<p><strong>ಗಜೇಂದ್ರಗಡ:</strong> ‘ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವ ದೇಶದಲ್ಲಿ ಮತದಾನದ ಪಾತ್ರ ಮಹತ್ವದ್ದಾಗಿದೆ’ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಕಂದಕೂರ ಹೇಳಿದರು.</p>.<p>ಪಟ್ಟಣದ ಎಸ್.ಎಂ. ಭೂಮರಡ್ಡಿ ಕಾಲೇಜಿನಲ್ಲಿ ತಾಲ್ಲೂಕು ಸ್ವೀಪ್ ಸಮಿತಿ, ತಾಲ್ಲೂಕು ಆಡಳಿತ, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ, ಎಸ್.ಎಂ. ಭೂಮರಡ್ಡಿ ಪಿಯು ಕಾಲೇಜು ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಮತದಾರರ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಮತದಾನ ಮೂಲಕ ದೇಶದ ಪ್ರಗತಿಗೆ ಶ್ರಮಿಸುವ ಜನ ನಾಯಕರನ್ನು ಆಯ್ಕೆ ಮಾಡಲು ಸಂವಿಧಾನ ಪ್ರತಿಯೊಬ್ಬ ನಾಗರಿಕರಿಗೂ ಅವಕಾಶ ಕಲ್ಪಿಸಿದೆ. ಮತದಾರರು ಯಾವುದೇ ಆಮಿಷಗಳಿಗೆ ಬಲಿಯಾಗದೆ ಸೂಕ್ತ ವ್ಯಕ್ತಿಯನ್ನು ಆಯ್ಕೆ ಮಾಡಬೇಕು’ ಎಂದರು.</p>.<p>ತಹಶೀಲ್ದಾರ್ ಕಿರಣಕುಮಾರ ಕುಲಕರ್ಣಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಿಗೆ ಪ್ರಮಾಣ ಪತ್ರ ವಿತರಿಸಲಾಯಿತು.</p>.<p>ಈ ವೇಳೆ ಪಟ್ಟಣದ ತಹಶೀಲ್ದಾರ್ ಕಚೇರಿಯಿಂದ ಆರಂಭವಾದ ಬೈಕ್ ಜಾಥಾ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಕಾಲೇಜು ಮೈದಾನ ತಲುಪಿತು. ಕಾಲೇಜು ಪ್ರಾಚಾರ್ಯ ಜಿ.ಬಿ. ಗುಡಿಮನಿ, ಗ್ರಾಮ ಪಂಚಾಯಿತಿ ಅಧಿಕಾರಿ ಹಾಗೂ ಸಿಬ್ಬಂದಿ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಜೇಂದ್ರಗಡ:</strong> ‘ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವ ದೇಶದಲ್ಲಿ ಮತದಾನದ ಪಾತ್ರ ಮಹತ್ವದ್ದಾಗಿದೆ’ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಕಂದಕೂರ ಹೇಳಿದರು.</p>.<p>ಪಟ್ಟಣದ ಎಸ್.ಎಂ. ಭೂಮರಡ್ಡಿ ಕಾಲೇಜಿನಲ್ಲಿ ತಾಲ್ಲೂಕು ಸ್ವೀಪ್ ಸಮಿತಿ, ತಾಲ್ಲೂಕು ಆಡಳಿತ, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ, ಎಸ್.ಎಂ. ಭೂಮರಡ್ಡಿ ಪಿಯು ಕಾಲೇಜು ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಮತದಾರರ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಮತದಾನ ಮೂಲಕ ದೇಶದ ಪ್ರಗತಿಗೆ ಶ್ರಮಿಸುವ ಜನ ನಾಯಕರನ್ನು ಆಯ್ಕೆ ಮಾಡಲು ಸಂವಿಧಾನ ಪ್ರತಿಯೊಬ್ಬ ನಾಗರಿಕರಿಗೂ ಅವಕಾಶ ಕಲ್ಪಿಸಿದೆ. ಮತದಾರರು ಯಾವುದೇ ಆಮಿಷಗಳಿಗೆ ಬಲಿಯಾಗದೆ ಸೂಕ್ತ ವ್ಯಕ್ತಿಯನ್ನು ಆಯ್ಕೆ ಮಾಡಬೇಕು’ ಎಂದರು.</p>.<p>ತಹಶೀಲ್ದಾರ್ ಕಿರಣಕುಮಾರ ಕುಲಕರ್ಣಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಿಗೆ ಪ್ರಮಾಣ ಪತ್ರ ವಿತರಿಸಲಾಯಿತು.</p>.<p>ಈ ವೇಳೆ ಪಟ್ಟಣದ ತಹಶೀಲ್ದಾರ್ ಕಚೇರಿಯಿಂದ ಆರಂಭವಾದ ಬೈಕ್ ಜಾಥಾ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಕಾಲೇಜು ಮೈದಾನ ತಲುಪಿತು. ಕಾಲೇಜು ಪ್ರಾಚಾರ್ಯ ಜಿ.ಬಿ. ಗುಡಿಮನಿ, ಗ್ರಾಮ ಪಂಚಾಯಿತಿ ಅಧಿಕಾರಿ ಹಾಗೂ ಸಿಬ್ಬಂದಿ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>