<p>ಗದಗ: ‘ಉತ್ತಮ ಜೀವನಶೈಲಿ, ಆಹಾರಕ್ರಮದಿಂದ ಆರೋಗ್ಯ ಕಾಪಾಡಿಕೊಳ್ಳಬಹುದು’ ಎಂದು ಡಿಎಚ್ಒ ಡಾ. ಎಸ್.ಎಸ್.ನೀಲಗುಂದ ಹೇಳಿದರು.</p>.<p>ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಶ್ರೇಯಸ್ ರಕ್ತ ತಪಸಣಾ ಕೇಂದ್ರದ ಸಹಯೋಗದಲ್ಲಿ ಉದಯ ಕೇಶವನಗರ ಗಣೇಶೋತ್ಸವ ಪ್ರಯುಕ್ತ ಆಯೋಜಿಸಿದ್ದ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಾತನಾಡಿದರು.</p>.<p>‘ದೇಹದಲ್ಲಿ ಹೊಸರಕ್ತ ಉತ್ಪತ್ತಿಯಾಗಲು ವೈದ್ಯರ ಸಲಹೆ ಮೇರೆಗೆ ರಕ್ತದಾನ ಮಾಡಬೇಕು. ಇದರಿಂದ ರಕ್ತದೊತ್ತಡ, ಮಧುಮೇಹ ಸೇರಿದಂತೆ ಇತರೆ ಕಾಯಿಲೆಗಳಿಂದ ದೂರವಿರಬಹುದು. ಅಂಗಾಂಗದಾನ ಶ್ರೇಷ್ಠದಾನ. ಇದರಿಂದ ಹಲವಾರು ಜೀವಗಳನ್ನು ಉಳಿಸಬಹುದು’ ಎಂದು ಹೇಳಿದರು.</p>.<p>ಮುಖಂಡ ಪ್ರಭು ಬುರಬುರೆ ಮಾತನಾಡಿ, ಇಲ್ಲಿನ ಉದ್ಯಾನ ಅಭಿವೃದ್ಧಿಪಡಿಸಲು ಅಗತ್ಯ ಸಹಕಾರ ನೀಡಲಾಗುವುದು ಎಂದರು.</p>.<p>ಮಹೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಡಾ.ಪ್ರಕಾಶ ಗುಂಡೂರ, ಡಾ.ಅರ್ಪಿತಾ ಬಿರಾದಾರ, ಡಾ.ದೇವೇಂದ್ರ, ಜಿ.ಎಂ.ಯಾನಮಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.</p>.<p>ಬಿ.ಪಿ.ಹುಚ್ಚಣ್ಣವರ ಅಧ್ಯಕ್ಷತೆ ವಹಿಸಿದ್ದರು. ಪ್ರಮೋದ ರಾಯಕರ, ದೀಪಕ್ ಕಲ್ಲಣ್ಣವರ, ವಿಶಾಲ ಬಾಕಳೆ, ಮಲ್ಲಿಕಾರ್ಜುನ ತೊಂಡಿಹಾಳ, ಬಸವರಾಜ ನುಗ್ಗಿಕಾರಿ, ಮಾಲಿಪಾಟೀಲ, ಅಮೃತರಾವ್, ವಿರಕ್ತಮಠ ಉಪಸ್ಥಿತರಿದ್ದರು.</p>.<p>ರೇಖಾ ದೀಪಕ್ ಕಲ್ಲಣ್ಣವರ ಅತಿಥಿಗಳನ್ನು ಪರಿಚಯಿಸಿದರು. ಮನಸ್ವಿ ಹಾಗರಕಿ ಪ್ರಾರ್ಥಿಸಿದರು. ಪ್ರಭುಗೌಡ ಪಾಟೀಲ ಸ್ವಾಗತಿಸಿದರು. ಜಿ.ಎಂ.ಯಾನಮಶೆಟ್ಟಿ ನಿರೂಪಿಸಿದರು. ಸಜ್ಜನರ ವಂದಿಸಿದರು. </p>.<p>100ಕ್ಕೂ ಹೆಚ್ಚು ಜನರು ಶಿಬಿರದ ಪ್ರಯೋಜನ ಪಡೆದುಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗದಗ: ‘ಉತ್ತಮ ಜೀವನಶೈಲಿ, ಆಹಾರಕ್ರಮದಿಂದ ಆರೋಗ್ಯ ಕಾಪಾಡಿಕೊಳ್ಳಬಹುದು’ ಎಂದು ಡಿಎಚ್ಒ ಡಾ. ಎಸ್.ಎಸ್.ನೀಲಗುಂದ ಹೇಳಿದರು.</p>.<p>ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಶ್ರೇಯಸ್ ರಕ್ತ ತಪಸಣಾ ಕೇಂದ್ರದ ಸಹಯೋಗದಲ್ಲಿ ಉದಯ ಕೇಶವನಗರ ಗಣೇಶೋತ್ಸವ ಪ್ರಯುಕ್ತ ಆಯೋಜಿಸಿದ್ದ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಾತನಾಡಿದರು.</p>.<p>‘ದೇಹದಲ್ಲಿ ಹೊಸರಕ್ತ ಉತ್ಪತ್ತಿಯಾಗಲು ವೈದ್ಯರ ಸಲಹೆ ಮೇರೆಗೆ ರಕ್ತದಾನ ಮಾಡಬೇಕು. ಇದರಿಂದ ರಕ್ತದೊತ್ತಡ, ಮಧುಮೇಹ ಸೇರಿದಂತೆ ಇತರೆ ಕಾಯಿಲೆಗಳಿಂದ ದೂರವಿರಬಹುದು. ಅಂಗಾಂಗದಾನ ಶ್ರೇಷ್ಠದಾನ. ಇದರಿಂದ ಹಲವಾರು ಜೀವಗಳನ್ನು ಉಳಿಸಬಹುದು’ ಎಂದು ಹೇಳಿದರು.</p>.<p>ಮುಖಂಡ ಪ್ರಭು ಬುರಬುರೆ ಮಾತನಾಡಿ, ಇಲ್ಲಿನ ಉದ್ಯಾನ ಅಭಿವೃದ್ಧಿಪಡಿಸಲು ಅಗತ್ಯ ಸಹಕಾರ ನೀಡಲಾಗುವುದು ಎಂದರು.</p>.<p>ಮಹೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಡಾ.ಪ್ರಕಾಶ ಗುಂಡೂರ, ಡಾ.ಅರ್ಪಿತಾ ಬಿರಾದಾರ, ಡಾ.ದೇವೇಂದ್ರ, ಜಿ.ಎಂ.ಯಾನಮಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.</p>.<p>ಬಿ.ಪಿ.ಹುಚ್ಚಣ್ಣವರ ಅಧ್ಯಕ್ಷತೆ ವಹಿಸಿದ್ದರು. ಪ್ರಮೋದ ರಾಯಕರ, ದೀಪಕ್ ಕಲ್ಲಣ್ಣವರ, ವಿಶಾಲ ಬಾಕಳೆ, ಮಲ್ಲಿಕಾರ್ಜುನ ತೊಂಡಿಹಾಳ, ಬಸವರಾಜ ನುಗ್ಗಿಕಾರಿ, ಮಾಲಿಪಾಟೀಲ, ಅಮೃತರಾವ್, ವಿರಕ್ತಮಠ ಉಪಸ್ಥಿತರಿದ್ದರು.</p>.<p>ರೇಖಾ ದೀಪಕ್ ಕಲ್ಲಣ್ಣವರ ಅತಿಥಿಗಳನ್ನು ಪರಿಚಯಿಸಿದರು. ಮನಸ್ವಿ ಹಾಗರಕಿ ಪ್ರಾರ್ಥಿಸಿದರು. ಪ್ರಭುಗೌಡ ಪಾಟೀಲ ಸ್ವಾಗತಿಸಿದರು. ಜಿ.ಎಂ.ಯಾನಮಶೆಟ್ಟಿ ನಿರೂಪಿಸಿದರು. ಸಜ್ಜನರ ವಂದಿಸಿದರು. </p>.<p>100ಕ್ಕೂ ಹೆಚ್ಚು ಜನರು ಶಿಬಿರದ ಪ್ರಯೋಜನ ಪಡೆದುಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>