ನರಗುಂದ: ತಾಲ್ಲೂಕಿನ ಅತಿ ದೊಡ್ಡ ಗ್ರಾಮವಾದ ಕೊಣ್ಣೂರ ಹೋಬಳಿ ಕೂಡ ಹೌದು. ಹುಬ್ಬಳ್ಳಿ– ವಿಜಯಪುರ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿದ್ದರೂ ಈ ಗ್ರಾಮಕ್ಕೆ ಇಂದಿಗೂ ಮೂಲಸೌಲಭ್ಯಗಳು ಮರೀಚಿಕೆಯಾಗಿವೆ. ಚರಂಡಿ ವ್ಯವಸ್ಥೆ ಅಧ್ವಾನದಿಂದ ಕೂಡಿದೆ. ಇದರಿಂದ ರಸ್ತೆ ಮೇಲೆ ಚರಂಡಿ ನೀರು, ನಳದ ನೀರು ಹರಿಯುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸುವ ಗ್ರಾಮಸ್ಥರು, ಸ್ಥಳೀಯ ಆಡಳಿತ ಆದ್ಯತೆ ಮೇರೆಗೆ ಎಲ್ಲೆಡೆ ಕಾಂಕ್ರೀಟ್ ಚರಂಡಿಗಳನ್ನು ನಿರ್ಮಾಣ ಮಾಡಲು ಕ್ರಮವಹಿಸಬೇಕು ಎಂದು ಆಗ್ರಹಿಸುತ್ತಾರೆ.