ವಿಜಯನಗರ ಜಿಲ್ಲೆಯ ಹಂಪಿ ವಿರೂಪಾಕ್ಷ ದೇವಾಲಯ ಹತ್ತಿರವಿರುವ ಕೊಟ್ಟೂರೇಶ್ವರ ಸಂಸ್ಥಾನ ಮಠದಲ್ಲಿ ಸುವರ್ಣ ಕರ್ನಾಟಕ ಸಂಭ್ರಮದ ಸವಿನೆನಪಿಗಾಗಿ ನ.19ರಂದು ನಡೆಯಲಿರುವ 3ನೇ ಗುರುಕುಲ ಕಲಾ ಸಮ್ಮೇಳನದಲ್ಲಿ ಬಸವಲಿಂಗ ಸ್ವಾಮೀಜಿ ಸಾನ್ನಿಧ್ಯದಲ್ಲಿ, ಮಾತೆ ಮಂಜಮ್ಮ ಜೋಗತಿ ಇವರ ಗೌರವ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಗುರುಕುಲ ಕಲಾ ಪ್ರತಿಷ್ಠಾನದ ಸಂಸ್ಥಾಪಕ ಅಧ್ಯಕ್ಷ ಹುಲಿಯೂರುದುರ್ಗದ ನಾರಾಯಣ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.