ಸೋಮವಾರ ಲಕ್ಷ್ಮೇಶ್ವರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ‘ನಾನು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಶಿರಹಟ್ಟಿ ತಾಲ್ಲೂಕಿನ ಸುಗ್ನಳ್ಳಿ ಗ್ರಾಮದ ಆಲದಮ್ಮನ ಕೆರೆ ಸೇರಿದಂತೆ ಇನ್ನಿತರ ಅಭಿವೃದ್ಧಿ ಕೆಲಸಗಳಿಗಾಗಿ ₹24 ಕೋಟಿ ಅನುದಾನ ಬಿಡುಗಡೆ ಮಾಡಿದ್ದೆ. ಈ ಹಿನ್ನೆಲೆಯಲ್ಲಿ ಕೆರೆಯ ಭೂಮಿಪೂಜೆಗೆ ಬರಲೇ ಎಂದು ಸಚಿವ ಸಿ.ಸಿ.ಪಾಟೀಲ ಮತ್ತು ಶಾಸಕ ರಾಮಣ್ಣ ಲಮಾಣಿ ಅವರನ್ನು ಕೇಳಿಕೊಂಡಿದ್ದೆ. ಅವರೂ ಬನ್ನಿ ಎಂದು ಆಹ್ವಾನಿಸಿದ್ದರು. ಆದರೆ ಇಂದು ಅವರೇ ಇಲ್ಲ’ ಎಂದು ಕಿಡಿಕಾರಿದರು.