<p><strong>ಗದಗ:</strong> ‘ವಿದ್ಯಾರ್ಥಿಗಳು ಒಳ್ಳೆಯ ಜನರ ಜತೆಗೆ ಸ್ನೇಹ ಮಾಡಬೇಕು. ತಂದೆ ತಾಯಿಯನ್ನು ಗೌರವಿಸುವ ಗುಣ ಬೆಳೆಸಿಕೊಳ್ಳಬೇಕು. ಉತ್ತಮ ಜೀವನಶೈಲಿ, ಆಹಾರ ಪದ್ಧತಿ ರೂಢಿಸಿಕೊಳ್ಳುವ ಮೂಲಕ ಉತ್ತಮ ಆರೋಗ್ಯ ಹೊಂದಬೇಕು’ ಎಂದು ಜಿಮ್ಸ್ನ ವೈದ್ಯ ಡಾ. ಅರವಿಂದ ಕರಿನಾಗಣ್ಣವರ ಹೇಳಿದರು.</p>.<p>ತಾಲ್ಲೂಕಿನ ಹುಲಕೋಟಿ ಗ್ರಾಮದ ಆರ್ಟಿಇ ಸೊಸೈಟಿಯ ರೂರಲ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಬುಧವಾರ ನಡೆದ ಇಂಡಕ್ಷನ್ ಪ್ರೋಗ್ರಾಂ ಉದ್ಘಾಟಿಸಿ ಮಾತನಾಡಿದರು.</p>.<p>ವಿದ್ಯಾರ್ಥಿಗಳು ದುಷ್ಟ ಚಟಗಳಿಂದ ದೂರವಿದ್ದು, ಉತ್ತಮ ಆಲೋಚನೆ ಹೊಂದಬೇಕು. ಸಂಸ್ಕಾರಯುತ ಗುಣ ಬೆಳೆಸಿಕೊಂಡು ಉತ್ತಮ ನಾಗರಿಕರಾಗಬೇಕು ಎಂದು ತಿಳಿಸಿದರು.</p>.<p>ಪ್ರಾಂಶುಪಾಲ ಕೆ.ಎಚ್.ಓದುಗೌಡ ಮಾತನಾಡಿ, ‘ಡಾ. ಅರವಿಂದ ಕರಿನಾಗಣ್ಣವರ ಅವರು ಇವರೆಗೆ ಸುಮಾರು 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ದುಶ್ಚಟಗಳಿಂದ ಮುಕ್ತರಾಗಿಸಿದ್ದಾರೆ. ಅವರ ಈ ಕೆಲಸಕ್ಕೆ ಭಾರತೀಯ ವೈದ್ಯಕೀಯ ಸಂಘವು ‘ಡಾ. ಕೇತನ ದೇಸಾಯಿ ಯುವ ನಾಯಕ ಪ್ರಶಸ್ತಿ’ ನೀಡಿ ಗೌರವಿಸಿದೆ’’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>ಪ್ರೊ. ಟಿ.ಜಿ.ಕಾಟೆವಾಲ್, ಪ್ರೊ. ಎಸ್. ವೈ.ಅಗಸನಕೊಪ್ಪ. ಪ್ರೊ. ಮಂಜುನಾಥ ಎಚ್.ಓ. ಮತ್ತು ಪ್ರಥಮ ವರ್ಷದ ವಿದ್ಯಾರ್ಥಿಗಳು ಹಾಗೂ ಪಾಲಿಟೆಕ್ನಿಕ್ ಕಾಲೇಜಿನ ಸಿಬ್ಬಂದಿ ಪಾಲ್ಗೊಂಡಿದ್ದರು.</p>.<p>ಟೆಕ್ಸ್ಟೈಲ್ ವಿಭಾಗದ ಮುಖ್ಯಸ್ಥ ಎನ್.ಎಸ್.ಬೊಮ್ಮಣ್ಣಿ ಕಾರ್ಯಕ್ರಮ ನಿರೂಪಿಸಿದರು. ಎಂ.ಕೆ.ಪಾಟೀಲ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ:</strong> ‘ವಿದ್ಯಾರ್ಥಿಗಳು ಒಳ್ಳೆಯ ಜನರ ಜತೆಗೆ ಸ್ನೇಹ ಮಾಡಬೇಕು. ತಂದೆ ತಾಯಿಯನ್ನು ಗೌರವಿಸುವ ಗುಣ ಬೆಳೆಸಿಕೊಳ್ಳಬೇಕು. ಉತ್ತಮ ಜೀವನಶೈಲಿ, ಆಹಾರ ಪದ್ಧತಿ ರೂಢಿಸಿಕೊಳ್ಳುವ ಮೂಲಕ ಉತ್ತಮ ಆರೋಗ್ಯ ಹೊಂದಬೇಕು’ ಎಂದು ಜಿಮ್ಸ್ನ ವೈದ್ಯ ಡಾ. ಅರವಿಂದ ಕರಿನಾಗಣ್ಣವರ ಹೇಳಿದರು.</p>.<p>ತಾಲ್ಲೂಕಿನ ಹುಲಕೋಟಿ ಗ್ರಾಮದ ಆರ್ಟಿಇ ಸೊಸೈಟಿಯ ರೂರಲ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಬುಧವಾರ ನಡೆದ ಇಂಡಕ್ಷನ್ ಪ್ರೋಗ್ರಾಂ ಉದ್ಘಾಟಿಸಿ ಮಾತನಾಡಿದರು.</p>.<p>ವಿದ್ಯಾರ್ಥಿಗಳು ದುಷ್ಟ ಚಟಗಳಿಂದ ದೂರವಿದ್ದು, ಉತ್ತಮ ಆಲೋಚನೆ ಹೊಂದಬೇಕು. ಸಂಸ್ಕಾರಯುತ ಗುಣ ಬೆಳೆಸಿಕೊಂಡು ಉತ್ತಮ ನಾಗರಿಕರಾಗಬೇಕು ಎಂದು ತಿಳಿಸಿದರು.</p>.<p>ಪ್ರಾಂಶುಪಾಲ ಕೆ.ಎಚ್.ಓದುಗೌಡ ಮಾತನಾಡಿ, ‘ಡಾ. ಅರವಿಂದ ಕರಿನಾಗಣ್ಣವರ ಅವರು ಇವರೆಗೆ ಸುಮಾರು 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ದುಶ್ಚಟಗಳಿಂದ ಮುಕ್ತರಾಗಿಸಿದ್ದಾರೆ. ಅವರ ಈ ಕೆಲಸಕ್ಕೆ ಭಾರತೀಯ ವೈದ್ಯಕೀಯ ಸಂಘವು ‘ಡಾ. ಕೇತನ ದೇಸಾಯಿ ಯುವ ನಾಯಕ ಪ್ರಶಸ್ತಿ’ ನೀಡಿ ಗೌರವಿಸಿದೆ’’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>ಪ್ರೊ. ಟಿ.ಜಿ.ಕಾಟೆವಾಲ್, ಪ್ರೊ. ಎಸ್. ವೈ.ಅಗಸನಕೊಪ್ಪ. ಪ್ರೊ. ಮಂಜುನಾಥ ಎಚ್.ಓ. ಮತ್ತು ಪ್ರಥಮ ವರ್ಷದ ವಿದ್ಯಾರ್ಥಿಗಳು ಹಾಗೂ ಪಾಲಿಟೆಕ್ನಿಕ್ ಕಾಲೇಜಿನ ಸಿಬ್ಬಂದಿ ಪಾಲ್ಗೊಂಡಿದ್ದರು.</p>.<p>ಟೆಕ್ಸ್ಟೈಲ್ ವಿಭಾಗದ ಮುಖ್ಯಸ್ಥ ಎನ್.ಎಸ್.ಬೊಮ್ಮಣ್ಣಿ ಕಾರ್ಯಕ್ರಮ ನಿರೂಪಿಸಿದರು. ಎಂ.ಕೆ.ಪಾಟೀಲ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>