ಈ ಕಲ್ಯಾಣಿಯಲ್ಲಿನ ನೀರನ್ನು ಜನರು ಮೊದಲು ಕುಡಿಯಲು ಬಳಸುತ್ತಿದ್ದರು. ಆದರೆ, ದೇವಸ್ಥಾನಕ್ಕೆ ಬರುವ ಭಕ್ತರು ಇದರಲ್ಲಿ ಹೂವು, ಹಣ್ಣು, ಕಾಯಿ ಸೇರಿದಂತೆ ಪೂಜಾ ಸಾಮಗ್ರಿಗಳನ್ನು ಎಸೆದು ನೀರು ಕಲುಷಿತಗೊಳಿಸಿದ್ದರು. ದೇವಸ್ಥಾನದ ಧರ್ಮದರ್ಶಿಗಳ ನೇತೃತ್ವದಲ್ಲಿ ಕಳೆದ 8 ದಿನಗಳಿಂದ ಕಲ್ಯಾಣಿಯಲ್ಲಿನ ಕಲುಷಿತ ನೀರನ್ನು ಹೊರಹಾಕಿ, ಹೂಳು ತೆಗೆಯುವ ಕಾರ್ಯ ನಡೆಯುತ್ತಿದೆ.