<p><strong>ಗುತ್ತಲ:</strong> ಗದಗ-ಹೊನ್ನಾಳಿ ರಾಜ್ಯ ಹೆದ್ದಾರಿ ಕಾಮಗಾರಿ ಬಹುತೇಕ ಮುಕ್ತಾಯಗೊಂಡಿದ್ದು ವಾಹನಗಳ ಸಂಚಾರ ಆರಂಭವಾಗಿದೆ.</p>.<p>ಆದರೆ ಕೆಲವು ಸ್ಥಳಗಳಲ್ಲಿ ವೃತ್ತಗಳನ್ನು ನಿರ್ಮಿಸಲಾಗಿದೆ. ಹೆದ್ದಾರಿಗೆ ಅಡ್ಡಲಾಗಿ ಹಾಯ್ದು ಹೋಗಿರುವ ರಸ್ತೆಗಳಲ್ಲಿ ಸೂಚನಾ ಫಲಕಗಳನ್ನು ಹಾಕಿಲ್ಲದ ಕಾರಣ ಅಪಘಾತಗಳು ಸಂಭವಿಸುತ್ತಿವೆ.</p>.<p>ಗುತ್ತಿಗೆದಾರ ಮತ್ತು ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ರಾಜ್ಯ ಹೆದ್ದಾರಿಯಲ್ಲಿ ಅಪಘಾತಗಳು ಸಂಭವಿಸಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>ಪ್ರಾಣ ಹೋಗುವ ಮುನ್ನ ವೃತ್ತಗಳಿಗೆ ಹಾಗೂ ರಸ್ತೆಗಳಲ್ಲಿ ಸೂಚನಾಫಲಕ ಹಾಕಬೇಕು. ಹಂಪ್ಸ್ಗಳನ್ನು ನಿರ್ಮಿಸ ಬೇಕು ಎಂದು ಪಟ್ಟಣದ ಜನರು ಆಗ್ರಹಿಸಿದ್ದಾರೆ.</p>.<p>ಪಟ್ಟಣದ ಹೊರವಲಯದ ಗುತ್ತಲ-ಹಾವನೂರ ರಸ್ತೆಯ ಅಡ್ಡಲಾಗಿ ಹಾಯ್ದು ಹೋಗುವ ಗದಗ- ಹೊನ್ನಾಳಿ ರಾಜ್ಯ ಹೆದ್ದಾರಿಯಲ್ಲಿ ಬೃಹತ್ ಆಕಾರದ ವೃತ್ತವನ್ನು ನಿರ್ಮಾಣ ಮಾಡಿದ್ದಾರೆ.</p>.<p>ವೃತ್ತ ಮತ್ತು ರಸ್ತೆಗಳಲ್ಲಿ ಯಾವುದೇ ಸೂಚನಾ ಫಲಕ ಇಲ್ಲದ ಕಾರಣ ವಾರದ ಹಿಂದೆ ಶಿವಮೊಗ್ಗ ನಗರದ ಕಾರು ಮತ್ತು ಗುತ್ತಲ ಪಟ್ಟಣದ ಕ್ರಷರ್ ಮಧ್ಯೆ ಅಪಘಾತ ಸಂಭವಿಸಿ 6 ಜನ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>ರಾಣೆಬೆನ್ನೂರ ಕಡೆಯಿಂದ ಗದಗ ಕಡೆಗೆ ಹೋಗುವ ವಾಹನಗಳು ವೇಗವಾಗಿ ಹೋಗುತ್ತವೆ. ಹಾವನೂರ ಮತ್ತು ವಿಜಯನಗರ ಹಾಗೂ ಬಳ್ಳಾರಿ ಕಡೆಯಿಂದ ಬರುವ ವಾಹನಗಳ ಚಾಲಕರು ವೃತ್ತದಲ್ಲಿ ನಿಧಾನವಾಗಿ ಚಾಲನೆ ಮಾಡಬೇಕು ಎಂದು ಗುತ್ತಲ ಪಿಎಸ್ಐ ಸೂಚಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-22-640612540</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುತ್ತಲ:</strong> ಗದಗ-ಹೊನ್ನಾಳಿ ರಾಜ್ಯ ಹೆದ್ದಾರಿ ಕಾಮಗಾರಿ ಬಹುತೇಕ ಮುಕ್ತಾಯಗೊಂಡಿದ್ದು ವಾಹನಗಳ ಸಂಚಾರ ಆರಂಭವಾಗಿದೆ.</p>.<p>ಆದರೆ ಕೆಲವು ಸ್ಥಳಗಳಲ್ಲಿ ವೃತ್ತಗಳನ್ನು ನಿರ್ಮಿಸಲಾಗಿದೆ. ಹೆದ್ದಾರಿಗೆ ಅಡ್ಡಲಾಗಿ ಹಾಯ್ದು ಹೋಗಿರುವ ರಸ್ತೆಗಳಲ್ಲಿ ಸೂಚನಾ ಫಲಕಗಳನ್ನು ಹಾಕಿಲ್ಲದ ಕಾರಣ ಅಪಘಾತಗಳು ಸಂಭವಿಸುತ್ತಿವೆ.</p>.<p>ಗುತ್ತಿಗೆದಾರ ಮತ್ತು ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ರಾಜ್ಯ ಹೆದ್ದಾರಿಯಲ್ಲಿ ಅಪಘಾತಗಳು ಸಂಭವಿಸಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>ಪ್ರಾಣ ಹೋಗುವ ಮುನ್ನ ವೃತ್ತಗಳಿಗೆ ಹಾಗೂ ರಸ್ತೆಗಳಲ್ಲಿ ಸೂಚನಾಫಲಕ ಹಾಕಬೇಕು. ಹಂಪ್ಸ್ಗಳನ್ನು ನಿರ್ಮಿಸ ಬೇಕು ಎಂದು ಪಟ್ಟಣದ ಜನರು ಆಗ್ರಹಿಸಿದ್ದಾರೆ.</p>.<p>ಪಟ್ಟಣದ ಹೊರವಲಯದ ಗುತ್ತಲ-ಹಾವನೂರ ರಸ್ತೆಯ ಅಡ್ಡಲಾಗಿ ಹಾಯ್ದು ಹೋಗುವ ಗದಗ- ಹೊನ್ನಾಳಿ ರಾಜ್ಯ ಹೆದ್ದಾರಿಯಲ್ಲಿ ಬೃಹತ್ ಆಕಾರದ ವೃತ್ತವನ್ನು ನಿರ್ಮಾಣ ಮಾಡಿದ್ದಾರೆ.</p>.<p>ವೃತ್ತ ಮತ್ತು ರಸ್ತೆಗಳಲ್ಲಿ ಯಾವುದೇ ಸೂಚನಾ ಫಲಕ ಇಲ್ಲದ ಕಾರಣ ವಾರದ ಹಿಂದೆ ಶಿವಮೊಗ್ಗ ನಗರದ ಕಾರು ಮತ್ತು ಗುತ್ತಲ ಪಟ್ಟಣದ ಕ್ರಷರ್ ಮಧ್ಯೆ ಅಪಘಾತ ಸಂಭವಿಸಿ 6 ಜನ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>ರಾಣೆಬೆನ್ನೂರ ಕಡೆಯಿಂದ ಗದಗ ಕಡೆಗೆ ಹೋಗುವ ವಾಹನಗಳು ವೇಗವಾಗಿ ಹೋಗುತ್ತವೆ. ಹಾವನೂರ ಮತ್ತು ವಿಜಯನಗರ ಹಾಗೂ ಬಳ್ಳಾರಿ ಕಡೆಯಿಂದ ಬರುವ ವಾಹನಗಳ ಚಾಲಕರು ವೃತ್ತದಲ್ಲಿ ನಿಧಾನವಾಗಿ ಚಾಲನೆ ಮಾಡಬೇಕು ಎಂದು ಗುತ್ತಲ ಪಿಎಸ್ಐ ಸೂಚಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-22-640612540</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>