<p><strong>ಲಕ್ಷ್ಮೇಶ್ವರ</strong>: ‘ಬೆಂಬಲ ಬೆಲೆಯಡಿ ಮೆಕ್ಕೆಜೋಳ ಖರೀದಿ ಕೇಂದ್ರಕ್ಕಾಗಿ ರೈತರು ನಡೆಸುತ್ತಿರುವ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲ ಇದೆ. ಆದರೆ, ಹೋರಾಟದ ನೆಪದಲ್ಲಿ ಊರು ಬಂದ್ ಮಾಡುವುದು ಸರಿ ಅಲ್ಲ’ ಎಂದು ಮಾಜಿ ಶಾಸಕ ಜಿ.ಎಂ. ಮಹಾಂತಶೆಟ್ಟರ ಹೇಳಿದರು.</p>.<p>ಈ ಕುರಿತು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬೆಂಬಲ ಬೆಲೆ ಘೋಷಿಸಿದ್ದರಿಂದ ರೈತರು ಈ ವರ್ಷ ಹೆಚ್ಚಿನ ಪ್ರಮಾಣದಲ್ಲಿ ಮೆಕ್ಕೆಜೋಳ ಬೆಳೆದಿದ್ದಾರೆ. ಈಗಾಗಲೇ ಖರೀದಿ ಕೇಂದ್ರ ಆರಂಭಿಸಬೇಕಿತ್ತು. ಆದರೆ ಗ್ಯಾರಂಟಿ ಯೋಜನೆಗಾಗಿ ಖಜಾನೆ ಖಾಲಿ ಆಗಿದ್ದು, ರಾಜ್ಯ ಸರ್ಕಾರದ ಬಳಿ ಹಣ ಇಲ್ಲ. ಈಗ ಮೆಕ್ಕೆಜೋಳ ಖರೀದಿಸುವುದು ಸರ್ಕಾರಕ್ಕೆ ಆಗದ ಕೆಲಸ’ ಎಂದರು.</p>.<p>‘ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪರಸ್ಪರ ಚರ್ಚಿಸಿ, ನಿರ್ಧಾರ ತೆಗೆದುಕೊಂಡಾಗ ಮಾತ್ರ ಖರೀದಿ ಕೇಂದ್ರ ಆರಂಭವಾಗಬಹುದು. ಇಲ್ಲದಿದ್ದರೆ, ಎಷ್ಟೇ ಹೋರಾಟ ಮಾಡಿದರೂ ಪ್ರಯೋಜನ ಇಲ್ಲ’ ಎಂದು ತಿಳಿಸಿದರು.</p>.<p>‘ಪ್ರತಿಭಟನೆ ನಡೆಸಿದರೆ ಸಮಸ್ಯೆ ಇಲ್ಲ. ಆದರೆ, ಉಪವಾಸ ಸತ್ಯಾಗ್ರಹ ನಡೆಸುವುದು ಸರಿ ಅಲ್ಲ. ಅಮರಣಾಂತ ಉಪವಾಸ ನಡೆಸುತ್ತಿರುವ ಕುಮಾರ ಮಹಾರಾಜರಿಗೆ ಏನಾದರೂ ಸಮಸ್ಯೆ ಉಂಟಾದರೆ, ಇಡೀ ಊರಿಗೆ ಕೆಟ್ಟ ಹೆಸರು ಬರುತ್ತದೆ’ ಎಂದರು.</p>.<p>‘ಪದೇ ಪದೇ ಊರು ಬಂದ್ ಮಾಡುವುದರಿಂದ ಸಾರ್ವಜನಿಕರು, ಕೂಲಿಕಾರರು, ವ್ಯಾಪಾರಸ್ಥರಿಗೆ ತೊಂದರೆಯಾಗುತ್ತದೆ. ಬಂದ್ಗೆ ಕರೆ ನೀಡುವ ಮೊದಲು ಹೋರಾಟಗಾರರು ಸಾಕಷ್ಟು ಬಾರಿ ವಿಚಾರ ಮಾಡಬೇಕು. ರೈತರ ನ್ಯಾಯಯುತ ಬೇಡಿಕೆಗೆ ಯಾವಾಗಲೂ ನಮ್ಮ ಬೆಂಬಲ ಇರುತ್ತದೆ’ ಎಂದು ಹೇಳಿದರು.</p>.<p>ಎಸ್.ಪಿ. ಪಾಟೀಲ, ವಿ.ಜಿ. ಪಡಿಗೇರಿ, ಸೋಮಣ್ಣ ಉಪನಾಳ, ಬಸವೇಶ ಮಹಾಂತಶೆಟ್ಟರ, ಅಪ್ಪಣ್ಣ ಸಾಲಿ ಮಾತನಾಡಿದರು.</p>.<p>ಚಂಬಣ್ಣ ಬಾಳಿಕಾಯಿ, ಡಿ.ಬಿ. ಬಳಿಗಾರ, ನಿಂಗಪ್ಪ ಬನ್ನಿ, ಶಾಂತಣ್ಣ ಬಳ್ಳಾರಿ, ನಿಂಗಪ್ಪ ಹುನಗುಂದ, ಹನಮಂತಪ್ಪ ತಳವಾರ, ಎನ್.ಎನ್. ನೆಗಳೂರ, ಬಸಣ್ಣ ಹಂಜಿ, ಮಹಾದೆವಪ್ಪ ಅಣ್ಣಿಗೇರಿ, ಸೋಮಣ್ಣ ಡಾಣಗಲ್ಲ, ವೀರಣ್ಣ ಪವಾಡದ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಕ್ಷ್ಮೇಶ್ವರ</strong>: ‘ಬೆಂಬಲ ಬೆಲೆಯಡಿ ಮೆಕ್ಕೆಜೋಳ ಖರೀದಿ ಕೇಂದ್ರಕ್ಕಾಗಿ ರೈತರು ನಡೆಸುತ್ತಿರುವ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲ ಇದೆ. ಆದರೆ, ಹೋರಾಟದ ನೆಪದಲ್ಲಿ ಊರು ಬಂದ್ ಮಾಡುವುದು ಸರಿ ಅಲ್ಲ’ ಎಂದು ಮಾಜಿ ಶಾಸಕ ಜಿ.ಎಂ. ಮಹಾಂತಶೆಟ್ಟರ ಹೇಳಿದರು.</p>.<p>ಈ ಕುರಿತು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬೆಂಬಲ ಬೆಲೆ ಘೋಷಿಸಿದ್ದರಿಂದ ರೈತರು ಈ ವರ್ಷ ಹೆಚ್ಚಿನ ಪ್ರಮಾಣದಲ್ಲಿ ಮೆಕ್ಕೆಜೋಳ ಬೆಳೆದಿದ್ದಾರೆ. ಈಗಾಗಲೇ ಖರೀದಿ ಕೇಂದ್ರ ಆರಂಭಿಸಬೇಕಿತ್ತು. ಆದರೆ ಗ್ಯಾರಂಟಿ ಯೋಜನೆಗಾಗಿ ಖಜಾನೆ ಖಾಲಿ ಆಗಿದ್ದು, ರಾಜ್ಯ ಸರ್ಕಾರದ ಬಳಿ ಹಣ ಇಲ್ಲ. ಈಗ ಮೆಕ್ಕೆಜೋಳ ಖರೀದಿಸುವುದು ಸರ್ಕಾರಕ್ಕೆ ಆಗದ ಕೆಲಸ’ ಎಂದರು.</p>.<p>‘ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪರಸ್ಪರ ಚರ್ಚಿಸಿ, ನಿರ್ಧಾರ ತೆಗೆದುಕೊಂಡಾಗ ಮಾತ್ರ ಖರೀದಿ ಕೇಂದ್ರ ಆರಂಭವಾಗಬಹುದು. ಇಲ್ಲದಿದ್ದರೆ, ಎಷ್ಟೇ ಹೋರಾಟ ಮಾಡಿದರೂ ಪ್ರಯೋಜನ ಇಲ್ಲ’ ಎಂದು ತಿಳಿಸಿದರು.</p>.<p>‘ಪ್ರತಿಭಟನೆ ನಡೆಸಿದರೆ ಸಮಸ್ಯೆ ಇಲ್ಲ. ಆದರೆ, ಉಪವಾಸ ಸತ್ಯಾಗ್ರಹ ನಡೆಸುವುದು ಸರಿ ಅಲ್ಲ. ಅಮರಣಾಂತ ಉಪವಾಸ ನಡೆಸುತ್ತಿರುವ ಕುಮಾರ ಮಹಾರಾಜರಿಗೆ ಏನಾದರೂ ಸಮಸ್ಯೆ ಉಂಟಾದರೆ, ಇಡೀ ಊರಿಗೆ ಕೆಟ್ಟ ಹೆಸರು ಬರುತ್ತದೆ’ ಎಂದರು.</p>.<p>‘ಪದೇ ಪದೇ ಊರು ಬಂದ್ ಮಾಡುವುದರಿಂದ ಸಾರ್ವಜನಿಕರು, ಕೂಲಿಕಾರರು, ವ್ಯಾಪಾರಸ್ಥರಿಗೆ ತೊಂದರೆಯಾಗುತ್ತದೆ. ಬಂದ್ಗೆ ಕರೆ ನೀಡುವ ಮೊದಲು ಹೋರಾಟಗಾರರು ಸಾಕಷ್ಟು ಬಾರಿ ವಿಚಾರ ಮಾಡಬೇಕು. ರೈತರ ನ್ಯಾಯಯುತ ಬೇಡಿಕೆಗೆ ಯಾವಾಗಲೂ ನಮ್ಮ ಬೆಂಬಲ ಇರುತ್ತದೆ’ ಎಂದು ಹೇಳಿದರು.</p>.<p>ಎಸ್.ಪಿ. ಪಾಟೀಲ, ವಿ.ಜಿ. ಪಡಿಗೇರಿ, ಸೋಮಣ್ಣ ಉಪನಾಳ, ಬಸವೇಶ ಮಹಾಂತಶೆಟ್ಟರ, ಅಪ್ಪಣ್ಣ ಸಾಲಿ ಮಾತನಾಡಿದರು.</p>.<p>ಚಂಬಣ್ಣ ಬಾಳಿಕಾಯಿ, ಡಿ.ಬಿ. ಬಳಿಗಾರ, ನಿಂಗಪ್ಪ ಬನ್ನಿ, ಶಾಂತಣ್ಣ ಬಳ್ಳಾರಿ, ನಿಂಗಪ್ಪ ಹುನಗುಂದ, ಹನಮಂತಪ್ಪ ತಳವಾರ, ಎನ್.ಎನ್. ನೆಗಳೂರ, ಬಸಣ್ಣ ಹಂಜಿ, ಮಹಾದೆವಪ್ಪ ಅಣ್ಣಿಗೇರಿ, ಸೋಮಣ್ಣ ಡಾಣಗಲ್ಲ, ವೀರಣ್ಣ ಪವಾಡದ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>