<p><strong>ಗಜೇಂದ್ರಗಡ</strong>: ಸಮೀಪದ ಗೋಗೇರಿ ಗ್ರಾಮದ ಹಲವು ಕಾಲೊನಿಗಳಲ್ಲಿ ಸಿ.ಸಿ ರಸ್ತೆ, ಚರಂಡಿ ವ್ಯವಸ್ಥೆ, ಸ್ವಚ್ಛತೆ ಇಲ್ಲದ ಪರಿಣಾಮ ಅಲ್ಲಿನ ನಿವಾಸಿಗಳು ಪರದಾಡುತ್ತಿದ್ದಾರೆ.</p><p>ಗಜೇಂದ್ರಗಡ– ಕುಷ್ಟಗಿ ಮುಖ್ಯ ರಸ್ತೆಯಿಂದ ಗ್ರಾಮಕ್ಕೆ ಸಂಪರ್ಕಿಸುವ ಡಾಂಬರ್ ರಸ್ತೆ ಹಾಳಾಗಿದ್ದು, ರಸ್ತೆ ತುಂಬ ಗುಂಡಿಗಳು ಬಿದ್ದಿವೆ. ಈ ರಸ್ತೆಯ ಶರಣ ಬಸವೇಶ್ವರ ದೇವಸ್ಥಾನದ ಹತ್ತಿರ ಜನರು ತ್ಯಾಜ್ಯ ಎಸೆಯುತ್ತಿರುವುದರಿಂದ ಆ ಪ್ರದೇಶದಲ್ಲಿ ದುರ್ವಾಸನೆ ಬರುತ್ತಿದೆ.</p><p>ಗ್ರಾಮದಲ್ಲಿ ಹೊರಪೇಟೆ, ಅಂಬಾಭವಾನಿ ಬಡಾವಣೆಗಳಲ್ಲಿ ಸಿ.ಸಿ ರಸ್ತೆ, ಚರಂಡಿ ವ್ಯವಸ್ಥೆ ಇಲ್ಲದ ಪರಿಣಾಮ ಕೊಳಚೆ ನೀರು ಎಲ್ಲೆಂದರಲ್ಲಿ ಹರಿಯುತ್ತಿದೆ. ಗ್ರಾಮದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತಗೊಂಡಿದ್ದು, ಜನರು ಗಜೇಂದ್ರಗಡದಿಂದ ನೀರು ತರಬೇಕಾದ ಅನಿವಾರ್ಯ ಎದುರಾಗಿದೆ.</p><p>ಪಾಟೀಲ ಅವರ ಪ್ಲಾಟ್ನಲ್ಲಿ ಕುಡಿಯುವ ನೀರು, ಬೀದಿ ದೀಪದ ವ್ಯವಸ್ಥೆಯಿಲ್ಲ. ಪ್ರಾಥಮಿಕ ಆರೋಗ್ಯ ಕೇಂದ್ರದ ಸುತ್ತ ಸ್ವಚ್ಛತೆ ಇಲ್ಲದಂತಾಗಿದೆ. ಜನತಾ ಪ್ಲಾಟ್, ನಿಡಗುಂದಿಯವರ ಪ್ಲಾಟ್, ಪಾಟೀಲ ಪ್ಲಾಟ್ನಲ್ಲಿ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆಯಾಗುತ್ತಿಲ್ಲ.</p><p>‘ಹೊರಪೇಟೆಯವರ ಓಣಿ, ಸಿ.ಸಿ ರಸ್ತೆ ನಿರ್ಮಾಣಕ್ಕೆ ಸುಮಾರು ಶಾಸಕರ ವಿಶೇಷ ಅನುದಾನದಲ್ಲಿ ₹70 ಲಕ್ಷಕ್ಕೆ ಟೆಂಡರ್ ಆಗಿದ್ದು, ತಾಂತ್ರಿಕ ತೊಂದರೆಯಿಂದ ವಿಳಂಬವಾಗಿದೆ. ಶೀಘ್ರದಲ್ಲಿಯೇ ಸಿ.ಸಿ ರಸ್ತೆ ನಿರ್ಮಾಣ ಕಾಮಗಾರಿ ಆರಂಭವಾಗಲಿದೆ. ಅಲ್ಲದೆ 15-20 ದಿನಗಳಲ್ಲಿ ಗ್ರಾಮದಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕದಿಂದ ಜನರಿಗೆ ನೀರು ಪೂರೈಸಲಾಗುವುದು’ ಎಂದು ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಅನಿತಾ ಕೊಡತಗೇರಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಜೇಂದ್ರಗಡ</strong>: ಸಮೀಪದ ಗೋಗೇರಿ ಗ್ರಾಮದ ಹಲವು ಕಾಲೊನಿಗಳಲ್ಲಿ ಸಿ.ಸಿ ರಸ್ತೆ, ಚರಂಡಿ ವ್ಯವಸ್ಥೆ, ಸ್ವಚ್ಛತೆ ಇಲ್ಲದ ಪರಿಣಾಮ ಅಲ್ಲಿನ ನಿವಾಸಿಗಳು ಪರದಾಡುತ್ತಿದ್ದಾರೆ.</p><p>ಗಜೇಂದ್ರಗಡ– ಕುಷ್ಟಗಿ ಮುಖ್ಯ ರಸ್ತೆಯಿಂದ ಗ್ರಾಮಕ್ಕೆ ಸಂಪರ್ಕಿಸುವ ಡಾಂಬರ್ ರಸ್ತೆ ಹಾಳಾಗಿದ್ದು, ರಸ್ತೆ ತುಂಬ ಗುಂಡಿಗಳು ಬಿದ್ದಿವೆ. ಈ ರಸ್ತೆಯ ಶರಣ ಬಸವೇಶ್ವರ ದೇವಸ್ಥಾನದ ಹತ್ತಿರ ಜನರು ತ್ಯಾಜ್ಯ ಎಸೆಯುತ್ತಿರುವುದರಿಂದ ಆ ಪ್ರದೇಶದಲ್ಲಿ ದುರ್ವಾಸನೆ ಬರುತ್ತಿದೆ.</p><p>ಗ್ರಾಮದಲ್ಲಿ ಹೊರಪೇಟೆ, ಅಂಬಾಭವಾನಿ ಬಡಾವಣೆಗಳಲ್ಲಿ ಸಿ.ಸಿ ರಸ್ತೆ, ಚರಂಡಿ ವ್ಯವಸ್ಥೆ ಇಲ್ಲದ ಪರಿಣಾಮ ಕೊಳಚೆ ನೀರು ಎಲ್ಲೆಂದರಲ್ಲಿ ಹರಿಯುತ್ತಿದೆ. ಗ್ರಾಮದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತಗೊಂಡಿದ್ದು, ಜನರು ಗಜೇಂದ್ರಗಡದಿಂದ ನೀರು ತರಬೇಕಾದ ಅನಿವಾರ್ಯ ಎದುರಾಗಿದೆ.</p><p>ಪಾಟೀಲ ಅವರ ಪ್ಲಾಟ್ನಲ್ಲಿ ಕುಡಿಯುವ ನೀರು, ಬೀದಿ ದೀಪದ ವ್ಯವಸ್ಥೆಯಿಲ್ಲ. ಪ್ರಾಥಮಿಕ ಆರೋಗ್ಯ ಕೇಂದ್ರದ ಸುತ್ತ ಸ್ವಚ್ಛತೆ ಇಲ್ಲದಂತಾಗಿದೆ. ಜನತಾ ಪ್ಲಾಟ್, ನಿಡಗುಂದಿಯವರ ಪ್ಲಾಟ್, ಪಾಟೀಲ ಪ್ಲಾಟ್ನಲ್ಲಿ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆಯಾಗುತ್ತಿಲ್ಲ.</p><p>‘ಹೊರಪೇಟೆಯವರ ಓಣಿ, ಸಿ.ಸಿ ರಸ್ತೆ ನಿರ್ಮಾಣಕ್ಕೆ ಸುಮಾರು ಶಾಸಕರ ವಿಶೇಷ ಅನುದಾನದಲ್ಲಿ ₹70 ಲಕ್ಷಕ್ಕೆ ಟೆಂಡರ್ ಆಗಿದ್ದು, ತಾಂತ್ರಿಕ ತೊಂದರೆಯಿಂದ ವಿಳಂಬವಾಗಿದೆ. ಶೀಘ್ರದಲ್ಲಿಯೇ ಸಿ.ಸಿ ರಸ್ತೆ ನಿರ್ಮಾಣ ಕಾಮಗಾರಿ ಆರಂಭವಾಗಲಿದೆ. ಅಲ್ಲದೆ 15-20 ದಿನಗಳಲ್ಲಿ ಗ್ರಾಮದಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕದಿಂದ ಜನರಿಗೆ ನೀರು ಪೂರೈಸಲಾಗುವುದು’ ಎಂದು ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಅನಿತಾ ಕೊಡತಗೇರಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>