ನಗರದಲ್ಲಿ ಗುರುವಾರ ಮಾಧ್ಯಮ ಪ್ರತಿನಿಧಿಗಳ ಜತೆಗೆ ಮಾತನಾಡಿದ ಅವರು, ‘ಗದಗ ಜಿಲ್ಲೆಯಲ್ಲಿ ಎರಡನೇ ಅಲೆ ಸಂದರ್ಭದಲ್ಲಿ 1,381 ಮಕ್ಕಳಿಗೆ ಸೋಂಕು ತಗುಲಿದೆ. ಆದರೆ, ಈ ವಿಚಾರವನ್ನು ಇವತ್ತಿನವರೆಗೆ ಸ್ಥಳೀಯ ಶಾಸಕರು, ಸಾರ್ವಜನಿಕರು ಅಥವಾ ಮಾಧ್ಯಮದವರಿಗೆ ತಿಳಿಸಿರಲಿಲ್ಲ’ ಎಂದು ಅವರು ಜಿಲ್ಲಾಡಳಿತದ ವಿರುದ್ಧ ಹರಿಹಾಯ್ದರು.