<p><strong>ನರಗುಂದ:</strong> ಪಟ್ಟಣ ಸೇರಿದಂತೆ ತಾಲ್ಲೂಕಿನಾದ್ಯಂತ ಶುಕ್ರವಾರ ರಭಸದಿಂದ ಒಂದು ಗಂಟೆಗೂ ಹೆಚ್ಚು ಕಾಲ ಮಳೆ ಸುರಿಯಿತು.</p>.<p>ಮಳೆಯಿಂದ ಕೆಲವು ಬೆಳೆಗಳಿಗೆ ಅನುಕೂಲವಾದರೆ, ಅಲ್ಪಾವಧಿ ಬೆಳೆಯಾದ ಹೆಸರು ಬೆಳೆಗೆ ಕಂಟಕವಾಗಿ ಪರಿಣಮಿಸಿದೆ. ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆ ಶುಕ್ರವಾರ ತುಸು ರಭಸದಿಂದ ಸುರಿಯಿತು. ಇದರಿಂದ ಹೆಚ್ಚಿನ ರೀತಿಯಲ್ಲಿ ಬೆಳೆ ಹಾನಿ ಆಗಿದೆ.</p>.<p>ಹೆಸರು ಬೆಳೆ ಕಟಾವಿಗೆ ಬಂದಿದ್ದು, ಈಗ ಅವುಗಳು ಜಲಾವೃತವಾಗಿ ಹೆಸರು ಕಾಳು ಮೊಳಕೆ ಒಡೆಯುವಂತಹ ಸ್ಥಿತಿ ನಿರ್ಮಾಣವಾಗಿದೆ. ಎಲ್ಲೆಂದರಲ್ಲಿ ಕಟಾವು ಯಂತ್ರಗಳು ಬೀಡು ಬಿಟ್ಟಿವೆ. ಈ ರಭಸದ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದ್ದು ಸಂಜೆ ಹೊತ್ತು ವಿದ್ಯಾರ್ಥಿಗಳು ಶಾಲೆಯಿಂದ ಮರಳಿ ಮನೆಗೆ ತೆರಳಲು ಹರಸಾಹಸ ಪಡಬೇಕಾಯಿತು. ಚರಂಡಿಗಳು ತುಂಬಿ ಹರಿದವು. ಕೆಲವೆಡೆ ಚರಂಡಿ ಕಾಮಗಾರಿ ಆರಂಭಗೊಂಡ ಪರಿಣಾಮ ಪಾದಚಾರಿಗಳು ತೊಂದರೆಗೆ ಒಳಗಾದರು.</p>.<p>ಸುರಕೋಡ ಗ್ರಾಮದಲ್ಲಂತೂ ರಭಸದ ಮಳೆ ಸುರಿಯಿತು. ಹೆಸರು ಬೆಳೆ ಬೆಳೆದ ರೈತರು ತೀವ್ರ ಆತಂಕಗೊಂಡರು. ಇದೇ ರೀತಿ ಮಳೆ ಬಂದರೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ ಎಂದು ರೈತರು ಅವಲತ್ತುಕೊಂಡರು. ಒಟ್ಟಾರೆ ನಿರಂತರ ಮಳೆ ತೊಂದರೆಗೀಡು ಮಾಡಿತು.</p>.<p>ಕೆಲವು ಭಾಗಗಳಲ್ಲಿ ಮಳೆ ಕಡಿಮೆಯಾಗಿದೆ. ಈಗ ಈ ಮಳೆಯಿಂದ ಅನುಕೂಲವಾಗಿದೆ ಎಂದು ಕೆಲವು ರೈತರು ಹೇಳುತ್ತಾರೆ. ಒಟ್ಟಾರೆ ಪ್ರಕೃತಿಯ ಈ ವೈಚಿತ್ರ್ಯಕ್ಕೆ ರೈತರು ಆತಂಕಕ್ಕೆ ಒಳಗಾಗಿದ್ದಾರೆ.</p>.<p>ಅತಿಯಾದ ಮಳೆಯಿಂದ ಬೆಳೆಗಳಿಗೆ ಹಳದಿ ರೋಗ, ತೇವಾಂಶ ಹೆಚ್ಚಳದಿಂದ ಕೊಳೆರೋಗ ಕಾಳು ಉದುರಿ ಮೊಳಕೆ ಕಟ್ಟುವುದು ಸೇರಿದಂತೆ ದುಬಾರಿ ಬೀಜ, ಗೊಬ್ಬರ, ಕೂಲಿ ಮಾಡಿ ಬೆಳೆದಿರುವ ಬೆಳೆಗಳಿಗೆ ಆತಂಕ ತಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನರಗುಂದ:</strong> ಪಟ್ಟಣ ಸೇರಿದಂತೆ ತಾಲ್ಲೂಕಿನಾದ್ಯಂತ ಶುಕ್ರವಾರ ರಭಸದಿಂದ ಒಂದು ಗಂಟೆಗೂ ಹೆಚ್ಚು ಕಾಲ ಮಳೆ ಸುರಿಯಿತು.</p>.<p>ಮಳೆಯಿಂದ ಕೆಲವು ಬೆಳೆಗಳಿಗೆ ಅನುಕೂಲವಾದರೆ, ಅಲ್ಪಾವಧಿ ಬೆಳೆಯಾದ ಹೆಸರು ಬೆಳೆಗೆ ಕಂಟಕವಾಗಿ ಪರಿಣಮಿಸಿದೆ. ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆ ಶುಕ್ರವಾರ ತುಸು ರಭಸದಿಂದ ಸುರಿಯಿತು. ಇದರಿಂದ ಹೆಚ್ಚಿನ ರೀತಿಯಲ್ಲಿ ಬೆಳೆ ಹಾನಿ ಆಗಿದೆ.</p>.<p>ಹೆಸರು ಬೆಳೆ ಕಟಾವಿಗೆ ಬಂದಿದ್ದು, ಈಗ ಅವುಗಳು ಜಲಾವೃತವಾಗಿ ಹೆಸರು ಕಾಳು ಮೊಳಕೆ ಒಡೆಯುವಂತಹ ಸ್ಥಿತಿ ನಿರ್ಮಾಣವಾಗಿದೆ. ಎಲ್ಲೆಂದರಲ್ಲಿ ಕಟಾವು ಯಂತ್ರಗಳು ಬೀಡು ಬಿಟ್ಟಿವೆ. ಈ ರಭಸದ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದ್ದು ಸಂಜೆ ಹೊತ್ತು ವಿದ್ಯಾರ್ಥಿಗಳು ಶಾಲೆಯಿಂದ ಮರಳಿ ಮನೆಗೆ ತೆರಳಲು ಹರಸಾಹಸ ಪಡಬೇಕಾಯಿತು. ಚರಂಡಿಗಳು ತುಂಬಿ ಹರಿದವು. ಕೆಲವೆಡೆ ಚರಂಡಿ ಕಾಮಗಾರಿ ಆರಂಭಗೊಂಡ ಪರಿಣಾಮ ಪಾದಚಾರಿಗಳು ತೊಂದರೆಗೆ ಒಳಗಾದರು.</p>.<p>ಸುರಕೋಡ ಗ್ರಾಮದಲ್ಲಂತೂ ರಭಸದ ಮಳೆ ಸುರಿಯಿತು. ಹೆಸರು ಬೆಳೆ ಬೆಳೆದ ರೈತರು ತೀವ್ರ ಆತಂಕಗೊಂಡರು. ಇದೇ ರೀತಿ ಮಳೆ ಬಂದರೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ ಎಂದು ರೈತರು ಅವಲತ್ತುಕೊಂಡರು. ಒಟ್ಟಾರೆ ನಿರಂತರ ಮಳೆ ತೊಂದರೆಗೀಡು ಮಾಡಿತು.</p>.<p>ಕೆಲವು ಭಾಗಗಳಲ್ಲಿ ಮಳೆ ಕಡಿಮೆಯಾಗಿದೆ. ಈಗ ಈ ಮಳೆಯಿಂದ ಅನುಕೂಲವಾಗಿದೆ ಎಂದು ಕೆಲವು ರೈತರು ಹೇಳುತ್ತಾರೆ. ಒಟ್ಟಾರೆ ಪ್ರಕೃತಿಯ ಈ ವೈಚಿತ್ರ್ಯಕ್ಕೆ ರೈತರು ಆತಂಕಕ್ಕೆ ಒಳಗಾಗಿದ್ದಾರೆ.</p>.<p>ಅತಿಯಾದ ಮಳೆಯಿಂದ ಬೆಳೆಗಳಿಗೆ ಹಳದಿ ರೋಗ, ತೇವಾಂಶ ಹೆಚ್ಚಳದಿಂದ ಕೊಳೆರೋಗ ಕಾಳು ಉದುರಿ ಮೊಳಕೆ ಕಟ್ಟುವುದು ಸೇರಿದಂತೆ ದುಬಾರಿ ಬೀಜ, ಗೊಬ್ಬರ, ಕೂಲಿ ಮಾಡಿ ಬೆಳೆದಿರುವ ಬೆಳೆಗಳಿಗೆ ಆತಂಕ ತಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>