<p><strong>ಗದಗ:</strong> ನೀರಿನ ಸಮಸ್ಯೆ ಎದುರಾದ ಕಾರಣ ಇಲ್ಲಿನ ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ಜಿಮ್ಸ್) ಹಾಸ್ಟೆಲ್ನಲ್ಲಿ ವಾಸವಿರುವ ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ರಜೆ ಕೊಟ್ಟು ಮನೆಗೆ ಕಳುಹಿಸಲಾಗಿದೆ.</p>.<p>‘ನೀರಿನ ಸಮಸ್ಯೆ ಕಾರಣಕ್ಕೆ ರಜೆ ಕೊಡಲಾಗಿದೆ. ಪ್ರಾಧ್ಯಾಪಕರ ವಸತಿಗೃಹಗಳಿಗೂ ಸರಿಯಾಗಿ ನೀರು ಪೂರೈಕೆ ಆಗುತ್ತಿಲ್ಲ. ನೀರಿನ ಸಮಸ್ಯೆ ಬಗೆಹರಿಸಬೇಕು’ ಎಂದು ಜಿಮ್ಸ್ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.</p>.<p>ರಜೆಗೆ ನೀರಿನ ಸಮಸ್ಯೆ ಕಾರಣವಲ್ಲ: ‘ನೀರಿನ ಸಮಸ್ಯೆ ಉಂಟಾಗಿದ್ದಕ್ಕೆ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ರಜೆ ಕೊಟ್ಟಿಲ್ಲ. ಎರಡು ಬ್ಯಾಚ್ನ ವಿದ್ಯಾರ್ಥಿಗಳ ಆಂತರಿಕ ಪರೀಕ್ಷೆಗಳು ಮುಗಿದಿದ್ದಕ್ಕೆ ಅವರಿಗೆ ಐದು ದಿನ ರಜೆ ನೀಡಲಾಗಿದೆ. ಸೋಮವಾರದಿಂದ ತರಗತಿಗೆ ಹಾಜರಾಗುವರು’ ಎಂದು ಜಿಮ್ಸ್ ನಿರ್ದೇಶಕ ಡಾ. ಬಸವರಾಜ ಬೊಮ್ಮನಹಳ್ಳಿ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಜಿಲ್ಲಾ ಆಸ್ಪತ್ರೆಗೆ ನೀರಿನ ಸಮಸ್ಯೆ ಆಗದಂತೆ ಕ್ರಮ ವಹಿಸಲಾಗಿದೆ. ಇಲ್ಲಿಗೆ 24/7 ನೀರು ಪೂರೈಕೆ ಇಲ್ಲ. ಕೊಳವೆಬಾವಿ ನೀರನ್ನು ಒದಗಿಸಲಾಗಿದ್ದು, ರೋಗಿಗಳಿಗೆ ತೊಂದರೆ ಆಗಿಲ್ಲ. ಹಮ್ಮಿಗಿ ಬ್ಯಾರೇಜ್ನಲ್ಲಿ ಸ್ವಚ್ಛತಾ ಕಾರ್ಯ ನಡೆದಿರುವುದಕ್ಕೆ ಹಾಸ್ಟೆಲ್ಗೆ ನೀರು ಪೂರೈಕೆ ಆಗಿಲ್ಲ. ನೀರನ್ನು ಮಿತವಾಗಿ ಬಳಸುವಂತೆ ವಿದ್ಯಾರ್ಥಿಗಳಿಗೆ ಸೂಚಿಸಲಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ:</strong> ನೀರಿನ ಸಮಸ್ಯೆ ಎದುರಾದ ಕಾರಣ ಇಲ್ಲಿನ ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ಜಿಮ್ಸ್) ಹಾಸ್ಟೆಲ್ನಲ್ಲಿ ವಾಸವಿರುವ ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ರಜೆ ಕೊಟ್ಟು ಮನೆಗೆ ಕಳುಹಿಸಲಾಗಿದೆ.</p>.<p>‘ನೀರಿನ ಸಮಸ್ಯೆ ಕಾರಣಕ್ಕೆ ರಜೆ ಕೊಡಲಾಗಿದೆ. ಪ್ರಾಧ್ಯಾಪಕರ ವಸತಿಗೃಹಗಳಿಗೂ ಸರಿಯಾಗಿ ನೀರು ಪೂರೈಕೆ ಆಗುತ್ತಿಲ್ಲ. ನೀರಿನ ಸಮಸ್ಯೆ ಬಗೆಹರಿಸಬೇಕು’ ಎಂದು ಜಿಮ್ಸ್ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.</p>.<p>ರಜೆಗೆ ನೀರಿನ ಸಮಸ್ಯೆ ಕಾರಣವಲ್ಲ: ‘ನೀರಿನ ಸಮಸ್ಯೆ ಉಂಟಾಗಿದ್ದಕ್ಕೆ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ರಜೆ ಕೊಟ್ಟಿಲ್ಲ. ಎರಡು ಬ್ಯಾಚ್ನ ವಿದ್ಯಾರ್ಥಿಗಳ ಆಂತರಿಕ ಪರೀಕ್ಷೆಗಳು ಮುಗಿದಿದ್ದಕ್ಕೆ ಅವರಿಗೆ ಐದು ದಿನ ರಜೆ ನೀಡಲಾಗಿದೆ. ಸೋಮವಾರದಿಂದ ತರಗತಿಗೆ ಹಾಜರಾಗುವರು’ ಎಂದು ಜಿಮ್ಸ್ ನಿರ್ದೇಶಕ ಡಾ. ಬಸವರಾಜ ಬೊಮ್ಮನಹಳ್ಳಿ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಜಿಲ್ಲಾ ಆಸ್ಪತ್ರೆಗೆ ನೀರಿನ ಸಮಸ್ಯೆ ಆಗದಂತೆ ಕ್ರಮ ವಹಿಸಲಾಗಿದೆ. ಇಲ್ಲಿಗೆ 24/7 ನೀರು ಪೂರೈಕೆ ಇಲ್ಲ. ಕೊಳವೆಬಾವಿ ನೀರನ್ನು ಒದಗಿಸಲಾಗಿದ್ದು, ರೋಗಿಗಳಿಗೆ ತೊಂದರೆ ಆಗಿಲ್ಲ. ಹಮ್ಮಿಗಿ ಬ್ಯಾರೇಜ್ನಲ್ಲಿ ಸ್ವಚ್ಛತಾ ಕಾರ್ಯ ನಡೆದಿರುವುದಕ್ಕೆ ಹಾಸ್ಟೆಲ್ಗೆ ನೀರು ಪೂರೈಕೆ ಆಗಿಲ್ಲ. ನೀರನ್ನು ಮಿತವಾಗಿ ಬಳಸುವಂತೆ ವಿದ್ಯಾರ್ಥಿಗಳಿಗೆ ಸೂಚಿಸಲಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>