<p>ಗದಗ: ‘ಸರ್ಕಾರದ ದ್ವಂದ್ವ ನೀತಿಯಿಂದಾಗಿ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಅತಿಥಿ ಉಪನ್ಯಾಸಕರ ಬದುಕು ಇಂದು ಬೀದಿಗೆ ಬಿದ್ದಿದೆ. ಇದು ಕಾಂಗ್ರೆಸ್ ಸರ್ಕಾರದ ಸಾಧನೆಯಾಗಿದೆ’ ಎಂದು ಜೆಡಿಎಸ್ ರಾಜ್ಯ ವಕ್ತಾರ ವೆಂಕನಗೌಡ ಆರ್. ಗೋವಿಂದಗೌಡ್ರ ಟೀಕಿಸಿದರು.</p>.<p>ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ ವತಿಯಿಂದ ಗದಗ ಜಿಲ್ಲಾಧಿಕಾರಿ ಕಚೇರಿ ಎದುರು ನಾಲ್ಕು ದಿನಗಳಿಂದ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸ್ಥಳಕ್ಕೆ ಗುರುವಾರ ಭೇಟಿ ನೀಡಿ ಮಾತನಾಡಿದರು.</p>.<p>ಭಾರತ ಆಹಾರ ನಿಗಮದ ರಾಜ್ಯ ಸಮಿತಿ ಸದಸ್ಯ ರವಿ ದಂಡಿನ ಮಾತನಾಡಿ, ‘ಚಳಿ– ಬಿಸಿಲೆನ್ನೆದೆ ಪ್ರತಿಭಟನೆ ನಡೆಸುತ್ತಿರುವ ಅತಿಥಿ ಉಪನ್ಯಾಸಕರ ಬಗ್ಗೆ ಅಧಿಕಾರಿ ವರ್ಗಕ್ಕೆ ಕನಿಷ್ಠ ಕಾಳಜಿಯೂ ಇಲ್ಲ. ಅವರಿಗೆ ನ್ಯಾಯ ಒದಗಿಸಬೇಕಿರುವ ಸರ್ಕಾರವೇ ಅನ್ಯಾಯ ಮಾಡುತ್ತಿದೆ’ ಎಂದು ಕಿಡಿಕಾರಿದರು.</p>.<p>ಸಾಮಾಜಿಕ ಹೋರಾಟಗಾರ ರವಿಕಾಂತ ಅಂಗಡಿ, ಪ್ರೊ. ಉಮೇಶ ಹಿರೇಮಠ ಮಾತನಾಡಿದರು.</p>.<p>ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಕಾರರು ಕೆಲಕಾಲ ಹುಬ್ಬಳ್ಳಿ–ಗದಗ ರಸ್ತೆ ತಡೆ ನಡೆಸಿದರು. ಈ ವೇಳೆ ಪೊಲೀಸರು ಮತ್ತು ಪ್ರತಿಭಟನಕಾರರ ನಡುವೆ ಮಾತಿನ ಚಕಮಕಿ ನಡೆಯಿತು.</p>.<p>ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಹುಲಕೋಟಿ ಕೆ.ಎಚ್.ಪಾಟೀಲ ಕಾಲೇಜಿನ ಅತಿಥಿ ಉಪನ್ಯಾಸಕಿ ನೂರಜಹಾನ ಕದಾಂಪುರ ಅಸ್ವಸ್ಥಗೊಂಡರು. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು.</p>.<p>ಬೀದರ್, ಕಲಬುರಗಿ, ಕಾರವಾರ, ಧಾರವಾಡ, ಬಾಗಲಕೋಟೆ, ವಿಜಯನಗರ, ಬಳ್ಳಾರಿ, ಹಾವೇರಿ, ತುಮಕೂರು ಸೇರಿದಂತೆ ವಿವಿಧ ಜಿಲ್ಲೆಗಳಿಂದ ನೂರಾರು ಮಂದಿ ಅತಿಥಿ ಉಪನ್ಯಾಸಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.</p>.<div><blockquote>ನಾಲ್ಕು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದರೂ ಸರ್ಕಾರ ಸ್ಪಂದಿಸಿಲ್ಲ. ಅತಿಥಿ ಉಪನ್ಯಾಸಕರ ಜೀವಕ್ಕೆ ತೊಂದರೆ ಆದರೆ ಅದಕ್ಕೆ ಸರ್ಕಾರವೇ ನೇರ ಹೊಣೆ ಆಗಲಿದೆ </blockquote><span class="attribution">ಪ್ರೊ. ಹನಮಂತಗೌಡ ಆರ್.ಕಲ್ಮನಿ ಸಂಘದ ರಾಜ್ಯ ಘಟಕದ ಅಧ್ಯಕ್ಷ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗದಗ: ‘ಸರ್ಕಾರದ ದ್ವಂದ್ವ ನೀತಿಯಿಂದಾಗಿ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಅತಿಥಿ ಉಪನ್ಯಾಸಕರ ಬದುಕು ಇಂದು ಬೀದಿಗೆ ಬಿದ್ದಿದೆ. ಇದು ಕಾಂಗ್ರೆಸ್ ಸರ್ಕಾರದ ಸಾಧನೆಯಾಗಿದೆ’ ಎಂದು ಜೆಡಿಎಸ್ ರಾಜ್ಯ ವಕ್ತಾರ ವೆಂಕನಗೌಡ ಆರ್. ಗೋವಿಂದಗೌಡ್ರ ಟೀಕಿಸಿದರು.</p>.<p>ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ ವತಿಯಿಂದ ಗದಗ ಜಿಲ್ಲಾಧಿಕಾರಿ ಕಚೇರಿ ಎದುರು ನಾಲ್ಕು ದಿನಗಳಿಂದ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸ್ಥಳಕ್ಕೆ ಗುರುವಾರ ಭೇಟಿ ನೀಡಿ ಮಾತನಾಡಿದರು.</p>.<p>ಭಾರತ ಆಹಾರ ನಿಗಮದ ರಾಜ್ಯ ಸಮಿತಿ ಸದಸ್ಯ ರವಿ ದಂಡಿನ ಮಾತನಾಡಿ, ‘ಚಳಿ– ಬಿಸಿಲೆನ್ನೆದೆ ಪ್ರತಿಭಟನೆ ನಡೆಸುತ್ತಿರುವ ಅತಿಥಿ ಉಪನ್ಯಾಸಕರ ಬಗ್ಗೆ ಅಧಿಕಾರಿ ವರ್ಗಕ್ಕೆ ಕನಿಷ್ಠ ಕಾಳಜಿಯೂ ಇಲ್ಲ. ಅವರಿಗೆ ನ್ಯಾಯ ಒದಗಿಸಬೇಕಿರುವ ಸರ್ಕಾರವೇ ಅನ್ಯಾಯ ಮಾಡುತ್ತಿದೆ’ ಎಂದು ಕಿಡಿಕಾರಿದರು.</p>.<p>ಸಾಮಾಜಿಕ ಹೋರಾಟಗಾರ ರವಿಕಾಂತ ಅಂಗಡಿ, ಪ್ರೊ. ಉಮೇಶ ಹಿರೇಮಠ ಮಾತನಾಡಿದರು.</p>.<p>ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಕಾರರು ಕೆಲಕಾಲ ಹುಬ್ಬಳ್ಳಿ–ಗದಗ ರಸ್ತೆ ತಡೆ ನಡೆಸಿದರು. ಈ ವೇಳೆ ಪೊಲೀಸರು ಮತ್ತು ಪ್ರತಿಭಟನಕಾರರ ನಡುವೆ ಮಾತಿನ ಚಕಮಕಿ ನಡೆಯಿತು.</p>.<p>ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಹುಲಕೋಟಿ ಕೆ.ಎಚ್.ಪಾಟೀಲ ಕಾಲೇಜಿನ ಅತಿಥಿ ಉಪನ್ಯಾಸಕಿ ನೂರಜಹಾನ ಕದಾಂಪುರ ಅಸ್ವಸ್ಥಗೊಂಡರು. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು.</p>.<p>ಬೀದರ್, ಕಲಬುರಗಿ, ಕಾರವಾರ, ಧಾರವಾಡ, ಬಾಗಲಕೋಟೆ, ವಿಜಯನಗರ, ಬಳ್ಳಾರಿ, ಹಾವೇರಿ, ತುಮಕೂರು ಸೇರಿದಂತೆ ವಿವಿಧ ಜಿಲ್ಲೆಗಳಿಂದ ನೂರಾರು ಮಂದಿ ಅತಿಥಿ ಉಪನ್ಯಾಸಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.</p>.<div><blockquote>ನಾಲ್ಕು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದರೂ ಸರ್ಕಾರ ಸ್ಪಂದಿಸಿಲ್ಲ. ಅತಿಥಿ ಉಪನ್ಯಾಸಕರ ಜೀವಕ್ಕೆ ತೊಂದರೆ ಆದರೆ ಅದಕ್ಕೆ ಸರ್ಕಾರವೇ ನೇರ ಹೊಣೆ ಆಗಲಿದೆ </blockquote><span class="attribution">ಪ್ರೊ. ಹನಮಂತಗೌಡ ಆರ್.ಕಲ್ಮನಿ ಸಂಘದ ರಾಜ್ಯ ಘಟಕದ ಅಧ್ಯಕ್ಷ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>