<p><strong>ನರಗುಂದ:</strong> ತಾಲ್ಲೂಕಿನಲ್ಲಿ ಬುಧವಾರ ರಾತ್ರಿ ಮೂರು ತಾಸಿಗೂ ಹೆಚ್ಚು ಕಾಲ ಧಾರಾಕಾರ ಮಳೆ ಸುರಿದ ಪರಿಣಾಮ ಸ್ಥಳಾಂತರಗೊಂಡಿದ್ದ ಬೂದಿಹಾಳ ಗ್ರಾಮ ಮತ್ತೆ ಜಲಾವೃತವಾಗಿದೆ. ಇದರಿಂದ ಅಲ್ಲಿನ ನಿವಾಸಿಗಳು ಅಹೋರಾತ್ರಿ ಮಳೆಯಲ್ಲಿಯೇ ಕಾಲ ಕಳೆದಿದ್ದಾರೆ.</p>.<p>ಪ್ರವಾಹದಿಂದ ತೊಂದರೆ ಅನುಭವಿಸಿ ಆಸರೆ ಮನೆಗಳಿಗೆ ಸ್ಥಳಾಂತರಗೊಂಡರೂ ಇಲ್ಲಿಯೂ ಜಲ ಕಂಟಕ ಎದುರಾಗಿದೆ ಎಂದು ಬೂದಿಹಾಳ ಗ್ರಾಮಸ್ಥರು ಗುರುವಾರ ಆಕ್ರೋಶ ವ್ಯಕ್ತಪಡಿಸಿದರು.</p>.<p>ನೀರು ಮನೆಗಳಿಗೆ ನುಗ್ಗಿ ದವಸ, ಧಾನ್ಯಗಳು, ಮನೆಬಳಕೆ ವಸ್ತುಗಳು ನೀರು ಪಾಲಾಗಿವೆ. ನೀರು ನುಗ್ಗಿದ್ದರಿಂದ ಮನೆಗಳು ವಾಸ ಮಾಡದಂತಹ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಗ್ರಾಮದ ಶಾಲೆಯನ್ನು ಕಾಳಜಿ ಕೇಂದ್ರವಾಗಿ ಪರಿವರ್ತಿಸಿ ಅಲ್ಲಿಯೇ ಉಳಿದುಕೊಳ್ಳಲು ತಾಲ್ಲೂಕು ಆಡಳಿತ ವ್ಯವಸ್ಥೆ ಮಾಡಿದೆ.</p>.<p>ವಿಷಯ ತಿಳಿದ ತಹಶೀಲ್ದಾರ್ ಮಹೇಂದ್ರ ಗುರುವಾರ ಸ್ಥಳಕ್ಕೆ ಭೇಟಿ ನೀಡಿದಾಗ ಬೂದಿಹಾಳ ಗ್ರಾಮಸ್ಥರು ತಹಶೀಲ್ದಾರ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. </p>.<p class="Subhead"><strong>ತಹಶೀಲ್ದಾರ್ಗೆ ಘೇರಾವ್: </strong>‘ಇಡಿ ರಾತ್ರಿ ನಾವು ನೀರಿನಲ್ಲಿ ಕಾಲ ಕಳೆಯುವಂತಾಗಿದೆ. ಹಲವಾರು ಸಲ ಮನವಿ ಮಾಡಿದರೂ ಈ ಸಮಸ್ಯೆ ಪರಿಹಾರ ಮಾಡಿಲ್ಲ’ ಎಂದು ಹರಿಹಾಯ್ದರು. ಈ ಸಮಸ್ಯೆಗೆ ಪರಿಹಾರ ಸೂಚಿಸುವವರೆಗೂ ಇಲ್ಲಿಂದ ಅವರನ್ನು ತೆರಳಲು ಬಿಡುವುದಿಲ್ಲ ಎಂದು ಘೇರಾವು ಹಾಕಿದ ಘಟನೆಯೂ ನಡೆಯಿತು. ಗ್ರಾಮಸ್ಥರು ಸಮಸ್ಯೆಗಳ ಸರಮಾಲೆಯನ್ನೇ ತೆರೆದಿಟ್ಟು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.</p>.<p><strong>ಪರಿಹಾರಕ್ಕೆ ಕ್ರಮ:</strong> ಜಲಾವೃತವಾಗಿದ್ದರ ಬಗ್ಗೆ ಎಲ್ಲ ವಿವರ ಪಡೆಯಲಾಗಿದೆ. ಈ ಸಮಸ್ಯೆ ಪರಿಹಾರಕ್ಕೆ ಜಿಲ್ಲಾಧಿಕಾರಿಗಳಿಗೆ ತಿಳಿಸಲಾಗಿದೆ. ಶೀಘ್ರವೇ ಸಮಸ್ಯೆ ಪರಿಹರಿಸುವುದಾಗಿ ತಹಶೀಲ್ದಾರ್ ಮಹೇಂದ್ರ ಗ್ರಾಮಸ್ಥರನ್ನು ಸಮಾಧಾನಗೊಳಿಸಿದರು.</p>.<p>ಜಿ.ಪಂ. ಅಧ್ಯಕ್ಷ ರಾಜುಗೌಡ ಕೆಂಚನಗೌಡ್ರ ಭೇಟಿ ನೀಡಿ ಸಮಸ್ಯೆ ಆಲಿಸಿದರು. ವಾಸನ ಹೊಸ ಗ್ರಾಮದ ಶೆಡ್ಗಳಿಗೂ ನೀರು ನುಗ್ಗಿದ್ದು ಅಲ್ಲಿಯ ನಿವಾಸಿಗಳು ಕೂಡ ರಾತ್ರಿ ಮಳೆನೀರಿನ ಮಧ್ಯೆಯೇ ಕಾಲ ಕಳೆದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನರಗುಂದ:</strong> ತಾಲ್ಲೂಕಿನಲ್ಲಿ ಬುಧವಾರ ರಾತ್ರಿ ಮೂರು ತಾಸಿಗೂ ಹೆಚ್ಚು ಕಾಲ ಧಾರಾಕಾರ ಮಳೆ ಸುರಿದ ಪರಿಣಾಮ ಸ್ಥಳಾಂತರಗೊಂಡಿದ್ದ ಬೂದಿಹಾಳ ಗ್ರಾಮ ಮತ್ತೆ ಜಲಾವೃತವಾಗಿದೆ. ಇದರಿಂದ ಅಲ್ಲಿನ ನಿವಾಸಿಗಳು ಅಹೋರಾತ್ರಿ ಮಳೆಯಲ್ಲಿಯೇ ಕಾಲ ಕಳೆದಿದ್ದಾರೆ.</p>.<p>ಪ್ರವಾಹದಿಂದ ತೊಂದರೆ ಅನುಭವಿಸಿ ಆಸರೆ ಮನೆಗಳಿಗೆ ಸ್ಥಳಾಂತರಗೊಂಡರೂ ಇಲ್ಲಿಯೂ ಜಲ ಕಂಟಕ ಎದುರಾಗಿದೆ ಎಂದು ಬೂದಿಹಾಳ ಗ್ರಾಮಸ್ಥರು ಗುರುವಾರ ಆಕ್ರೋಶ ವ್ಯಕ್ತಪಡಿಸಿದರು.</p>.<p>ನೀರು ಮನೆಗಳಿಗೆ ನುಗ್ಗಿ ದವಸ, ಧಾನ್ಯಗಳು, ಮನೆಬಳಕೆ ವಸ್ತುಗಳು ನೀರು ಪಾಲಾಗಿವೆ. ನೀರು ನುಗ್ಗಿದ್ದರಿಂದ ಮನೆಗಳು ವಾಸ ಮಾಡದಂತಹ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಗ್ರಾಮದ ಶಾಲೆಯನ್ನು ಕಾಳಜಿ ಕೇಂದ್ರವಾಗಿ ಪರಿವರ್ತಿಸಿ ಅಲ್ಲಿಯೇ ಉಳಿದುಕೊಳ್ಳಲು ತಾಲ್ಲೂಕು ಆಡಳಿತ ವ್ಯವಸ್ಥೆ ಮಾಡಿದೆ.</p>.<p>ವಿಷಯ ತಿಳಿದ ತಹಶೀಲ್ದಾರ್ ಮಹೇಂದ್ರ ಗುರುವಾರ ಸ್ಥಳಕ್ಕೆ ಭೇಟಿ ನೀಡಿದಾಗ ಬೂದಿಹಾಳ ಗ್ರಾಮಸ್ಥರು ತಹಶೀಲ್ದಾರ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. </p>.<p class="Subhead"><strong>ತಹಶೀಲ್ದಾರ್ಗೆ ಘೇರಾವ್: </strong>‘ಇಡಿ ರಾತ್ರಿ ನಾವು ನೀರಿನಲ್ಲಿ ಕಾಲ ಕಳೆಯುವಂತಾಗಿದೆ. ಹಲವಾರು ಸಲ ಮನವಿ ಮಾಡಿದರೂ ಈ ಸಮಸ್ಯೆ ಪರಿಹಾರ ಮಾಡಿಲ್ಲ’ ಎಂದು ಹರಿಹಾಯ್ದರು. ಈ ಸಮಸ್ಯೆಗೆ ಪರಿಹಾರ ಸೂಚಿಸುವವರೆಗೂ ಇಲ್ಲಿಂದ ಅವರನ್ನು ತೆರಳಲು ಬಿಡುವುದಿಲ್ಲ ಎಂದು ಘೇರಾವು ಹಾಕಿದ ಘಟನೆಯೂ ನಡೆಯಿತು. ಗ್ರಾಮಸ್ಥರು ಸಮಸ್ಯೆಗಳ ಸರಮಾಲೆಯನ್ನೇ ತೆರೆದಿಟ್ಟು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.</p>.<p><strong>ಪರಿಹಾರಕ್ಕೆ ಕ್ರಮ:</strong> ಜಲಾವೃತವಾಗಿದ್ದರ ಬಗ್ಗೆ ಎಲ್ಲ ವಿವರ ಪಡೆಯಲಾಗಿದೆ. ಈ ಸಮಸ್ಯೆ ಪರಿಹಾರಕ್ಕೆ ಜಿಲ್ಲಾಧಿಕಾರಿಗಳಿಗೆ ತಿಳಿಸಲಾಗಿದೆ. ಶೀಘ್ರವೇ ಸಮಸ್ಯೆ ಪರಿಹರಿಸುವುದಾಗಿ ತಹಶೀಲ್ದಾರ್ ಮಹೇಂದ್ರ ಗ್ರಾಮಸ್ಥರನ್ನು ಸಮಾಧಾನಗೊಳಿಸಿದರು.</p>.<p>ಜಿ.ಪಂ. ಅಧ್ಯಕ್ಷ ರಾಜುಗೌಡ ಕೆಂಚನಗೌಡ್ರ ಭೇಟಿ ನೀಡಿ ಸಮಸ್ಯೆ ಆಲಿಸಿದರು. ವಾಸನ ಹೊಸ ಗ್ರಾಮದ ಶೆಡ್ಗಳಿಗೂ ನೀರು ನುಗ್ಗಿದ್ದು ಅಲ್ಲಿಯ ನಿವಾಸಿಗಳು ಕೂಡ ರಾತ್ರಿ ಮಳೆನೀರಿನ ಮಧ್ಯೆಯೇ ಕಾಲ ಕಳೆದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>