ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿ.ಎಂಗೆ ಶಾಸಕ ಎಚ್‌.ಕೆ. ಪಾಟೀಲ ಪತ್ರ

Last Updated 4 ಡಿಸೆಂಬರ್ 2021, 3:14 IST
ಅಕ್ಷರ ಗಾತ್ರ

ಗದಗ: ವಿಶ್ವದಲ್ಲೆಡೆ ಆತಂಕ ಸೃಷ್ಟಿಸಿರುವ ಓಮೈಕ್ರಾನ್‌ ವೈರಸ್‌ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕಠಿಣ ಕ್ರಮಗಳನ್ನು ಕೈಗೊಳ್ಳುವಂತೆ ಒತ್ತಾಯಿಸಿ ಗದಗ ಶಾಸಕ ಎಚ್‌.ಕೆ.ಪಾಟೀಲ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.

ಮೂರನೇ ಅಲೆ ನಿಯಂತ್ರಣಕ್ಕಾಗಿ ತಕ್ಷಣವೇ ವಾರಾಂತ್ಯ ಕರ್ಫ್ಯೂ, ಉದ್ಯೋಗಿಗಳಿಗೆ ಮನೆಯಿಂದ ಕೆಲಸ ಮಾಡುವ ಸೌಲಭ್ಯ ಜಾರಿಗೊಳಿಸುವಂತೆಯೂ ಅವರು ಆಗ್ರಹಿಸಿದ್ದಾರೆ.

ಓಮೈಕ್ರಾನ್ ವೈರಸ್ ಗಂಭೀರವೋ, ಮಾರಣಾಂತಿಕವೋ ಎಂಬ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ. ಆದರೆ, ಈ ಮೊದಲಿನ ವೈರಸ್‌ಗಳಿಗಿಂತ ಇದು ಹೆಚ್ಚು ಅಪಾಯಕಾರಿ ಎಂದು ತಜ್ಞರು ಎಚ್ಚರಿಸಿದ್ದಾರೆ. ಆದರೂ, ಈ ವಿಚಾರದಲ್ಲಿ ಸರ್ಕಾರ ತ್ವರಿತ ನಿರ್ಧಾರ ತೆಗೆದುಕೊಳ್ಳದೇ ವಿಳಂಬ ಧೋರಣೆ ಅನುಸರಿಸುತ್ತಿದೆ ಎಂದು ದೂರಿದ್ದಾರೆ.

ಓಮೈಕ್ರಾನ್‌ ನಿರ್ವಹಣೆ ವಿಚಾರದಲ್ಲಿ ಸರ್ಕಾರ ಭಯದಿಂದಲೇ ಕೆಲಸ ಮಾಡಬೇಕು. ಅಧಿಕಾರಿ ವರ್ಗವನ್ನು ಯುದ್ಧೋಪಾದಿಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT