<p><strong>ನರೇಗಲ್:</strong> ‘ಜಗತ್ತಿನಲ್ಲಿ ಅನ್ನದಾನ ಮತ್ತು ವಿದ್ಯಾದಾನ ಮಹತ್ವ ಪಡೆದಿವೆ. ಈ ನಿಟ್ಟಿನಲ್ಲಿ ಹಾಲಕೆರೆ ಅನ್ನದಾನೇಶ್ವರ ಸಂಸ್ಥಾನಮಠ ನಿರಂತರ ಸೇವೆ ಸಲ್ಲಿಸುತ್ತ ನಾಡಿನ ಶ್ರೇಷ್ಠ ಮಠಗಳಲ್ಲಿ ಒಂದಾಗಿದೆ’ ಎಂದು ಶಿರಹಟ್ಟಿಯ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು.</p><p>ಸಮೀಪದ ಹಾಲಕೆರೆ ಗ್ರಾಮದಲ್ಲಿ ಬುಧವಾರ ನಡೆದ ಅನ್ನದಾನೇಶ್ವರ ಸಂಸ್ಥಾನ ಮಠದ 174ನೇ ಮಹಾ ರಥೋತ್ಸವ ಹಾಗೂ ನಿವೃತ್ತ ಶಿಕ್ಷಕ ಎಂ.ಎ. ಹಿರೆವಡೆಯರ ಅವರ ಅಭಿನಂದನಾ ಗ್ರಂಥ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.</p><p>‘ಮಠದ ಮುಪ್ಪಿನ ಬಸವಲಿಂಗ ಸ್ವಾಮೀಜಿ ಅವರು ತಮ್ಮ ಗುರು ಲಿಂ. ಅಭಿನವ ಅನ್ನದಾನ ಸ್ವಾಮೀಜಿ ಅವರ ಕನಸನ್ನು ನನಸು ಮಾಡುವಲ್ಲಿ ನಿರಂತರ ಸೇವೆ ಸಲ್ಲಿಸುತ್ತಾದ್ದಾರೆ’ ಎಂದರು.</p><p>ಹಿರೆವಡೆಯರ ಅವರು ಕೇವಲ ಶಿಕ್ಷಕರಾಗಿರದೆ ಉತ್ತಮ ಸಾಹಿತಿ ಕೂಡ ಆಗಿದ್ದಾರೆ. ಕನ್ನಡದ ಪುಸ್ತಕವನ್ನು ಇಂಗ್ಲಿಷ್ ಭಾಷೆಗೆ ಕಡಿಮೆ ಸಮಯದಲ್ಲಿ ಭಾಷಾಂತರ ಮಾಡುವ ಸಾಮರ್ಥ್ಯ ಹೊಂದಿದ್ದಾರೆ. ‘ಒಲವಿನ ಒಡೆಯ ಅಭಿನಂದನಾ ಗ್ರಂಥ’ ಬಿಡುಗಡೆ ಆಗುತ್ತಿರುವುದು ಸಂತಸ ವಿಷಯ’ ಎಂದರು.</p><p>ಹಿರೇಮಠದ ಮಲ್ಲಿಕಾರ್ಜುನ ಶಿವಾಚಾರ್ಯರು ಮಾತನಾಡಿದರು. ಮಠದ ಪೀಠಾಧಿಪತಿ ಮುಪ್ಪಿನ ಬಸವಲಿಂಗ ಸ್ವಾಮೀಜಿ, ಸಿ.ಆರ್. ಯರವಿನತೇಲಿಮಠ, ಎಂ.ಎ. ಹಿರೆವಡೆಯರ, ಶಿವಾನಂದಯ್ಯ ಚರಂತಿಮಠ, ಎಫ್.ಎನ್. ಹುಡೇದ, ಆರ್.ಕೆ. ಗಚ್ಚಿನಮಠ, ಸಂಗಮೇಶ ಹೂಲಗೇರಿ ಇದ್ದರು.</p><p><strong>ಅನ್ನದಾನೇಶ್ವರ ಅದ್ದೂರಿ ರಥೋತ್ಸವ</strong></p><p>ಅನ್ನದಾನೇಶ್ವರ ಸಂಸ್ಥಾನ ಮಠದ ಮಹಾ ರಥೋತ್ಸವ ಬುಧವಾರ ನೂರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನೆರವೇರಿತು. ಹಾಲಕೆರೆ ಮಠದ ಮುಪ್ಪಿನ ಬಸವಲಿಂಗ ಸ್ವಾಮೀಜಿ ರಥೋತ್ಸವಕ್ಕೆ ಚಾಲನೆ ನೀಡಿದರು.</p><p>ಬೆಳಿಗ್ಗೆ 5ಕ್ಕೆ ಕರ್ತೃ ಗದ್ದುಗೆ ರುದ್ರಾಭಿಷೇಕ, ಬಿಲ್ವಾರ್ಚನೆ, ಮಹಾ ಮಂಗಳಾರತಿ, ಮಹಾ ಗಣಾರಾಧನೆ ಸೇರಿದಂತೆ ಅನೇಕ ಧಾರ್ವಿುಕ ಕಾರ್ಯಕ್ರಮ ಜರುಗಿದವು. ಸುತ್ತಲಿನ ಗ್ರಾಮಗಳಿಂದ ಆಗಮಿಸಿದ ಭಕ್ತರು ಸಕಲ ವಾದ್ಯ ಮೇಳದೊಂದಿಗೆ ಪ್ರಮುಖ ಬೀದಿಗಳಲ್ಲಿ ಅಡ್ಡಪಲ್ಲಕ್ಕಿ ಮೆರವಣಿಗೆ ನಡೆಸಿದರು. </p><p>ಭಕ್ತರು ರಥೋತ್ಸವದಲ್ಲಿ ಘೋಷಗಳನ್ನು ಕೂಗಿದರು. ರಥಕ್ಕೆ ಉತ್ತತ್ತಿ, ಬಾಳೆಹಣ್ಣು, ತೆಂಗಿನಕಾಯಿ ನೈವೇದ್ಯ ಅರ್ಪಿಸಿ ಭಕ್ತಿ ಸಮರ್ಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನರೇಗಲ್:</strong> ‘ಜಗತ್ತಿನಲ್ಲಿ ಅನ್ನದಾನ ಮತ್ತು ವಿದ್ಯಾದಾನ ಮಹತ್ವ ಪಡೆದಿವೆ. ಈ ನಿಟ್ಟಿನಲ್ಲಿ ಹಾಲಕೆರೆ ಅನ್ನದಾನೇಶ್ವರ ಸಂಸ್ಥಾನಮಠ ನಿರಂತರ ಸೇವೆ ಸಲ್ಲಿಸುತ್ತ ನಾಡಿನ ಶ್ರೇಷ್ಠ ಮಠಗಳಲ್ಲಿ ಒಂದಾಗಿದೆ’ ಎಂದು ಶಿರಹಟ್ಟಿಯ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು.</p><p>ಸಮೀಪದ ಹಾಲಕೆರೆ ಗ್ರಾಮದಲ್ಲಿ ಬುಧವಾರ ನಡೆದ ಅನ್ನದಾನೇಶ್ವರ ಸಂಸ್ಥಾನ ಮಠದ 174ನೇ ಮಹಾ ರಥೋತ್ಸವ ಹಾಗೂ ನಿವೃತ್ತ ಶಿಕ್ಷಕ ಎಂ.ಎ. ಹಿರೆವಡೆಯರ ಅವರ ಅಭಿನಂದನಾ ಗ್ರಂಥ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.</p><p>‘ಮಠದ ಮುಪ್ಪಿನ ಬಸವಲಿಂಗ ಸ್ವಾಮೀಜಿ ಅವರು ತಮ್ಮ ಗುರು ಲಿಂ. ಅಭಿನವ ಅನ್ನದಾನ ಸ್ವಾಮೀಜಿ ಅವರ ಕನಸನ್ನು ನನಸು ಮಾಡುವಲ್ಲಿ ನಿರಂತರ ಸೇವೆ ಸಲ್ಲಿಸುತ್ತಾದ್ದಾರೆ’ ಎಂದರು.</p><p>ಹಿರೆವಡೆಯರ ಅವರು ಕೇವಲ ಶಿಕ್ಷಕರಾಗಿರದೆ ಉತ್ತಮ ಸಾಹಿತಿ ಕೂಡ ಆಗಿದ್ದಾರೆ. ಕನ್ನಡದ ಪುಸ್ತಕವನ್ನು ಇಂಗ್ಲಿಷ್ ಭಾಷೆಗೆ ಕಡಿಮೆ ಸಮಯದಲ್ಲಿ ಭಾಷಾಂತರ ಮಾಡುವ ಸಾಮರ್ಥ್ಯ ಹೊಂದಿದ್ದಾರೆ. ‘ಒಲವಿನ ಒಡೆಯ ಅಭಿನಂದನಾ ಗ್ರಂಥ’ ಬಿಡುಗಡೆ ಆಗುತ್ತಿರುವುದು ಸಂತಸ ವಿಷಯ’ ಎಂದರು.</p><p>ಹಿರೇಮಠದ ಮಲ್ಲಿಕಾರ್ಜುನ ಶಿವಾಚಾರ್ಯರು ಮಾತನಾಡಿದರು. ಮಠದ ಪೀಠಾಧಿಪತಿ ಮುಪ್ಪಿನ ಬಸವಲಿಂಗ ಸ್ವಾಮೀಜಿ, ಸಿ.ಆರ್. ಯರವಿನತೇಲಿಮಠ, ಎಂ.ಎ. ಹಿರೆವಡೆಯರ, ಶಿವಾನಂದಯ್ಯ ಚರಂತಿಮಠ, ಎಫ್.ಎನ್. ಹುಡೇದ, ಆರ್.ಕೆ. ಗಚ್ಚಿನಮಠ, ಸಂಗಮೇಶ ಹೂಲಗೇರಿ ಇದ್ದರು.</p><p><strong>ಅನ್ನದಾನೇಶ್ವರ ಅದ್ದೂರಿ ರಥೋತ್ಸವ</strong></p><p>ಅನ್ನದಾನೇಶ್ವರ ಸಂಸ್ಥಾನ ಮಠದ ಮಹಾ ರಥೋತ್ಸವ ಬುಧವಾರ ನೂರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನೆರವೇರಿತು. ಹಾಲಕೆರೆ ಮಠದ ಮುಪ್ಪಿನ ಬಸವಲಿಂಗ ಸ್ವಾಮೀಜಿ ರಥೋತ್ಸವಕ್ಕೆ ಚಾಲನೆ ನೀಡಿದರು.</p><p>ಬೆಳಿಗ್ಗೆ 5ಕ್ಕೆ ಕರ್ತೃ ಗದ್ದುಗೆ ರುದ್ರಾಭಿಷೇಕ, ಬಿಲ್ವಾರ್ಚನೆ, ಮಹಾ ಮಂಗಳಾರತಿ, ಮಹಾ ಗಣಾರಾಧನೆ ಸೇರಿದಂತೆ ಅನೇಕ ಧಾರ್ವಿುಕ ಕಾರ್ಯಕ್ರಮ ಜರುಗಿದವು. ಸುತ್ತಲಿನ ಗ್ರಾಮಗಳಿಂದ ಆಗಮಿಸಿದ ಭಕ್ತರು ಸಕಲ ವಾದ್ಯ ಮೇಳದೊಂದಿಗೆ ಪ್ರಮುಖ ಬೀದಿಗಳಲ್ಲಿ ಅಡ್ಡಪಲ್ಲಕ್ಕಿ ಮೆರವಣಿಗೆ ನಡೆಸಿದರು. </p><p>ಭಕ್ತರು ರಥೋತ್ಸವದಲ್ಲಿ ಘೋಷಗಳನ್ನು ಕೂಗಿದರು. ರಥಕ್ಕೆ ಉತ್ತತ್ತಿ, ಬಾಳೆಹಣ್ಣು, ತೆಂಗಿನಕಾಯಿ ನೈವೇದ್ಯ ಅರ್ಪಿಸಿ ಭಕ್ತಿ ಸಮರ್ಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>