<p><strong>ಮುಂಡರಗಿ (ಗದಗ ಜಿಲ್ಲೆ):</strong> ಸರ್ಕಾರಿ ಶಾಲೆಯ ಮಕ್ಕಳ ದಾಖಲಾತಿ ವೃದ್ಧಿಸಲು ತಾಲ್ಲೂಕಿನ ಕೇಲೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಎಸ್.ಎಂ.ಪಾಟೀಲ ಅವರು ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಒಂದನೇ ತರಗತಿಗೆ ದಾಖಲಾಗುವ ಪ್ರತಿ ವಿದ್ಯಾರ್ಥಿಗೂ ತಮ್ಮ ಸ್ವಂತ ಖರ್ಚಿನಲ್ಲಿ ತಲಾ ₹1 ಸಾವಿರ ಠೇವಣಿ ಇಡಲು ಮುಂದಾಗಿದ್ದಾರೆ.</p>.<p>ಎಸ್.ಎಂ.ಪಾಟೀಲ ಅವರು ಈ ಮೊದಲು ತಾಲ್ಲೂಕಿನ ಕದಾಂಪೂರ ಗ್ರಾಮದ ಶಾಲಾ ಶಿಕ್ಷಣ ಇಲಾಖೆಯ ಸಮೂಹ ಸಂಪನ್ಮೂಲ ವ್ಯಕ್ತಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಮಂಗಳವಾರವಷ್ಟೇ ಅವರು ತಾಲ್ಲೂಕಿನ ಕೇಲೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕರಾಗಿ ಬಡ್ತಿ ಹೊಂದಿದ್ದಾರೆ. </p>.<p>‘ಪ್ರಸ್ತುತ ವರ್ಷ ಶಾಲೆಯ ಒಂದನೇ ತರಗತಿಗೆ ಎಷ್ಟು ವಿದ್ಯಾರ್ಥಿಗಳು ದಾಖಲಾಗುತ್ತಾರೋ, ಅಷ್ಟೂ ವಿದ್ಯಾರ್ಥಿಗಳಿಗೆ ಠೇವಣಿ ಇಡಲು ನಿರ್ಧರಿಸಿರುವೆ. ಅದಕ್ಕೆ ಅಗತ್ಯವಿರುವ ಹಣವನ್ನು ಶಾಲಾಭಿವೃದ್ಧಿ ಸಮಿತಿ ಪದಾಧಿಕಾರಿಗಳಿಗೆ ನೀಡಿರುವೆ. ಮುಂದಿನ ಐದು ವರ್ಷದವರೆಗೆ ಇದನ್ನು ಮುಂದುವರೆಸುವ ಯೋಜನೆಯಿದೆ’ ಎಂದು ಮುಖ್ಯಶಿಕ್ಷಕ ಎಸ್.ಎಂ.ಪಾಟೀಲ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಮಕ್ಕಳ ಶಿಕ್ಷಣಕ್ಕೆ ಭದ್ರತೆ ಒದಗಿಸುವುದು, ಮಕ್ಕಳಲ್ಲಿ ಉಳಿತಾಯ ಮನೋಭಾವ ಮೂಡಿಸುವುದು ಮತ್ತು ಅವರ ಮಕ್ಕಳ ಭವಿಷ್ಯಕ್ಕೆ ಅಡಿಪಾಯ ಹಾಕುವ ಉದ್ದೇಶವಿದೆ. ಮಕ್ಕಳು ಮತ್ತು ಪೋಷಕರು ಇದರ ಪ್ರಯೋಜನ ಪಡೆಯಬೇಕು’ ಎಂದರು.</p>.<div><blockquote>ಸರ್ಕಾರದ ವೇತನ ಪಡೆದು ಶಿಕ್ಷಕ ವೃತ್ತಿ ಮಾಡುವುದರ ಜೊತೆಗೆ ಮಕ್ಕಳಿಗೆ ಉತ್ತೇಜನ ನೀಡಲು ಸ್ವಂತ ಹಣ ಖರ್ಚು ಮಾಡುತ್ತಿರುವ ಎಸ್.ಎಂ.ಪಾಟೀಲ ಅವರ ಕಾರ್ಯ ಇತರ ಶಿಕ್ಷಕರಿಗೆ ಮಾದರಿಯಾಗಿದೆ </blockquote><span class="attribution">ಗಂಗಾಧರ ಅಣ್ಣಿಗೇರಿ, ಬಿಇಒ ಮುಂಡರಗಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಡರಗಿ (ಗದಗ ಜಿಲ್ಲೆ):</strong> ಸರ್ಕಾರಿ ಶಾಲೆಯ ಮಕ್ಕಳ ದಾಖಲಾತಿ ವೃದ್ಧಿಸಲು ತಾಲ್ಲೂಕಿನ ಕೇಲೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಎಸ್.ಎಂ.ಪಾಟೀಲ ಅವರು ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಒಂದನೇ ತರಗತಿಗೆ ದಾಖಲಾಗುವ ಪ್ರತಿ ವಿದ್ಯಾರ್ಥಿಗೂ ತಮ್ಮ ಸ್ವಂತ ಖರ್ಚಿನಲ್ಲಿ ತಲಾ ₹1 ಸಾವಿರ ಠೇವಣಿ ಇಡಲು ಮುಂದಾಗಿದ್ದಾರೆ.</p>.<p>ಎಸ್.ಎಂ.ಪಾಟೀಲ ಅವರು ಈ ಮೊದಲು ತಾಲ್ಲೂಕಿನ ಕದಾಂಪೂರ ಗ್ರಾಮದ ಶಾಲಾ ಶಿಕ್ಷಣ ಇಲಾಖೆಯ ಸಮೂಹ ಸಂಪನ್ಮೂಲ ವ್ಯಕ್ತಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಮಂಗಳವಾರವಷ್ಟೇ ಅವರು ತಾಲ್ಲೂಕಿನ ಕೇಲೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕರಾಗಿ ಬಡ್ತಿ ಹೊಂದಿದ್ದಾರೆ. </p>.<p>‘ಪ್ರಸ್ತುತ ವರ್ಷ ಶಾಲೆಯ ಒಂದನೇ ತರಗತಿಗೆ ಎಷ್ಟು ವಿದ್ಯಾರ್ಥಿಗಳು ದಾಖಲಾಗುತ್ತಾರೋ, ಅಷ್ಟೂ ವಿದ್ಯಾರ್ಥಿಗಳಿಗೆ ಠೇವಣಿ ಇಡಲು ನಿರ್ಧರಿಸಿರುವೆ. ಅದಕ್ಕೆ ಅಗತ್ಯವಿರುವ ಹಣವನ್ನು ಶಾಲಾಭಿವೃದ್ಧಿ ಸಮಿತಿ ಪದಾಧಿಕಾರಿಗಳಿಗೆ ನೀಡಿರುವೆ. ಮುಂದಿನ ಐದು ವರ್ಷದವರೆಗೆ ಇದನ್ನು ಮುಂದುವರೆಸುವ ಯೋಜನೆಯಿದೆ’ ಎಂದು ಮುಖ್ಯಶಿಕ್ಷಕ ಎಸ್.ಎಂ.ಪಾಟೀಲ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಮಕ್ಕಳ ಶಿಕ್ಷಣಕ್ಕೆ ಭದ್ರತೆ ಒದಗಿಸುವುದು, ಮಕ್ಕಳಲ್ಲಿ ಉಳಿತಾಯ ಮನೋಭಾವ ಮೂಡಿಸುವುದು ಮತ್ತು ಅವರ ಮಕ್ಕಳ ಭವಿಷ್ಯಕ್ಕೆ ಅಡಿಪಾಯ ಹಾಕುವ ಉದ್ದೇಶವಿದೆ. ಮಕ್ಕಳು ಮತ್ತು ಪೋಷಕರು ಇದರ ಪ್ರಯೋಜನ ಪಡೆಯಬೇಕು’ ಎಂದರು.</p>.<div><blockquote>ಸರ್ಕಾರದ ವೇತನ ಪಡೆದು ಶಿಕ್ಷಕ ವೃತ್ತಿ ಮಾಡುವುದರ ಜೊತೆಗೆ ಮಕ್ಕಳಿಗೆ ಉತ್ತೇಜನ ನೀಡಲು ಸ್ವಂತ ಹಣ ಖರ್ಚು ಮಾಡುತ್ತಿರುವ ಎಸ್.ಎಂ.ಪಾಟೀಲ ಅವರ ಕಾರ್ಯ ಇತರ ಶಿಕ್ಷಕರಿಗೆ ಮಾದರಿಯಾಗಿದೆ </blockquote><span class="attribution">ಗಂಗಾಧರ ಅಣ್ಣಿಗೇರಿ, ಬಿಇಒ ಮುಂಡರಗಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>