ಬುಧವಾರ ಸಂಜೆ 5ಕ್ಕೆ ಆರಂಭವಾದ ಬಿರುಗಾಳಿ, ಗುಡುಗು ಸಹಿತ ಮಳೆ ಅರ್ಧ ಗಂಟೆಗಳ ಕಾಲ ಉತ್ತಮವಾಗಿ ಸುರಿಯಿತು. ಬಿರುಗಾಳಿಗೆ ಹಲವು ಮರಗಳು ಧರೆಗೆ ಉರುಳಿದವು. ಸಮೀಪದ ರಾಜೂರ ಗ್ರಾಮದಲ್ಲಿ ಮನೆಯೊಂದರ ಮೇಲೆ ತೆಂಗಿನ ಮರ ಉರುಳಿ ಬಿದ್ದಿದೆ. ಮಹಡಿ ಮನೆಯಾಗಿದ್ದರಿಂದ ಯಾವುದೇ ಹಾನಿಯಾಗಿಲ್ಲ. ಮತ್ತೊಂದು ತೆಂಗಿನ ಮರಕ್ಕೆ ಸಿಡಿಲು ಬಡಿದ ಪರಿಣಾಮ ಮರ ಹೊತ್ತಿ ಉರಿಯಿತು. ನಂತರ ಮಳೆ ಬಂದಿದ್ದರಿಂದ ಬೆಂಕಿ ನಂದಿತು.