<p><strong>ಲಕ್ಷ್ಮೇಶ್ವರ</strong>: ‘ಸ್ವಾತಂತ್ರ್ಯ ಹೋರಾಟದ ಇತಿಹಾಸವನ್ನು ವಿದ್ಯಾರ್ಥಿಗಳು ಓದಬೇಕು. ಇತಿಹಾಸ ಓದದವರು ಹೊಸ ಇತಿಹಾಸ ಸೃಷ್ಟಿಸಲು ಸಾಧ್ಯವಿಲ್ಲ’ ಎಂದು ಬಿಇಒ ಎಚ್.ಎನ್. ನಾಯಕ ಹೇಳಿದರು.</p>.<p>ಇಲ್ಲಿನ ದೂದಪೀರಾಂ ಸರ್ಕಾರಿ ಉರ್ದು ಪ್ರೌಢ ಶಾಲೆಯಲ್ಲಿ ತಾಲ್ಲೂಕು ಆಡಳಿತ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಕಾರ್ಯಾಲಯಗಳ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮಂಗಳವಾರ ಹಮ್ಮಿಕೊಂಡಿದ್ದ ರಸಪ್ರಶ್ನೆ ಸ್ಪರ್ಧೆ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಮುಖ್ಯ ಶಿಕ್ಷಕ ಎಸ್.ಕೆ. ಹವಾಲ್ದಾರ್ ‘ರಸಪ್ರಶ್ನೆ ಸ್ಪರ್ಧೆಗಳು ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸ ತುಂಬುವ ಜತೆಗೆ ಸ್ಪರ್ಧಾತ್ಮಕ ಮನೋಭಾವ ಬೆಳೆಸುತ್ತವೆ’ ಎಂದರು.</p>.<p>ಬಿಆರ್ಪಿ ಈಶ್ವರ ಮೆಡ್ಲೇರಿ ಮಾತನಾಡಿ, ‘ಪ್ರತಿ ವರ್ಷದಂತೆ ಈ ವರ್ಷವು ಪ್ರೌಢಶಾಲೆಗಳಿಗೆ ರಸಪ್ರಶ್ನೆ ಸ್ಪರ್ಧೆ, ಪ್ರಾಥಮಿಕ ವಿಭಾಗಕ್ಕೆ ರಾಷ್ಟ್ರೀಯ ನಾಯಕರು, ದೇಶಭಕ್ತರ ವೇಷಭೂಷಣ ಸ್ಪರ್ಧೆ ಹಾಗೂ ಸ್ವಾತಂತ್ರ್ಯೋತ್ಸವ ಪರೇಡ್, ದೇಶಭಕ್ತಿಯ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದರು.</p>.<p>ಲಕ್ಷ್ಮೇಶ್ವರ ವ್ಯಾಪ್ತಿಯ 15 ಪ್ರೌಢ ಶಾಲಾ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಬಿ.ಸಿ. ಪಟ್ಟೇದ, ಎಸ್ಡಿಎಂಸಿ ಸದಸ್ಯ ರಿಯಾಜ್ ಮಾರಿಹಾಳ, ಸತೀಶ ಬೋಮಲೆ, ಎನ್.ಎ. ಮುಲ್ಲಾ, ಉಮೇಶ ನೇಕಾರ, ಎ.ಐ. ಮಿಯಾನವರ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಕ್ಷ್ಮೇಶ್ವರ</strong>: ‘ಸ್ವಾತಂತ್ರ್ಯ ಹೋರಾಟದ ಇತಿಹಾಸವನ್ನು ವಿದ್ಯಾರ್ಥಿಗಳು ಓದಬೇಕು. ಇತಿಹಾಸ ಓದದವರು ಹೊಸ ಇತಿಹಾಸ ಸೃಷ್ಟಿಸಲು ಸಾಧ್ಯವಿಲ್ಲ’ ಎಂದು ಬಿಇಒ ಎಚ್.ಎನ್. ನಾಯಕ ಹೇಳಿದರು.</p>.<p>ಇಲ್ಲಿನ ದೂದಪೀರಾಂ ಸರ್ಕಾರಿ ಉರ್ದು ಪ್ರೌಢ ಶಾಲೆಯಲ್ಲಿ ತಾಲ್ಲೂಕು ಆಡಳಿತ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಕಾರ್ಯಾಲಯಗಳ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮಂಗಳವಾರ ಹಮ್ಮಿಕೊಂಡಿದ್ದ ರಸಪ್ರಶ್ನೆ ಸ್ಪರ್ಧೆ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಮುಖ್ಯ ಶಿಕ್ಷಕ ಎಸ್.ಕೆ. ಹವಾಲ್ದಾರ್ ‘ರಸಪ್ರಶ್ನೆ ಸ್ಪರ್ಧೆಗಳು ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸ ತುಂಬುವ ಜತೆಗೆ ಸ್ಪರ್ಧಾತ್ಮಕ ಮನೋಭಾವ ಬೆಳೆಸುತ್ತವೆ’ ಎಂದರು.</p>.<p>ಬಿಆರ್ಪಿ ಈಶ್ವರ ಮೆಡ್ಲೇರಿ ಮಾತನಾಡಿ, ‘ಪ್ರತಿ ವರ್ಷದಂತೆ ಈ ವರ್ಷವು ಪ್ರೌಢಶಾಲೆಗಳಿಗೆ ರಸಪ್ರಶ್ನೆ ಸ್ಪರ್ಧೆ, ಪ್ರಾಥಮಿಕ ವಿಭಾಗಕ್ಕೆ ರಾಷ್ಟ್ರೀಯ ನಾಯಕರು, ದೇಶಭಕ್ತರ ವೇಷಭೂಷಣ ಸ್ಪರ್ಧೆ ಹಾಗೂ ಸ್ವಾತಂತ್ರ್ಯೋತ್ಸವ ಪರೇಡ್, ದೇಶಭಕ್ತಿಯ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದರು.</p>.<p>ಲಕ್ಷ್ಮೇಶ್ವರ ವ್ಯಾಪ್ತಿಯ 15 ಪ್ರೌಢ ಶಾಲಾ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಬಿ.ಸಿ. ಪಟ್ಟೇದ, ಎಸ್ಡಿಎಂಸಿ ಸದಸ್ಯ ರಿಯಾಜ್ ಮಾರಿಹಾಳ, ಸತೀಶ ಬೋಮಲೆ, ಎನ್.ಎ. ಮುಲ್ಲಾ, ಉಮೇಶ ನೇಕಾರ, ಎ.ಐ. ಮಿಯಾನವರ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>