<p><strong>ಗದಗ:</strong> ‘ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಿಂದ ಮಠಗಳಿಗೆ ದೊಡ್ಡ ಪೆಟ್ಟು ಬಿದ್ದಿದೆ. ಉಚಿತ ಯೋಜನೆಗಳು ಆಶ್ರಮದ ಖರ್ಚು ಹೆಚ್ಚಲಿಕ್ಕೆ ಕಾರಣ ಆಗಿವೆ’ ಎಂದು ಫಕೀರ ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು.</p><p>ನಗರದ ವೀರೇಶ್ವರ ಪುಣ್ಯಾಶ್ರಮದಲ್ಲಿ ಶುಕ್ರವಾರ ರಾತ್ರಿ ನಡೆದ ಕೀರ್ತನ ಸಮ್ಮೇಳನದ ಸಾನ್ನಿಧ್ಯ ವಹಿಸಿ ಮಾತನಾಡಿದರು.</p><p>‘ಉಚಿತ ಯೋಜನೆಗಳಿಂದಾಗಿ ಮಠಗಳಿಗೆ ಭೇಟಿ ನೀಡುವವರ ಸಂಖ್ಯೆ ಹೆಚ್ಚಾಗಿದೆ. ಪ್ರಸಾದ ವ್ಯವಸ್ಥೆ ನೂರು ಪಟ್ಟು ಹೆಚ್ಚಾಗಿದೆ. ಸರ್ಕಾರ ಮಾಡುವ ಕೆಲಸವನ್ನೇ ಮಠಗಳು ಮಾಡುತ್ತಿವೆ. ಹಾಗಾಗಿ, ಮಠಗಳ ಸಮಗ್ರ ಬೆಳವಣಿಗೆಗೆ ಅನ್ನ, ಹಣ ನೀಡುವುದು ಸರ್ಕಾರದ ಕೆಲಸ’ ಎಂದರು.</p><p>‘ಆದರ್ಶ ಸರ್ಕಾರ ತನ್ನ ಕಿಮ್ಮತ್ತು ಉಳಿಸಿಕೊಳ್ಳಲು ವೀರೇಶ್ವರ ಪುಣ್ಯಾಶ್ರಮದಂತಹ ಸಂಸ್ಥೆಗೆ ಪ್ರತಿ ವರ್ಷ ಕೇಳದೆಯೇ ಅನುದಾನ ನೀಡಬೇಕು. ಈ ನಿಟ್ಟಿನಲ್ಲಿ ಆಡಳಿತಾರೂಢ ಸರ್ಕಾರಗಳು ಗಮನ ಹರಿಸಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ:</strong> ‘ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಿಂದ ಮಠಗಳಿಗೆ ದೊಡ್ಡ ಪೆಟ್ಟು ಬಿದ್ದಿದೆ. ಉಚಿತ ಯೋಜನೆಗಳು ಆಶ್ರಮದ ಖರ್ಚು ಹೆಚ್ಚಲಿಕ್ಕೆ ಕಾರಣ ಆಗಿವೆ’ ಎಂದು ಫಕೀರ ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು.</p><p>ನಗರದ ವೀರೇಶ್ವರ ಪುಣ್ಯಾಶ್ರಮದಲ್ಲಿ ಶುಕ್ರವಾರ ರಾತ್ರಿ ನಡೆದ ಕೀರ್ತನ ಸಮ್ಮೇಳನದ ಸಾನ್ನಿಧ್ಯ ವಹಿಸಿ ಮಾತನಾಡಿದರು.</p><p>‘ಉಚಿತ ಯೋಜನೆಗಳಿಂದಾಗಿ ಮಠಗಳಿಗೆ ಭೇಟಿ ನೀಡುವವರ ಸಂಖ್ಯೆ ಹೆಚ್ಚಾಗಿದೆ. ಪ್ರಸಾದ ವ್ಯವಸ್ಥೆ ನೂರು ಪಟ್ಟು ಹೆಚ್ಚಾಗಿದೆ. ಸರ್ಕಾರ ಮಾಡುವ ಕೆಲಸವನ್ನೇ ಮಠಗಳು ಮಾಡುತ್ತಿವೆ. ಹಾಗಾಗಿ, ಮಠಗಳ ಸಮಗ್ರ ಬೆಳವಣಿಗೆಗೆ ಅನ್ನ, ಹಣ ನೀಡುವುದು ಸರ್ಕಾರದ ಕೆಲಸ’ ಎಂದರು.</p><p>‘ಆದರ್ಶ ಸರ್ಕಾರ ತನ್ನ ಕಿಮ್ಮತ್ತು ಉಳಿಸಿಕೊಳ್ಳಲು ವೀರೇಶ್ವರ ಪುಣ್ಯಾಶ್ರಮದಂತಹ ಸಂಸ್ಥೆಗೆ ಪ್ರತಿ ವರ್ಷ ಕೇಳದೆಯೇ ಅನುದಾನ ನೀಡಬೇಕು. ಈ ನಿಟ್ಟಿನಲ್ಲಿ ಆಡಳಿತಾರೂಢ ಸರ್ಕಾರಗಳು ಗಮನ ಹರಿಸಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>