<p><strong>ಶಿರಹಟ್ಟಿ</strong>: ‘ಸರ್ವಧರ್ಮ ಸಮನ್ವಯತೆ, ಸಾಮಾಜಿಕ ಸಮಾನತೆ, ದೇಶದ ಪರಂಪರೆ ಪ್ರತೀಕವಾದ ಸಂವಿಧಾನ ಸ್ವೀಕರಿಸಿದ ಪವಿತ್ರ ದಿನವೆ ಗಣರಾಜ್ಯೋತ್ಸವ’ ಎಂದು ತಹಶೀಲ್ದಾರ್ ಕೆ.ರಾಘವೇಂದ್ರ ರಾವ್ ಹೇಳಿದರು.</p>.<p>ಸ್ಥಳೀಯ ಎಸ್.ಎಂ. ಡಬಾಲಿ ತಾಲ್ಲೂಕು ಕ್ರೀಡಾಂಗಣದಲ್ಲಿ ಸೋಮವಾರ ತಾಲ್ಲೂಕು ಆಡಳಿತ ವತಿಯಿಂದ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ದೇಶದ ಸಂವಿಧಾನ ಪರಿಪೂರ್ಣ ವೈಚಾರಿಕತೆ ಹಾಗೂ ಸಮಾನತೆಯ ತತ್ವದ ಮೇಲೆ ರೂಪಿತಗೊಂಡಿದೆ’ ಎಂದರು.</p>.<p>ಈ ವೇಳೆ ವಿವಿಧ ಕ್ಷೇತ್ರದ ಸಾಧಕರಿಗೆ ಗೌರವಿಸಲಾಯಿತು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು. ಶಾಸಕ ಡಾ.ಚಂದ್ರು ಲಮಾಣಿ ಮಾತನಾಡಿದರು.</p>.<p>ತಾಲ್ಲೂಕು ಪಂಚಾಯಿತಿ ಇಒ ರಾಮಣ್ಣ ದೊಡ್ಡಮನಿ, ಬಿಇಒ ಎಚ್. ನಾಣಕಿ ನಾಯಕ್, ಸಿಪಿಐ ಬಿ.ವಿ. ನ್ಯಾಮಗೌಡ, ಪಿಎಸ್ಐ ಈರಪ್ಪ ರಿತ್ತಿ, ವೀರಯ್ಯ ಮಠಪತಿ ಸೇರಿದಂತೆ ಮುಂತಾದವರು ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಹಟ್ಟಿ</strong>: ‘ಸರ್ವಧರ್ಮ ಸಮನ್ವಯತೆ, ಸಾಮಾಜಿಕ ಸಮಾನತೆ, ದೇಶದ ಪರಂಪರೆ ಪ್ರತೀಕವಾದ ಸಂವಿಧಾನ ಸ್ವೀಕರಿಸಿದ ಪವಿತ್ರ ದಿನವೆ ಗಣರಾಜ್ಯೋತ್ಸವ’ ಎಂದು ತಹಶೀಲ್ದಾರ್ ಕೆ.ರಾಘವೇಂದ್ರ ರಾವ್ ಹೇಳಿದರು.</p>.<p>ಸ್ಥಳೀಯ ಎಸ್.ಎಂ. ಡಬಾಲಿ ತಾಲ್ಲೂಕು ಕ್ರೀಡಾಂಗಣದಲ್ಲಿ ಸೋಮವಾರ ತಾಲ್ಲೂಕು ಆಡಳಿತ ವತಿಯಿಂದ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ದೇಶದ ಸಂವಿಧಾನ ಪರಿಪೂರ್ಣ ವೈಚಾರಿಕತೆ ಹಾಗೂ ಸಮಾನತೆಯ ತತ್ವದ ಮೇಲೆ ರೂಪಿತಗೊಂಡಿದೆ’ ಎಂದರು.</p>.<p>ಈ ವೇಳೆ ವಿವಿಧ ಕ್ಷೇತ್ರದ ಸಾಧಕರಿಗೆ ಗೌರವಿಸಲಾಯಿತು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು. ಶಾಸಕ ಡಾ.ಚಂದ್ರು ಲಮಾಣಿ ಮಾತನಾಡಿದರು.</p>.<p>ತಾಲ್ಲೂಕು ಪಂಚಾಯಿತಿ ಇಒ ರಾಮಣ್ಣ ದೊಡ್ಡಮನಿ, ಬಿಇಒ ಎಚ್. ನಾಣಕಿ ನಾಯಕ್, ಸಿಪಿಐ ಬಿ.ವಿ. ನ್ಯಾಮಗೌಡ, ಪಿಎಸ್ಐ ಈರಪ್ಪ ರಿತ್ತಿ, ವೀರಯ್ಯ ಮಠಪತಿ ಸೇರಿದಂತೆ ಮುಂತಾದವರು ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>