<p><strong>ನರಗುಂದ: ‘</strong>ನಿತ್ಯ ಯೋಗಾಸನಕ್ಕೆ ಮಾಡಬೇಕು. ಯೋಗದಿಂದ ಸದೃಢ ಆರೋಗ್ಯ ಹೊಂದಲು ಸಾಧ್ಯ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಗುರುನಾಥ್ ಹೂಗಾರ ಹೇಳಿದರು.</p>.<p>ಪಟ್ಟಣದ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ಆಯುಷ್ ಹಾಗೂ ಶಿಕ್ಷಣ ಇಲಾಖೆ ಆಶ್ರಯದಲ್ಲಿ 10ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಬುಧವಾರ ನಡೆದ ಯೋಗೋತ್ಸವ ಹಾಗೂ ಯೋಗ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>‘ಯೋಗದಿಂದ ರೋಗ ದೂರ. ಜಗತ್ತಿಗೆ ಭಾರತ ಯೋಗ ಗುರುವಾಗಿದೆ. ಎಲ್ಲರೂ ಯೋಗಾಭ್ಯಾಸದ ಮೂಲಕ ದೈಹಿಕ ಹಾಗೂ ಮಾನಸಿಕ ಆರೋಗ್ಯ ಹೊಂದಬೇಕು’ ಎಂದರು.</p>.<p>ದೈಹಿಕ ಶಿಕ್ಷಣಾಧಿಕಾರಿ ಎನ್.ಆರ್.ನಿಡಗುಂದಿ ಮಾತನಾಡಿ, ‘10ನೇ ಅಂತರರಾಷ್ಟ್ರೀಯ ಯೋಗ ದಿನವನ್ನು ಸಂಭ್ರಮದಿಂದ ಆಚರಿಸಲು ಸಿದ್ಧತೆ ನಡೆಸಲಾಗಿದೆ. ಇದರ ಪೂರ್ವಭಾವಿಯಾಗಿ ತರಬೇತಿ ನೀಡಲಾಗುತ್ತಿದೆ’ ಎಂದರು.</p>.<p>ಅಧ್ಯಕ್ಷತೆ ವಹಿಸಿ ಮುಖ್ಯ ಶಿಕ್ಷಕ ಎಸ್.ಎಸ್.ಹಿರೇಮಠ ಮಾತನಾಡಿದರು. ತರಬೇತುದಾರರಾಗಿ ಶಿಕ್ಷಕಿ ಭೂಮಿಕಾ ಅಂಗಡಿ ಭಾಗವಹಿಸಿದ್ದರು. ವಿದ್ಯಾರ್ಥಿಗಳಿಂದ ಯೋಗ ಪ್ರದರ್ಶನ ನಡೆಯಿತು. ವೈದ್ಯಾಧಿಕಾರಿಗಳಾದ ಡಾ.ಅನಿತಾ ಉತ್ತೂರ, ಡಾ.ಬಸವರಾಜ ಹಳೆಮ್ಮನವರ ಹಾಗೂ ಶಿಕ್ಷಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನರಗುಂದ: ‘</strong>ನಿತ್ಯ ಯೋಗಾಸನಕ್ಕೆ ಮಾಡಬೇಕು. ಯೋಗದಿಂದ ಸದೃಢ ಆರೋಗ್ಯ ಹೊಂದಲು ಸಾಧ್ಯ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಗುರುನಾಥ್ ಹೂಗಾರ ಹೇಳಿದರು.</p>.<p>ಪಟ್ಟಣದ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ಆಯುಷ್ ಹಾಗೂ ಶಿಕ್ಷಣ ಇಲಾಖೆ ಆಶ್ರಯದಲ್ಲಿ 10ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಬುಧವಾರ ನಡೆದ ಯೋಗೋತ್ಸವ ಹಾಗೂ ಯೋಗ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>‘ಯೋಗದಿಂದ ರೋಗ ದೂರ. ಜಗತ್ತಿಗೆ ಭಾರತ ಯೋಗ ಗುರುವಾಗಿದೆ. ಎಲ್ಲರೂ ಯೋಗಾಭ್ಯಾಸದ ಮೂಲಕ ದೈಹಿಕ ಹಾಗೂ ಮಾನಸಿಕ ಆರೋಗ್ಯ ಹೊಂದಬೇಕು’ ಎಂದರು.</p>.<p>ದೈಹಿಕ ಶಿಕ್ಷಣಾಧಿಕಾರಿ ಎನ್.ಆರ್.ನಿಡಗುಂದಿ ಮಾತನಾಡಿ, ‘10ನೇ ಅಂತರರಾಷ್ಟ್ರೀಯ ಯೋಗ ದಿನವನ್ನು ಸಂಭ್ರಮದಿಂದ ಆಚರಿಸಲು ಸಿದ್ಧತೆ ನಡೆಸಲಾಗಿದೆ. ಇದರ ಪೂರ್ವಭಾವಿಯಾಗಿ ತರಬೇತಿ ನೀಡಲಾಗುತ್ತಿದೆ’ ಎಂದರು.</p>.<p>ಅಧ್ಯಕ್ಷತೆ ವಹಿಸಿ ಮುಖ್ಯ ಶಿಕ್ಷಕ ಎಸ್.ಎಸ್.ಹಿರೇಮಠ ಮಾತನಾಡಿದರು. ತರಬೇತುದಾರರಾಗಿ ಶಿಕ್ಷಕಿ ಭೂಮಿಕಾ ಅಂಗಡಿ ಭಾಗವಹಿಸಿದ್ದರು. ವಿದ್ಯಾರ್ಥಿಗಳಿಂದ ಯೋಗ ಪ್ರದರ್ಶನ ನಡೆಯಿತು. ವೈದ್ಯಾಧಿಕಾರಿಗಳಾದ ಡಾ.ಅನಿತಾ ಉತ್ತೂರ, ಡಾ.ಬಸವರಾಜ ಹಳೆಮ್ಮನವರ ಹಾಗೂ ಶಿಕ್ಷಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>