐ ಎಸ್.ಎಸ್.ಬೀಳಗಿ, ರೋಣ ಠಾಣೆ ಪಿಎಸ್ಐ ಪ್ರಕಾಶ ಬಣಕಾರ ಕೂಡ ಭೇಟಿ ನೀಡಿದ್ದು ಗ್ರಾಮದ ಕೋಮು ಸೌಹಾರ್ದದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.</p>.<div><blockquote>ನಮ್ಮ ಗ್ರಾಮದಲ್ಲಿ ಜಾತಿ ಧರ್ಮದ ಭೇದವಿಲ್ಲ. ಎಲ್ಲ ಹಬ್ಬಗಳನ್ನು ಹಿಂದೂ ಮುಸ್ಲಿಮರು ಸೇರಿ ಆಚರಿಸುತ್ತೇವೆ. ಇದಕ್ಕೆ ಮಸೀದಿಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾದರಿಯಾಗಿದೆ. </blockquote><span class="attribution">-ತಿಪ್ಪನಗೌಡ ಹುಲ್ಲೂರ, ಸಂದಿಗವಾಡ ಗ್ರಾಮದ ಯುವಕ</span></div>.<div><blockquote>ಮಸೀದಿಯಲ್ಲಿ ಮೂರ್ತಿ ಪ್ರತಿಷ್ಠಾಪನೆ ಪೂಜೆಗೆ ಗ್ರಾಮಸ್ಥರೆಲ್ಲರ ಸಹಕಾರವಿದೆ. ನಿತ್ಯವೂ ಗಣೇಶ ಪೂಜೆಯನ್ನು ನಾವೇ ಮಾಡುತ್ತೆವೆ. ಪೂಜೆಯಲ್ಲಿ ಗ್ರಾಮದ ಎಲ್ಲರೂ ಪಾಲ್ಗೊಳ್ಳುತ್ತಾರೆ.</blockquote><span class="attribution">-ಲಾಡಸಾಬ ನದಾಫ ಮುನ್ನಾ ನಧಾಪ ಸಂದಿಗವಾಡ ಗ್ರಾಮದ ಮುಸ್ಲಿಂ ಯುವಕರು.</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರೋಣ (ಗದಗ ಜಿಲ್ಲೆ):</strong> ತಾಲ್ಲೂಕಿನ ಸಂದಿಗವಾಡ ಗ್ರಾಮದಲ್ಲಿ ಮಸೀದಿಯಲ್ಲಿಯೇ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿದ್ದು, ನಿತ್ಯವೂ ಮುಸ್ಲಿಂ ಯುವಕರೇ ಮೂರ್ತಿ ಪೂಜೆ ನಡೆಸುವ ಮೂಲಕ ಗಮನಸೆಳೆದಿದ್ದಾರೆ.</p>.<p>‘ಗ್ರಾಮದಲ್ಲಿ ಹಬ್ಬ, ಜಾತ್ರೆ, ಉತ್ಸವಗಳ ಆಚರಣೆಗೆ ಜಾತಿ ಭೇದವಿಲ್ಲ. ಇಡೀ ಗ್ರಾಮ ಒಗ್ಗಟ್ಟಿನಿಂದ ಇದ್ದು, ಒಂದೇ ಮನೆಯವರಂತೆ ಬದುಕುತ್ತಿದ್ದೇವೆ’ ಎನ್ನುತ್ತಾರೆ ಗ್ರಾಮಸ್ಥರು.</p>.<p>ಗಣೇಶ ಚತುರ್ಥಿಯಂದು ಅದ್ದೂರಿ ಮೆರವಣಿಗೆಯಲ್ಲಿ ಮುಸ್ಲಿಂ ಯುವಕರೇ ಗಣೇಶನ ಮೂರ್ತಿ ತಂದು ಮಸೀದಿಯಲ್ಲಿ ಪ್ರತಿಷ್ಠಾಪಿಸಿದ್ದಾರೆ. ಮುಸ್ಲಿಂ ಯುವಕರೇ ನಿತ್ಯವೂ ಅವರೇ ಪೂಜೆ, ಪ್ರಾರ್ಥನೆ ಮಾಡುವುದು ವಿಶೇಷ. ಗಣೇಶ ಸ್ತೋತ್ರಗಳನ್ನು ನಿರರ್ಗಳವಾಗಿ ಹೇಳುತ್ತಾರೆ.</p>.<p>ಮುಸ್ಲಿಂ ಯುವಕರ ಜೊತೆಗೆ ಹಿಂದೂ ಯುವಕರು, ಹಿರಿಯರು ಗಣೇಶ ಪೂಜೆಯಲ್ಲಿ ಪಾಲ್ಗೊಳ್ಳುವ ಮೂಲಕ ಭಾವೈಕ್ಯತೆಯಿಂದ ಹಬ್ಬ ಆಚರಿಸುತ್ತಾರೆ. </p>.<p>‘ಕಳೆದ 3 ವರ್ಷದಿಂದ ಗ್ರಾಮದ ಮಸೀದಿಯಲ್ಲಿ ಮೂರ್ತಿ ಪ್ರತಿಷ್ಠಾಪಿಸಲಾಗುತ್ತಿದೆ. ಇದಕ್ಕೆ ಯಾರದ್ದು ವಿರೋಧವಿಲ್ಲ. ಇದು ಸೌಹಾರ್ದಕ್ಕೆ ಸಾಕ್ಷಿಯಾಗಿದೆ ಎನ್ನುತ್ತಾರೆ’ ಗ್ರಾಮಸ್ಥರು.</p>.<p>ಕೇವಲ ಗಣೇಶೋತ್ಸವ ಮಾತ್ರವಲ್ಲ ಶ್ರಾವಣ ಮಾಸದಲ್ಲಿ ಜರುಗುವ ಭಜನೆಯಲ್ಲಿ ರಾಜೇಸಾಬ ಗಂಗೂರ ಎಂಬುವ ಮುಸ್ಲಿಂ ಯುವಕ ತಬಲಾ ಬಾರಿಸುತ್ತಾ ಭಕ್ತಿ ಗೀತೆಗಳನ್ನು ಹಾಡುತ್ತಾನೆ.</p>.<p>ದೀಪಾವಳಿ, ದಸರಾ, ಯುಗಾದಿ, ಮೊಹರಂ, ರಂಜಾನ್, ಈದ್ ಮಿಲಾದ್, ಗಣೇಶ ಹಬ್ಬ ಹೀಗೆ ಗ್ರಾಮದಲ್ಲಿ ಜರುಗುವ ಪ್ರತಿಯೊಂದು ಹಬ್ಬ ಹರಿದಿನ, ಜಾತ್ರೆ, ಉತ್ಸವಗಳನ್ನು ಯಾವುದೇ ಜಾತಿ ಭೇದವಿಲ್ಲದೇ ಎಲ್ಲರೂ ಪಾಲ್ಗೊಳ್ಳುತ್ತಾರೆ. </p>.<p>‘ಗ್ರಾಮದಲ್ಲಿಎಲ್ಲ ಹಬ್ಬಗಳನ್ನು ಭಾವೈಕ್ಯದಿಂದ ಆಚರಿಸುತ್ತೇವೆ‘ ಎನ್ನುತ್ತಾರೆ ಮುಸ್ಲಿಂ ಯುವಕರಾದ ಮುನ್ನಾ ನದಾಫ, ಹಸನ್ಸಾಬ ನದಾಫ, ದಾವಲಸಾಬ ನದಾಫ, ಲಾಡಸಾಬ ನದಾಫ.</p>.<p>ಮೂರ್ತಿ ಪ್ರತಿಷ್ಠಾಪಿಸಿರುವ ಮಸೀದಿಗೆ ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ, ರೋಣ ಸಿಪಿಐ ಎಸ್.ಎಸ್.ಬೀಳಗಿ, ರೋಣ ಠಾಣೆ ಪಿಎಸ್ಐ ಪ್ರಕಾಶ ಬಣಕಾರ ಕೂಡ ಭೇಟಿ ನೀಡಿದ್ದು ಗ್ರಾಮದ ಕೋಮು ಸೌಹಾರ್ದದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.</p>.<div><blockquote>ನಮ್ಮ ಗ್ರಾಮದಲ್ಲಿ ಜಾತಿ ಧರ್ಮದ ಭೇದವಿಲ್ಲ. ಎಲ್ಲ ಹಬ್ಬಗಳನ್ನು ಹಿಂದೂ ಮುಸ್ಲಿಮರು ಸೇರಿ ಆಚರಿಸುತ್ತೇವೆ. ಇದಕ್ಕೆ ಮಸೀದಿಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾದರಿಯಾಗಿದೆ. </blockquote><span class="attribution">-ತಿಪ್ಪನಗೌಡ ಹುಲ್ಲೂರ, ಸಂದಿಗವಾಡ ಗ್ರಾಮದ ಯುವಕ</span></div>.<div><blockquote>ಮಸೀದಿಯಲ್ಲಿ ಮೂರ್ತಿ ಪ್ರತಿಷ್ಠಾಪನೆ ಪೂಜೆಗೆ ಗ್ರಾಮಸ್ಥರೆಲ್ಲರ ಸಹಕಾರವಿದೆ. ನಿತ್ಯವೂ ಗಣೇಶ ಪೂಜೆಯನ್ನು ನಾವೇ ಮಾಡುತ್ತೆವೆ. ಪೂಜೆಯಲ್ಲಿ ಗ್ರಾಮದ ಎಲ್ಲರೂ ಪಾಲ್ಗೊಳ್ಳುತ್ತಾರೆ.</blockquote><span class="attribution">-ಲಾಡಸಾಬ ನದಾಫ ಮುನ್ನಾ ನಧಾಪ ಸಂದಿಗವಾಡ ಗ್ರಾಮದ ಮುಸ್ಲಿಂ ಯುವಕರು.</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>