<p><strong>ಗಜೇಂದ್ರಗಡ:</strong> ‘ಇಂದಿನ ದುಬಾರಿ ಜೀವನದಲ್ಲಿ ಸಾಲ ಮಾಡಿ ಮದುವೆ ಮಾಡುವುದಕ್ಕಿಂತ ಸರಳ ಸಾಮೂಹಿಕ ವಿವಾಹಗಳಲ್ಲಿ ಮದುವೆ ಮಾಡುವುದರಿಂದ ಹಣ ಉಳಿತಾಯವಾಗುವುದರ ಜೊತೆಗೆ ಸಮಾಜದಲ್ಲಿ ಸಾಮಾರಸ್ಯ ಮೂಡಿಸುತ್ತದೆʼ ಎಂದು ಬಾದಿಮನಾಳ ಶಾಖಾ ಕನಕ ಗುರುಪೀಠದ ಶಿವಸಿದ್ದೇಶ್ವರ ಸ್ವಾಮೀಜಿ ಹೇಳಿದರು.</p>.<p>ಸಮೀಪದ ರಾಜೂರು ಗ್ರಾಮದಲ್ಲಿ ಗುರುವಾರ ನಡೆದ ಬೀರಲಿಂಗೇಶ್ವರ ಪುರಾಣ ಮಹಾಮಂಗಲ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಸಾನಿಧ್ಯ ವಹಿಸಿ ಅವರು ಮಾತನಾಡಿದರು.</p>.<p>ʼಮದುವೆ ಬಳಿಕ ಅತ್ತೆಯಂದಿರುವ ಸೊಸೆಯನ್ನು ಮಗಳಂತೆ ಪ್ರೀತಿಸಿದರೆ ನಿಮ್ಮ ಕುಟುಂಬ ಸಂತೋಷದಿಂದಿರುತ್ತದೆʼ ಎಂದರು.</p>.<p>ಸಾಮೂಹಿಕ ವಿವಾಹದಲ್ಲಿ 6 ಜೋಡಿ ವಧು–ವರರು ದಾಂಪತ್ಯ ಜೀವನಕ್ಕೆ ಕಾಲಿರಿಸಿದರು. ಆಲಮಟ್ಟಿ ಪೂರ್ಣಾನಂ ಆಶ್ರಮ ಸೀತಿಮನಿ ವಶಿಷ್ಟ ಸ್ವಾಮೀಜಿ, ಬೀರಲಿಂಗೇಶ್ವರ ಶಾಸ್ತ್ರಿಗಳು, ಕಳಕಯ್ಯ ಸಾಲಿಮಠ, ವೀರಯ್ಯ ಸಾಲಿಮಠ, ಶಿವಯ್ಯ ಹಿರೇಮಠ, ಶಂಕ್ರಯ್ಯ ಸಾಲಿಮಠ, ವೀರಯ್ಯ ಕಲ್ಮಠ ಸೇರಿದಂತೆ ಇತರರು ಇದ್ದರು.</p>.<p><strong>ಲಘು ರತೋತ್ಸವ</strong>: ಸಂಜೆ ಬೀರಲಿಂಗೇಶ್ವರ ದೇವಸ್ಥಾನದಿಂದ ಗ್ರಾಮ ಪಂಚಾಯ್ತಿ ಹತ್ತಿರವಿರುವ ಪಾದಗಟ್ಟಿವರೆಗೆ ಲಘು ರತೋತ್ಸವ ಹಾಗೂ ಪಾಲಕಿ ಮೆರವಣಿಗೆ ವಿಜೃಂಭಣೆಯಿಂದ ನಡೆಯಿತು. ಸಕಲ ವಾದ್ಯಗಳೊಂದಿಗೆ ಗ್ರಾಮದ ನೂರಾರು ಜನರು ಲಘು ರತೋತ್ಸವದಲ್ಲಿ ಭಾಗವಹಿಸಿ ಭಕ್ತಿ ಸಮರ್ಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಜೇಂದ್ರಗಡ:</strong> ‘ಇಂದಿನ ದುಬಾರಿ ಜೀವನದಲ್ಲಿ ಸಾಲ ಮಾಡಿ ಮದುವೆ ಮಾಡುವುದಕ್ಕಿಂತ ಸರಳ ಸಾಮೂಹಿಕ ವಿವಾಹಗಳಲ್ಲಿ ಮದುವೆ ಮಾಡುವುದರಿಂದ ಹಣ ಉಳಿತಾಯವಾಗುವುದರ ಜೊತೆಗೆ ಸಮಾಜದಲ್ಲಿ ಸಾಮಾರಸ್ಯ ಮೂಡಿಸುತ್ತದೆʼ ಎಂದು ಬಾದಿಮನಾಳ ಶಾಖಾ ಕನಕ ಗುರುಪೀಠದ ಶಿವಸಿದ್ದೇಶ್ವರ ಸ್ವಾಮೀಜಿ ಹೇಳಿದರು.</p>.<p>ಸಮೀಪದ ರಾಜೂರು ಗ್ರಾಮದಲ್ಲಿ ಗುರುವಾರ ನಡೆದ ಬೀರಲಿಂಗೇಶ್ವರ ಪುರಾಣ ಮಹಾಮಂಗಲ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಸಾನಿಧ್ಯ ವಹಿಸಿ ಅವರು ಮಾತನಾಡಿದರು.</p>.<p>ʼಮದುವೆ ಬಳಿಕ ಅತ್ತೆಯಂದಿರುವ ಸೊಸೆಯನ್ನು ಮಗಳಂತೆ ಪ್ರೀತಿಸಿದರೆ ನಿಮ್ಮ ಕುಟುಂಬ ಸಂತೋಷದಿಂದಿರುತ್ತದೆʼ ಎಂದರು.</p>.<p>ಸಾಮೂಹಿಕ ವಿವಾಹದಲ್ಲಿ 6 ಜೋಡಿ ವಧು–ವರರು ದಾಂಪತ್ಯ ಜೀವನಕ್ಕೆ ಕಾಲಿರಿಸಿದರು. ಆಲಮಟ್ಟಿ ಪೂರ್ಣಾನಂ ಆಶ್ರಮ ಸೀತಿಮನಿ ವಶಿಷ್ಟ ಸ್ವಾಮೀಜಿ, ಬೀರಲಿಂಗೇಶ್ವರ ಶಾಸ್ತ್ರಿಗಳು, ಕಳಕಯ್ಯ ಸಾಲಿಮಠ, ವೀರಯ್ಯ ಸಾಲಿಮಠ, ಶಿವಯ್ಯ ಹಿರೇಮಠ, ಶಂಕ್ರಯ್ಯ ಸಾಲಿಮಠ, ವೀರಯ್ಯ ಕಲ್ಮಠ ಸೇರಿದಂತೆ ಇತರರು ಇದ್ದರು.</p>.<p><strong>ಲಘು ರತೋತ್ಸವ</strong>: ಸಂಜೆ ಬೀರಲಿಂಗೇಶ್ವರ ದೇವಸ್ಥಾನದಿಂದ ಗ್ರಾಮ ಪಂಚಾಯ್ತಿ ಹತ್ತಿರವಿರುವ ಪಾದಗಟ್ಟಿವರೆಗೆ ಲಘು ರತೋತ್ಸವ ಹಾಗೂ ಪಾಲಕಿ ಮೆರವಣಿಗೆ ವಿಜೃಂಭಣೆಯಿಂದ ನಡೆಯಿತು. ಸಕಲ ವಾದ್ಯಗಳೊಂದಿಗೆ ಗ್ರಾಮದ ನೂರಾರು ಜನರು ಲಘು ರತೋತ್ಸವದಲ್ಲಿ ಭಾಗವಹಿಸಿ ಭಕ್ತಿ ಸಮರ್ಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>