‘ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಕೇಂದ್ರ ಸರ್ಕಾರ ಅತಿ ಕಡಿಮೆ ಷೇರುಗಳನ್ನು ಹೊಂದಿರುವ ಕಂಪನಿಗಳನ್ನು ಖಾಸಗೀಕರಣ ಮಾಡುವ ಉದ್ದೇಶವನ್ನಷ್ಟೇ ಹೊಂದಿದ್ದರು. ಆದರೆ, ಪ್ರಧಾನಿ ಮೋದಿ ಅತಿ ಹೆಚ್ಚು ಷೇರು ಹೊಂದಿರುವ ರೈಲ್ವೆ, ವಿಮಾನ ನಿಲ್ದಾಣಗಳು, ಗ್ಯಾಸ್ ಪೈಪ್ ಲೈನ್, ಟೆಲಿಕಾಂ ಸಂಸ್ಥೆಗಳು, ವಿದ್ಯುತ್ ಉತ್ಪಾದನಾ ಕೇಂದ್ರಗಳೆಲ್ಲವನ್ನೂ ಖಾಸಗೀಕರಣ ಮಾಡುವ ಮೂಲಕ ದೇಶದ ಜನರಿಗೆ ದ್ರೋಹ ಮಾಡಿದ್ದಾರೆ’ ಎಂದು ದೂರಿದರು.