<p><strong>ಶಿರಹಟ್ಟಿ:</strong> ಪಟ್ಟಣ ಸೇರಿದಂತೆ ತಾಲ್ಲೂಕಿನಾದ್ಯಂತ ಬುಧವಾರ ಮಧ್ಯಾಹ್ನ ಒಂದು ಗಂಟೆಯವರೆಗೆ ಉತ್ತಮ ಮಳೆಯಾಗಿದ್ದು, ರೈತರಲ್ಲಿ ಹರ್ಷ ಮೂಡಿಸಿದೆ. ಮಧ್ಯಾಹ್ನ ಸುರಿದ ಭಾರಿ ಮಳೆಗೆ ಜಮೀನುಗಳಲ್ಲಿ ನೀರು ತುಂಬಿಕೊಂಡಿದೆ. ಈಗಾಗಲೇ ಬಿತ್ತನೆ ಮಾಡಿದ ಜಮೀನಿಗೆ ಬೆಳೆಗಳು ಚಿಗುರೊಡೆಯಲು ಈ ಮಳೆ ಸಹಕಾರಿ ಆಗಿದ್ದು, ರೈತರ ಖುಷಿಯನ್ನು ಇಮ್ಮಡಿಗೊಳಿಸಿದೆ. ಪಟ್ಟಣದಲ್ಲಿ ಬೀಜ ಹಾಗೂ ರಸ ಗೊಬ್ಬರ ಖರೀದಿ ಜೋರಾಗಿತ್ತು.</p>.<p>ಶಿರಹಟ್ಟಿ ಬಸ್ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಬೃಹತ್ ಗುಂಡಿ ಬಿದ್ದಿದ್ದು, ಬಸ್ಗಳ ಸಂಚಾರಕ್ಕೆ ಸಂಚಕಾರ ತಂದಿದೆ. ಪ್ರಯಾಣಿಕರು ಈ ರಸ್ತೆ ಮೂಲಕವೇ ಬಸ್ ನಿಲ್ದಾಣಕ್ಕೆ ಹೋಗಬೇಕಾದ ಪರಿಸ್ಥಿತಿ ನಿರ್ಮಾಣ ವಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಈ ರಸ್ತೆಯಲ್ಲಿನ ಗುಂಡಿ ಮುಚ್ಚಿ, ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260604-23-640027051</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಹಟ್ಟಿ:</strong> ಪಟ್ಟಣ ಸೇರಿದಂತೆ ತಾಲ್ಲೂಕಿನಾದ್ಯಂತ ಬುಧವಾರ ಮಧ್ಯಾಹ್ನ ಒಂದು ಗಂಟೆಯವರೆಗೆ ಉತ್ತಮ ಮಳೆಯಾಗಿದ್ದು, ರೈತರಲ್ಲಿ ಹರ್ಷ ಮೂಡಿಸಿದೆ. ಮಧ್ಯಾಹ್ನ ಸುರಿದ ಭಾರಿ ಮಳೆಗೆ ಜಮೀನುಗಳಲ್ಲಿ ನೀರು ತುಂಬಿಕೊಂಡಿದೆ. ಈಗಾಗಲೇ ಬಿತ್ತನೆ ಮಾಡಿದ ಜಮೀನಿಗೆ ಬೆಳೆಗಳು ಚಿಗುರೊಡೆಯಲು ಈ ಮಳೆ ಸಹಕಾರಿ ಆಗಿದ್ದು, ರೈತರ ಖುಷಿಯನ್ನು ಇಮ್ಮಡಿಗೊಳಿಸಿದೆ. ಪಟ್ಟಣದಲ್ಲಿ ಬೀಜ ಹಾಗೂ ರಸ ಗೊಬ್ಬರ ಖರೀದಿ ಜೋರಾಗಿತ್ತು.</p>.<p>ಶಿರಹಟ್ಟಿ ಬಸ್ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಬೃಹತ್ ಗುಂಡಿ ಬಿದ್ದಿದ್ದು, ಬಸ್ಗಳ ಸಂಚಾರಕ್ಕೆ ಸಂಚಕಾರ ತಂದಿದೆ. ಪ್ರಯಾಣಿಕರು ಈ ರಸ್ತೆ ಮೂಲಕವೇ ಬಸ್ ನಿಲ್ದಾಣಕ್ಕೆ ಹೋಗಬೇಕಾದ ಪರಿಸ್ಥಿತಿ ನಿರ್ಮಾಣ ವಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಈ ರಸ್ತೆಯಲ್ಲಿನ ಗುಂಡಿ ಮುಚ್ಚಿ, ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260604-23-640027051</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>