ಕಾಂಗ್ರೆಸ್ ಮುಖಂಡ ಟಿ.ಈಶ್ವರ ಮಾತನಾಡಿ, ‘ಹೊರಟ್ಟಿ ಅವರ ಒಳ ಒಪ್ಪಂದ ಬಿಜೆಪಿಯ ಜಗದೀಶ ಶೆಟ್ಟರ, ಪ್ರಲ್ಹಾದ ಜೋಶಿ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಇದೆ. ಈ ವಿಚಾರ ಜೆಡಿಎಸ್ ವರಿಷ್ಠರಿಗೆ ಗೊತ್ತಿರುವುದರಿಂದಲೇ ಹೊರಟ್ಟಿ ಅವರನ್ನು ಮಂತ್ರಿಗಿರಿಯಿಂದ ದೂರವಿಟ್ಟಿದ್ದಾರೆ. ಪಾಟೀಲರ ವಿರುದ್ಧ ಮಾಡಿರುವ ಆರೋಪಕ್ಕೆ ಹೊರಟ್ಟಿ ನಾಲ್ಕು ದಿನಗಳಲ್ಲಿ ಕ್ಷಮೆ ಕೋರಬೇಕು. ಇಲ್ಲವೇ ಅವರ ರಾಜಕೀಯ ಒಳಒಪ್ಪಂದಗಳನ್ನು ನಾವು ಬಯಲಿಗೆಳೆಯುತ್ತೇವೆ’ ಎಂದರು.