ಗದಗಿನ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ಪಿಎಂ ಕೇರ್ ನಿಧಿ ಹಾಗೂ ಘೋಷಣೆ ಮಾಡಿರುವ ಲಕ್ಷಾಂತರ ಕೋಟಿ ಯೋಜನೆಗಳು ಅನುಷ್ಠಾನ ಆಗಿರುವ ಬಗ್ಗೆ ಜನರಿಗೆ ತಿಳಿಸದೇ ಇರುವುದರ ಹಿಂದಿನ ಉದ್ದೇಶ ಸ್ಪಷ್ಟವಾಗಿ ಅರ್ಥ ಆಗುತ್ತದೆ. ಇದು ನಿಜಕ್ಕೂ ದುರ್ದೈವಕರ’ ಎಂದು ಹೇಳಿದರು.