<p><strong>ಗದಗ</strong>: ಟ್ರ್ಯಾಕ್ಟರ್ ರ್ಯಾಲಿ ನಡೆಸಿದ ದಿನದಂದು ಮನವಿ ನೀಡಲು ಜಿಲ್ಲಾಧಿಕಾರಿ ಕಚೇರಿಗೆ ಬಂದಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಕಾನೂನು ಕ್ರಮದ ಎಚ್ಚರಿಕೆಯ ಹೇಳಿಕೆ ನೀಡಿರುವ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿಪಾಟೀಲ ಮಾತಿಗೆ ಕಾಂಗ್ರೆಸ್ ಮುಖಂಡ ಎಚ್.ಕೆ.ಪಾಟೀಲ ಕಿಡಿಕಾರಿದ್ದಾರೆ.</p>.<p>ಸುದ್ದಿಗಾರರೊಂದಿಗೆ ಮಾತನಾಡಿ, ‘ಸಚಿವ ಸಿ.ಸಿ.ಪಾಟೀಲ ಅವರಿಂದ ಈಚೆಗೆ ಹೆದರಿಸುವ ಪ್ರವೃತ್ತಿ ಆರಂಭವಾಗಿದೆ. ದೆಹಲಿಯಲ್ಲಿ ಪ್ರತಿಭಟನೆಯಲ್ಲಿ ತೊಡಗಿರುವ ರೈತರನ್ನು ಪಾಕಿಸ್ತಾನಿ, ಖಲಿಸ್ತಾನಿ ಎಂಬ ಆರೋಪವನ್ನು ಸಚಿವರು ಮಾಡುತ್ತಿದ್ದಾರೆ. ಮನವಿ ನೀಡಲು ಬಂದ ವೇಳೆ ಜಿಲ್ಲಾಧಿಕಾರಿ ಇರಲಿಲ್ಲ. ಆ ಅಧಿಕಾರಿಗಳ ಮೇಲೆ ಕ್ರಮ ತೆಗೆದುಕೊಳ್ಳುವ ಬದಲು, ರೈತರನ್ನು ಹೆದರಿಸುತ್ತಿದ್ದಾರೆ’ ಎಂದು ದೂರಿದರು.</p>.<p>‘ನಾವು ರೈತರು, ಅಂಜುವವರಲ್ಲ. ಗದುಗಿನ ಗಂಡು ಭೂಮಿಯಿಂದ ಬಂದ ನಾವು, ಅಂಜಿ ಓಡಿ ಹೋಗುತ್ತಾರೆ ಅಂದುಕೊಂಡಿದ್ದೀರಾ? ಟ್ರ್ಯಾಕ್ಟರ್ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಗೆ ಬಂದರೆ ತಪ್ಪೇ’ ಎಂದು ಪ್ರಶ್ನಿಸಿದರು.</p>.<p>‘ಡಿಸಿ ಕಚೇರಿಯೊಳಗೆ ಸ್ಯಾಂಡ್ ಮಾಫಿಯಾ ಸೇರಿ ಮತ್ತಿತರ ಅಕ್ರಮಗಳನ್ನು ಮಾಡುವವರು ಬೆಂಜ್ ಕಾರಿನಲ್ಲಿ ಬರಬಹುದು. ಆದರೆ, ರೈತರು ಟ್ರ್ಯಾಕ್ಟರ್ ರ್ಯಾಲಿ ಮೂಲಕ ಡಿಸಿ ಕಚೇರಿಗೆ ಬಂದರೆ ತಪ್ಪು ಎನ್ನುವುದಾದರೆ ಕ್ರಮಕೈಗೊಳ್ಳಲಿ’ ಎಂದು ಸವಾಲು ಹಾಕಿದರು.</p>.<p>ಈ ವೇಳೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ಕುಮಾರ್ ಕಟೀಲ್ ವಿರುದ್ಧ ಸಹ ಹರಿಹಾಯ್ದು ಎಚ್.ಕೆ.ಪಾಟೀಲ, ‘ನಿಮ್ಮ ಸರ್ಕಾರ ನುಡಿದಂತೆ ನಡೆಯಲಿಲ್ಲ. ಮಾತು ತಪ್ಪಿದ ಭ್ರಷ್ಟ ಸರ್ಕಾರ ಅಂತ ಒಪ್ಪಿಕೊಂಡಿದ್ದೀರಿ ಎಂಬ ಭಾವನೆ ನಮ್ಮದು’ ಅಂತ ಅಣಕಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ</strong>: ಟ್ರ್ಯಾಕ್ಟರ್ ರ್ಯಾಲಿ ನಡೆಸಿದ ದಿನದಂದು ಮನವಿ ನೀಡಲು ಜಿಲ್ಲಾಧಿಕಾರಿ ಕಚೇರಿಗೆ ಬಂದಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಕಾನೂನು ಕ್ರಮದ ಎಚ್ಚರಿಕೆಯ ಹೇಳಿಕೆ ನೀಡಿರುವ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿಪಾಟೀಲ ಮಾತಿಗೆ ಕಾಂಗ್ರೆಸ್ ಮುಖಂಡ ಎಚ್.ಕೆ.ಪಾಟೀಲ ಕಿಡಿಕಾರಿದ್ದಾರೆ.</p>.<p>ಸುದ್ದಿಗಾರರೊಂದಿಗೆ ಮಾತನಾಡಿ, ‘ಸಚಿವ ಸಿ.ಸಿ.ಪಾಟೀಲ ಅವರಿಂದ ಈಚೆಗೆ ಹೆದರಿಸುವ ಪ್ರವೃತ್ತಿ ಆರಂಭವಾಗಿದೆ. ದೆಹಲಿಯಲ್ಲಿ ಪ್ರತಿಭಟನೆಯಲ್ಲಿ ತೊಡಗಿರುವ ರೈತರನ್ನು ಪಾಕಿಸ್ತಾನಿ, ಖಲಿಸ್ತಾನಿ ಎಂಬ ಆರೋಪವನ್ನು ಸಚಿವರು ಮಾಡುತ್ತಿದ್ದಾರೆ. ಮನವಿ ನೀಡಲು ಬಂದ ವೇಳೆ ಜಿಲ್ಲಾಧಿಕಾರಿ ಇರಲಿಲ್ಲ. ಆ ಅಧಿಕಾರಿಗಳ ಮೇಲೆ ಕ್ರಮ ತೆಗೆದುಕೊಳ್ಳುವ ಬದಲು, ರೈತರನ್ನು ಹೆದರಿಸುತ್ತಿದ್ದಾರೆ’ ಎಂದು ದೂರಿದರು.</p>.<p>‘ನಾವು ರೈತರು, ಅಂಜುವವರಲ್ಲ. ಗದುಗಿನ ಗಂಡು ಭೂಮಿಯಿಂದ ಬಂದ ನಾವು, ಅಂಜಿ ಓಡಿ ಹೋಗುತ್ತಾರೆ ಅಂದುಕೊಂಡಿದ್ದೀರಾ? ಟ್ರ್ಯಾಕ್ಟರ್ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಗೆ ಬಂದರೆ ತಪ್ಪೇ’ ಎಂದು ಪ್ರಶ್ನಿಸಿದರು.</p>.<p>‘ಡಿಸಿ ಕಚೇರಿಯೊಳಗೆ ಸ್ಯಾಂಡ್ ಮಾಫಿಯಾ ಸೇರಿ ಮತ್ತಿತರ ಅಕ್ರಮಗಳನ್ನು ಮಾಡುವವರು ಬೆಂಜ್ ಕಾರಿನಲ್ಲಿ ಬರಬಹುದು. ಆದರೆ, ರೈತರು ಟ್ರ್ಯಾಕ್ಟರ್ ರ್ಯಾಲಿ ಮೂಲಕ ಡಿಸಿ ಕಚೇರಿಗೆ ಬಂದರೆ ತಪ್ಪು ಎನ್ನುವುದಾದರೆ ಕ್ರಮಕೈಗೊಳ್ಳಲಿ’ ಎಂದು ಸವಾಲು ಹಾಕಿದರು.</p>.<p>ಈ ವೇಳೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ಕುಮಾರ್ ಕಟೀಲ್ ವಿರುದ್ಧ ಸಹ ಹರಿಹಾಯ್ದು ಎಚ್.ಕೆ.ಪಾಟೀಲ, ‘ನಿಮ್ಮ ಸರ್ಕಾರ ನುಡಿದಂತೆ ನಡೆಯಲಿಲ್ಲ. ಮಾತು ತಪ್ಪಿದ ಭ್ರಷ್ಟ ಸರ್ಕಾರ ಅಂತ ಒಪ್ಪಿಕೊಂಡಿದ್ದೀರಿ ಎಂಬ ಭಾವನೆ ನಮ್ಮದು’ ಅಂತ ಅಣಕಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>