<p><strong>ರೋಣ</strong>: ‘ಮುಖ್ಯಮಂತ್ರಿಗಳು ಶಾಸಕರಿಗೆ ನೀಡಿದ ₹ 50 ಕೋಟಿ ವಿಶೇಷ ಅನುದಾನದಲ್ಲಿ ಲೋಕೋಪಯೋಗಿ ಇಲಾಖೆಗೆ ಕ್ಷೇತ್ರದಲ್ಲಿ ರಸ್ತೆ ನಿರ್ಮಿಸಲು ₹38 ಕೋಟಿ ನೀಡಲಾಗಿದ್ದು, ಉಳಿದ ₹12 ಕೋಟಿ ಅನುದಾನದಲ್ಲಿ ಅಮೃತ್ ಯೋಜನೆ ಅಡಿ ಪೈಪ್ಲೈನ್ ಅಳವಡಿಸಲು ಪಟ್ಟಣದ ಸಿಸಿ ರಸ್ತೆಗಳನ್ನು ಅಗೆದಿದ್ದು, ರಸ್ತೆಗಳ ಅಭಿವೃದ್ಧಿಗೆ ₹4 ಕೋಟಿ ನೀಡಲಾಗಿದೆ’ ಎಂದು ಶಾಸಕ ಜಿ.ಎಸ್. ಪಾಟೀಲ ಹೇಳಿದರು.</p>.<p>ಪಟ್ಟಣದ ಅಬ್ಬಿಗೇರಿ ರಸ್ತೆಯಲ್ಲಿರುವ ಪುರಸಭೆಯ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಎನ್ಜಿಟಿ ಮತ್ತು ಸ್ವಚ್ಛ ಭಾರತ ಅಭಿಯಾನದಡಿ ₹3.12 ಕೋಟಿ ವೆಚ್ಚದಲ್ಲಿ ಮಲ ತ್ಯಾಜ್ಯ ಸಂಸ್ಕರಣಾ (ಎಫ್ಎಸ್ಟಿಪಿ) ಘಟಕ ನಿರ್ಮಾಣ ಕಾಮಗಾರಿ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.</p>.<p>‘ಪಟ್ಟಣದ ಸ್ವಚ್ಛತೆಗೆ ಪುರಸಭೆ ಆದ್ಯತೆ ನೀಡಬೇಕು. ಮುಂದಿನ 9 ತಿಂಗಳಲ್ಲಿ ಮಲ ತ್ಯಾಜ್ಯ ಸಂಸ್ಕರಣಾ ಘಟಕದ ಕಾಮಗಾರಿ ಪೂರ್ಣಗೊಳಿಸಬೇಕು. ಪಟ್ಟಣದ ಸೌಂದರ್ಯೀಕರಣ ಹೆಚ್ಚಿಸಲು ಹಲವು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, ಮೂಲ ಸೌಕರ್ಯಗಳ ಪೂರೈಕೆಗೆ ಮೊದಲ ಆದ್ಯತೆ ನೀಡಲಾಗುವುದು’ ಎಂದರು.</p>.<p>‘ಸಾಕಷ್ಟು ಭಾರಿ ಅಭಿವೃದ್ಧಿ ಕಾಮಗಾರಿಗಳ ಕುರಿತು ಸಲಹೆ ಹಾಗೂ ಅನುದಾನ ನೀಡಿದರು. ಸಹ ಪುರಸಭೆ ಅಧಿಕಾರಿಗಳು ಉದಾಸಿನ ಮಾಡುತ್ತಿದ್ದಾರೆ. ಅಭಿವೃದ್ಧಿ ವಿಷಯದಲ್ಲಿ ಹುಡುಗಾಟಿಕೆ ಮಾಡುವುದು ಸರಿಯಲ್ಲ ಎಂದು ಪುರಸಭೆ ಮುಖ್ಯಾಧಿಕಾರಿ ರಮೇಶ್ ಹೊಸಮನಿ ವಿರುದ್ಧ ಹರಿಹಾಯ್ದರು.</p>.<p>ಜಿಲ್ಲಾ ಕಾಂಗ್ರೆಸ್ ಮಹಾ ಪ್ರಧಾನ ಕಾರ್ಯದರ್ಶಿ ವಿ.ಬಿ. ಸೋಮಕಟ್ಟಿಮಠ, ಪುರಸಭೆ ಅಧ್ಯಕ್ಷೆ ಬಸಮ್ಮ ಕೊಪ್ಪದ, ಉಪಾಧ್ಯಕ್ಷ ಹನಮಂತಪ್ಪ ತಳ್ಳಿಕೇರಿ, ಸದಸ್ಯರಾದ ಬಾವಾಸಾಬ ಬೆಟಗೇರಿ, ಮಲ್ಲಯ್ಯ ಮಹಾಪುರಷಮಠ, ಸಂಗಪ್ಪ ಜಿಡ್ಡಿಬಾಗಿಲ, ದಾವಲಸಾಬ ಬಾಡಿನ, ದುರಗಪ್ಪ ಹಿರೇಮನಿ, ಚನ್ನಬಸಮ್ಮ ಹಿರೇಮಠ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರೋಣ</strong>: ‘ಮುಖ್ಯಮಂತ್ರಿಗಳು ಶಾಸಕರಿಗೆ ನೀಡಿದ ₹ 50 ಕೋಟಿ ವಿಶೇಷ ಅನುದಾನದಲ್ಲಿ ಲೋಕೋಪಯೋಗಿ ಇಲಾಖೆಗೆ ಕ್ಷೇತ್ರದಲ್ಲಿ ರಸ್ತೆ ನಿರ್ಮಿಸಲು ₹38 ಕೋಟಿ ನೀಡಲಾಗಿದ್ದು, ಉಳಿದ ₹12 ಕೋಟಿ ಅನುದಾನದಲ್ಲಿ ಅಮೃತ್ ಯೋಜನೆ ಅಡಿ ಪೈಪ್ಲೈನ್ ಅಳವಡಿಸಲು ಪಟ್ಟಣದ ಸಿಸಿ ರಸ್ತೆಗಳನ್ನು ಅಗೆದಿದ್ದು, ರಸ್ತೆಗಳ ಅಭಿವೃದ್ಧಿಗೆ ₹4 ಕೋಟಿ ನೀಡಲಾಗಿದೆ’ ಎಂದು ಶಾಸಕ ಜಿ.ಎಸ್. ಪಾಟೀಲ ಹೇಳಿದರು.</p>.<p>ಪಟ್ಟಣದ ಅಬ್ಬಿಗೇರಿ ರಸ್ತೆಯಲ್ಲಿರುವ ಪುರಸಭೆಯ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಎನ್ಜಿಟಿ ಮತ್ತು ಸ್ವಚ್ಛ ಭಾರತ ಅಭಿಯಾನದಡಿ ₹3.12 ಕೋಟಿ ವೆಚ್ಚದಲ್ಲಿ ಮಲ ತ್ಯಾಜ್ಯ ಸಂಸ್ಕರಣಾ (ಎಫ್ಎಸ್ಟಿಪಿ) ಘಟಕ ನಿರ್ಮಾಣ ಕಾಮಗಾರಿ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.</p>.<p>‘ಪಟ್ಟಣದ ಸ್ವಚ್ಛತೆಗೆ ಪುರಸಭೆ ಆದ್ಯತೆ ನೀಡಬೇಕು. ಮುಂದಿನ 9 ತಿಂಗಳಲ್ಲಿ ಮಲ ತ್ಯಾಜ್ಯ ಸಂಸ್ಕರಣಾ ಘಟಕದ ಕಾಮಗಾರಿ ಪೂರ್ಣಗೊಳಿಸಬೇಕು. ಪಟ್ಟಣದ ಸೌಂದರ್ಯೀಕರಣ ಹೆಚ್ಚಿಸಲು ಹಲವು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, ಮೂಲ ಸೌಕರ್ಯಗಳ ಪೂರೈಕೆಗೆ ಮೊದಲ ಆದ್ಯತೆ ನೀಡಲಾಗುವುದು’ ಎಂದರು.</p>.<p>‘ಸಾಕಷ್ಟು ಭಾರಿ ಅಭಿವೃದ್ಧಿ ಕಾಮಗಾರಿಗಳ ಕುರಿತು ಸಲಹೆ ಹಾಗೂ ಅನುದಾನ ನೀಡಿದರು. ಸಹ ಪುರಸಭೆ ಅಧಿಕಾರಿಗಳು ಉದಾಸಿನ ಮಾಡುತ್ತಿದ್ದಾರೆ. ಅಭಿವೃದ್ಧಿ ವಿಷಯದಲ್ಲಿ ಹುಡುಗಾಟಿಕೆ ಮಾಡುವುದು ಸರಿಯಲ್ಲ ಎಂದು ಪುರಸಭೆ ಮುಖ್ಯಾಧಿಕಾರಿ ರಮೇಶ್ ಹೊಸಮನಿ ವಿರುದ್ಧ ಹರಿಹಾಯ್ದರು.</p>.<p>ಜಿಲ್ಲಾ ಕಾಂಗ್ರೆಸ್ ಮಹಾ ಪ್ರಧಾನ ಕಾರ್ಯದರ್ಶಿ ವಿ.ಬಿ. ಸೋಮಕಟ್ಟಿಮಠ, ಪುರಸಭೆ ಅಧ್ಯಕ್ಷೆ ಬಸಮ್ಮ ಕೊಪ್ಪದ, ಉಪಾಧ್ಯಕ್ಷ ಹನಮಂತಪ್ಪ ತಳ್ಳಿಕೇರಿ, ಸದಸ್ಯರಾದ ಬಾವಾಸಾಬ ಬೆಟಗೇರಿ, ಮಲ್ಲಯ್ಯ ಮಹಾಪುರಷಮಠ, ಸಂಗಪ್ಪ ಜಿಡ್ಡಿಬಾಗಿಲ, ದಾವಲಸಾಬ ಬಾಡಿನ, ದುರಗಪ್ಪ ಹಿರೇಮನಿ, ಚನ್ನಬಸಮ್ಮ ಹಿರೇಮಠ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>