<p><strong>ಮುಂಡರಗಿ:</strong> ‘ಅಪ್ರಮಾಣಿಕತೆ, ಭ್ರಷ್ಟಾಚಾರ ದೇಶದ ಅಭಿವೃದ್ದಿಗೆ ಮಾರಕವಾಗಿದ್ದು, ತಡೆಗಟ್ಟುವ ನಿಟ್ಟಿನಲ್ಲಿ ಯುವಕರು ಪ್ರಾಮಾಣಿಕತೆಯಿಂದ ದೇಶ ಸೇವೆಗೆ ಮುಂದಾಗಬೇಕು’ ಎಂದು ನಿವೃತ್ತ ನ್ಯಾಯಾದೀಶ ನಾಗರಾಜ ಅರಳಿ ಹೇಳಿದರು.</p>.<p>ಇಲ್ಲಿಯ ಜಗದ್ಗುರು ಅನ್ನದಾನೀಶ್ವರ ಮಠದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಆಯುಧ ಪೂಜೆ ಹಾಗೂ ದಸರಾ ಶಿವಾನುಭವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ ಅವರು, ‘ಶರಣರ ವಚನಗಳಲ್ಲಿ ನಮ್ಮ ಬದುಕಿಗೆ ಬೇಕಾಗಿರುವ ಉತ್ತಮ ಮೌಲ್ಯಗಳು ಅಡಗಿದ್ದು, ಯುವಕರು ವಚನ ಸಾಹಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದರು.</p>.<p>ಡಾ. ವೀರಯ್ಯ ಹಿರೇಮಠ ಮಾತನಾಡಿದರು. ಅನ್ನದಾನೀಶ್ವರ ಸ್ವಾಮೀಜಿ ಶಿವಾನುಭವದ ಸಾನ್ನಿಧ್ಯ ವಹಿಸಿದ್ದರು. ಅನ್ನಪೂರ್ಣಮ್ಮ ಶಿವಶೆಟ್ಟರ, ಎಂ.ಎಸ್. ಶಿವಶಟ್ಟರ, ಶೈಲಜಾ ಅರಳಲೆಮಠ ಅವರನ್ನು ಶ್ರೀಗಳು ಸನ್ಮಾನಿಸಿದರು.</p>.<p>ಕಾರ್ಯಕ್ರಮವನ್ನು ನಿವೃತ್ತ ಮುಖ್ಯ ಶಿಕ್ಷಕ ಎಸ್.ಆರ್. ರಿತ್ತಿ ನಿರೂಪಿಸಿ, ವಂದಿಸಿದರು. ಆರ್.ಎಲ್. ಪೋಲೀಸಪಾಟೀಲ, ಎಂ.ಜಿ. ಗಚ್ಚಣ್ಣವರ, ವಿ.ಎಫ್. ಗುಡದಿರಪ್ಪ, ಬಿ.ಜೆ. ಜವಳಿ, ಆರ್.ಬಿ. ಡಂಬಳಮಠ, ಬಸವರಾಜ ಬನ್ನಿಕೊಪ್ಪ, ಎನ್.ಎಫ್. ಅಕ್ಕೂರ, ಎಸ್.ಸಿ. ಚಕ್ಕಡಿಮಠ, ಹಾಲಯ್ಯ ಹಿರೇಮಠ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಡರಗಿ:</strong> ‘ಅಪ್ರಮಾಣಿಕತೆ, ಭ್ರಷ್ಟಾಚಾರ ದೇಶದ ಅಭಿವೃದ್ದಿಗೆ ಮಾರಕವಾಗಿದ್ದು, ತಡೆಗಟ್ಟುವ ನಿಟ್ಟಿನಲ್ಲಿ ಯುವಕರು ಪ್ರಾಮಾಣಿಕತೆಯಿಂದ ದೇಶ ಸೇವೆಗೆ ಮುಂದಾಗಬೇಕು’ ಎಂದು ನಿವೃತ್ತ ನ್ಯಾಯಾದೀಶ ನಾಗರಾಜ ಅರಳಿ ಹೇಳಿದರು.</p>.<p>ಇಲ್ಲಿಯ ಜಗದ್ಗುರು ಅನ್ನದಾನೀಶ್ವರ ಮಠದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಆಯುಧ ಪೂಜೆ ಹಾಗೂ ದಸರಾ ಶಿವಾನುಭವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ ಅವರು, ‘ಶರಣರ ವಚನಗಳಲ್ಲಿ ನಮ್ಮ ಬದುಕಿಗೆ ಬೇಕಾಗಿರುವ ಉತ್ತಮ ಮೌಲ್ಯಗಳು ಅಡಗಿದ್ದು, ಯುವಕರು ವಚನ ಸಾಹಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದರು.</p>.<p>ಡಾ. ವೀರಯ್ಯ ಹಿರೇಮಠ ಮಾತನಾಡಿದರು. ಅನ್ನದಾನೀಶ್ವರ ಸ್ವಾಮೀಜಿ ಶಿವಾನುಭವದ ಸಾನ್ನಿಧ್ಯ ವಹಿಸಿದ್ದರು. ಅನ್ನಪೂರ್ಣಮ್ಮ ಶಿವಶೆಟ್ಟರ, ಎಂ.ಎಸ್. ಶಿವಶಟ್ಟರ, ಶೈಲಜಾ ಅರಳಲೆಮಠ ಅವರನ್ನು ಶ್ರೀಗಳು ಸನ್ಮಾನಿಸಿದರು.</p>.<p>ಕಾರ್ಯಕ್ರಮವನ್ನು ನಿವೃತ್ತ ಮುಖ್ಯ ಶಿಕ್ಷಕ ಎಸ್.ಆರ್. ರಿತ್ತಿ ನಿರೂಪಿಸಿ, ವಂದಿಸಿದರು. ಆರ್.ಎಲ್. ಪೋಲೀಸಪಾಟೀಲ, ಎಂ.ಜಿ. ಗಚ್ಚಣ್ಣವರ, ವಿ.ಎಫ್. ಗುಡದಿರಪ್ಪ, ಬಿ.ಜೆ. ಜವಳಿ, ಆರ್.ಬಿ. ಡಂಬಳಮಠ, ಬಸವರಾಜ ಬನ್ನಿಕೊಪ್ಪ, ಎನ್.ಎಫ್. ಅಕ್ಕೂರ, ಎಸ್.ಸಿ. ಚಕ್ಕಡಿಮಠ, ಹಾಲಯ್ಯ ಹಿರೇಮಠ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>