ಗದಗ:‘ರಾಜ್ಯದ ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸುವ ಕಾರ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಕುಮ್ಮಕ್ಕು ನೀಡುತ್ತಿದ್ದಾರೆ. ಇದಕ್ಕಾಗಿ ನಡೆಯುತ್ತಿರುವ ಕುದುರೆ ವ್ಯಾಪಾರದಲ್ಲಿ ಸಾಂವಿಧಾನಿಕ ಹುದ್ದೆಯಲ್ಲಿದ್ದ ಮಾಜಿ ಮುಖ್ಯಮಂತ್ರಿ, ಮಾಜಿ ಡಿಸಿಎಂ, ಮಾಜಿ ಗೃಹ ಸಚಿವ, ಕೇಂದ್ರ ಸಚಿವರು ಕೈಜೋಡಿಸಿದ್ದಾರೆ’ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಚ್.ಕೆ. ಪಾಟೀಲ ಆರೋಪಿಸಿದರು.