ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮೇಕೆದಾಟು ವಿಷಯದಲ್ಲಿ ರಾಜ್ಯದ ಮುಖ್ಯಮಂತ್ರಿ ಸರಿಯಾದ ನಿಲುವು ತೆಗೆದುಕೊಂಡಿದ್ದಾರೆ. ಆದರೆ, ಪಕ್ಷದ ಪ್ರಧಾನ ಕಾರ್ಯದರ್ಶಿ ಇದಕ್ಕೆ ವ್ಯತಿರಿಕ್ತವಾಗಿ ನಡೆದುಕೊಂಡಿದ್ದಾರೆ. ಈ ವಿಚಾರದಲ್ಲಿ ಜನರಿಗೆ ದ್ವಂದ್ವ ಮೂಡಿದ್ದು, ಬಿಜೆಪಿ ಪಕ್ಷ ತನ್ನ ನಿಲುವು ಸ್ಪಷ್ಟಪಡಿಸಬೇಕು. ಕೆ.ಅಣ್ಣಾಮಲೈ ಹೇಳಿಕೆ ಬೆಂಬಲಿಸಿ ಮರು ಟ್ವೀಟ್ ಮಾಡಿರುವ ಸಿ.ಟಿ.ರವಿ ತನ್ನ ನಿಲುವು ಬದಲಿಸಿಕೊಂಡು ಕನ್ನಡಿಗರ ಕ್ಷಮೆ ಕೇಳಬೇಕು’ ಎಂದು ಆಗ್ರಹಿಸಿದರು.