<p><strong>ಗಜೇಂದ್ರಗಡ:</strong> ತಾಲ್ಲೂಕಿನ ಗೋಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗರಸಕೊಪ್ಪ ಗ್ರಾಮದಲ್ಲಿ ಮುಖ್ಯ ಚರಂಡಿಗಳು ಹೂಳು ತುಂಬಿಕೊಂಡಿದ್ದು, ದುರ್ವಾಸನೆ ಬೀರುತ್ತಿವೆ.</p>.<p>ಸುಮಾರು 120 ಕುಟುಂಬಗಳಿರುವ ಚಿಕ್ಕ ಗ್ರಾಮವಾದ ನಾಗರಸಕೊಪ್ಪದಲ್ಲಿ ಬಹುತೇಕ ಓಣಿಗಳಲ್ಲಿ ಸಿಸಿ ರಸ್ತೆ ನಿರ್ಮಿಸಲಾಗಿದೆ. ಆದರೆ ಗ್ರಾಮದ ಎರಡು ಮುಖ್ಯ ಚರಂಡಿಗಳು ಶಿಥಿಲಗೊಂಡಿದ್ದು, ಹೂಳು ತುಂಬಿಕೊಂಡು ದುರ್ವಾಸನೆ ಬೀರುತ್ತಿವೆ. ಗ್ರಾಮದಿಂದ ಬೆಣಸಮಟ್ಟಿ ಗ್ರಾಮಕ್ಕೆ ಸಂಪರ್ಕಿಸುವ ರಸ್ತೆಯ ಓಣಿಯಲ್ಲಿ ಬೀದಿದೀಪಗಳು ಬೆಳಗುತ್ತಿಲ್ಲ.</p>.<p>ಗ್ರಾಮದಲ್ಲಿ ಸಮುದಾಯ ಶೌಚಾಲಯವಿಲ್ಲ, ಅಲ್ಲದೆ ಜನರು ವೈಯಕ್ತಿಕ ಶೌಚಾಲಯ ಬಳಸದೆ ರಸ್ತೆ ಬದಿಯಲ್ಲಿ ಬಯಲುಶೌಚಕ್ಕೆ ತೆರಳುತ್ತಿರುವುದರಿಂದ ಅಲ್ಲಿನ ನಿವಾಸಿಗಳಿಗೆ ಹಾಗೂ ಜಮೀನುಗಳಿಗೆ ತೆರಳುವ ರೈತರಿಗೆ ತೊಂದರೆಯಾಗುತ್ತಿದೆ ಎಂದು ಗ್ರಾಮಸ್ಥರು ದೂರುತ್ತಿದ್ದಾರೆ.</p>.<p>ಗ್ರಾಮದಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕ ಹಲವು ವರ್ಷಗಳಿಂದ ಬಳಕೆಯಾಗದೆ, ಪಾಳು ಬಿದ್ದಿದೆ. ಅಲ್ಲದೆ ಗಜೇಂದ್ರಗಡ-ಕುಷ್ಟಗಿ ಮುಖ್ಯ ರಸ್ತೆಯಿಂದ ಗ್ರಾಮಕ್ಕೆ ಸಂಪರ್ಕಿಸುವ ಮುಖ್ಯ ರಸ್ತೆ ಸಂಪೂರ್ಣ ಹಾಳಾಗಿದ್ದು, ವಾಹನ ಸವಾರರು, ಪಾದಚಾರಿಗಳು ಈ ರಸ್ತೆಯಲ್ಲಿ ಸಂಚರಿಸಲು ಹರಸಾಹಸ ಪಡುವಂತಾಗಿದೆ.</p>.<p>‘ನಾಗರಸಕೊಪ್ಪ ಗ್ರಾಮದಲ್ಲಿ ವರ್ಷಕ್ಕೆ ಎರಡು ಬಾರಿ ಮುಖ್ಯ ಚರಂಡಿಗಳನ್ನು ಸ್ವಚ್ಛಗೊಳಿಸಲಾಗುತ್ತಿದೆ. ಸಾಂಕ್ರಾಮಿಕ ರೋಗಗಳ ಸಂದರ್ಭದಲ್ಲಿಯೂ ಸ್ವಚ್ಛತೆ ಮಾಡಿಸಲಾಗುತ್ತಿದೆ. ಬೀದಿದೀಪಗಳು ಬೆಳಗದ ಸ್ಥಳಗಳಲ್ಲಿ ದುರಸ್ತಿ ಮಾಡಿಸಲಾಗುವುದು’ ಎಂದು ಗೋಗೇರಿ ಗ್ರಾಮ ಪಂಚಾಯಿತಿ ಪಿಡಿಒ ಶರಣಪ್ಪ ನರೇಗಲ್ಲ ತಿಳಿಸಿದ್ದಾರೆ.</p>.<p><strong>ನಿಲುಗಡೆಯಾಗದ ಬಸ್ಗಳು: </strong>ನಾಗರಸಕೊಪ್ಪ ಗ್ರಾಮದಿಂದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ಗಜೇಂದ್ರಗಡ ಪಟ್ಟಣಕ್ಕೆ ತೆರಳುತ್ತಿದ್ದಾರೆ. ಆದರೆ ಗಜೇಂದ್ರಗಡ-ಕುಷ್ಟಗಿ ಮುಖ್ಯರಸ್ತೆಯಲ್ಲಿ ಬಸ್ಗಳು ನಿಲುಗಡೆಯಾಗುವುದಿಲ್ಲ. ಹೀಗಾಗಿ ವಿದ್ಯಾರ್ಥಿಗಳು ಗೋಗೇರಿ ಗ್ರಾಮಕ್ಕೆ ತೆರಳಿ ಅಲ್ಲಿಂದ ಬಸ್ನಲ್ಲಿ ತೆರಳಬೇಕು. ಇಲ್ಲವೇ ಖಾಸಗಿ ವಾಹನಗಳಲ್ಲಿ ತೆರಳುವಂತ ದುಃಸ್ಥಿತಿಯಿದೆ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. </p>.<div><blockquote>ಶಾಸಕರು ಗಜೇಂದ್ರಗಡ-ಕುಷ್ಟಗಿ ಮುಖ್ಯರಸ್ತೆಯಿಂದ ನಾಗರಸಕೊಪ್ಪ ಗ್ರಾಮದವರೆಗೆ ಸಿಸಿ ರಸ್ತೆ ನಿರ್ಮಿಸುವ ಭರವಸೆ ನೀಡಿದ್ದಾರೆ. ಗ್ರಾಮದಲ್ಲಿನ ಮುಖ್ಯ ಚರಂಡಿಗಳ ಸ್ವಚ್ಛತೆಗೆ ಕ್ರಮ ಕೈಗೊಳ್ಳಲಾಗುವುದು </blockquote><span class="attribution">ವಿಜಯಲಕ್ಷ್ಮೀ ಮುತ್ತಣ್ಣ ಲ್ಯಾವಕ್ಕಿ ಅಧ್ಯಕ್ಷರು ಗ್ರಾಮ ಪಂಚಾಯಿತಿ ಗೋಗೇರಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಜೇಂದ್ರಗಡ:</strong> ತಾಲ್ಲೂಕಿನ ಗೋಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗರಸಕೊಪ್ಪ ಗ್ರಾಮದಲ್ಲಿ ಮುಖ್ಯ ಚರಂಡಿಗಳು ಹೂಳು ತುಂಬಿಕೊಂಡಿದ್ದು, ದುರ್ವಾಸನೆ ಬೀರುತ್ತಿವೆ.</p>.<p>ಸುಮಾರು 120 ಕುಟುಂಬಗಳಿರುವ ಚಿಕ್ಕ ಗ್ರಾಮವಾದ ನಾಗರಸಕೊಪ್ಪದಲ್ಲಿ ಬಹುತೇಕ ಓಣಿಗಳಲ್ಲಿ ಸಿಸಿ ರಸ್ತೆ ನಿರ್ಮಿಸಲಾಗಿದೆ. ಆದರೆ ಗ್ರಾಮದ ಎರಡು ಮುಖ್ಯ ಚರಂಡಿಗಳು ಶಿಥಿಲಗೊಂಡಿದ್ದು, ಹೂಳು ತುಂಬಿಕೊಂಡು ದುರ್ವಾಸನೆ ಬೀರುತ್ತಿವೆ. ಗ್ರಾಮದಿಂದ ಬೆಣಸಮಟ್ಟಿ ಗ್ರಾಮಕ್ಕೆ ಸಂಪರ್ಕಿಸುವ ರಸ್ತೆಯ ಓಣಿಯಲ್ಲಿ ಬೀದಿದೀಪಗಳು ಬೆಳಗುತ್ತಿಲ್ಲ.</p>.<p>ಗ್ರಾಮದಲ್ಲಿ ಸಮುದಾಯ ಶೌಚಾಲಯವಿಲ್ಲ, ಅಲ್ಲದೆ ಜನರು ವೈಯಕ್ತಿಕ ಶೌಚಾಲಯ ಬಳಸದೆ ರಸ್ತೆ ಬದಿಯಲ್ಲಿ ಬಯಲುಶೌಚಕ್ಕೆ ತೆರಳುತ್ತಿರುವುದರಿಂದ ಅಲ್ಲಿನ ನಿವಾಸಿಗಳಿಗೆ ಹಾಗೂ ಜಮೀನುಗಳಿಗೆ ತೆರಳುವ ರೈತರಿಗೆ ತೊಂದರೆಯಾಗುತ್ತಿದೆ ಎಂದು ಗ್ರಾಮಸ್ಥರು ದೂರುತ್ತಿದ್ದಾರೆ.</p>.<p>ಗ್ರಾಮದಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕ ಹಲವು ವರ್ಷಗಳಿಂದ ಬಳಕೆಯಾಗದೆ, ಪಾಳು ಬಿದ್ದಿದೆ. ಅಲ್ಲದೆ ಗಜೇಂದ್ರಗಡ-ಕುಷ್ಟಗಿ ಮುಖ್ಯ ರಸ್ತೆಯಿಂದ ಗ್ರಾಮಕ್ಕೆ ಸಂಪರ್ಕಿಸುವ ಮುಖ್ಯ ರಸ್ತೆ ಸಂಪೂರ್ಣ ಹಾಳಾಗಿದ್ದು, ವಾಹನ ಸವಾರರು, ಪಾದಚಾರಿಗಳು ಈ ರಸ್ತೆಯಲ್ಲಿ ಸಂಚರಿಸಲು ಹರಸಾಹಸ ಪಡುವಂತಾಗಿದೆ.</p>.<p>‘ನಾಗರಸಕೊಪ್ಪ ಗ್ರಾಮದಲ್ಲಿ ವರ್ಷಕ್ಕೆ ಎರಡು ಬಾರಿ ಮುಖ್ಯ ಚರಂಡಿಗಳನ್ನು ಸ್ವಚ್ಛಗೊಳಿಸಲಾಗುತ್ತಿದೆ. ಸಾಂಕ್ರಾಮಿಕ ರೋಗಗಳ ಸಂದರ್ಭದಲ್ಲಿಯೂ ಸ್ವಚ್ಛತೆ ಮಾಡಿಸಲಾಗುತ್ತಿದೆ. ಬೀದಿದೀಪಗಳು ಬೆಳಗದ ಸ್ಥಳಗಳಲ್ಲಿ ದುರಸ್ತಿ ಮಾಡಿಸಲಾಗುವುದು’ ಎಂದು ಗೋಗೇರಿ ಗ್ರಾಮ ಪಂಚಾಯಿತಿ ಪಿಡಿಒ ಶರಣಪ್ಪ ನರೇಗಲ್ಲ ತಿಳಿಸಿದ್ದಾರೆ.</p>.<p><strong>ನಿಲುಗಡೆಯಾಗದ ಬಸ್ಗಳು: </strong>ನಾಗರಸಕೊಪ್ಪ ಗ್ರಾಮದಿಂದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ಗಜೇಂದ್ರಗಡ ಪಟ್ಟಣಕ್ಕೆ ತೆರಳುತ್ತಿದ್ದಾರೆ. ಆದರೆ ಗಜೇಂದ್ರಗಡ-ಕುಷ್ಟಗಿ ಮುಖ್ಯರಸ್ತೆಯಲ್ಲಿ ಬಸ್ಗಳು ನಿಲುಗಡೆಯಾಗುವುದಿಲ್ಲ. ಹೀಗಾಗಿ ವಿದ್ಯಾರ್ಥಿಗಳು ಗೋಗೇರಿ ಗ್ರಾಮಕ್ಕೆ ತೆರಳಿ ಅಲ್ಲಿಂದ ಬಸ್ನಲ್ಲಿ ತೆರಳಬೇಕು. ಇಲ್ಲವೇ ಖಾಸಗಿ ವಾಹನಗಳಲ್ಲಿ ತೆರಳುವಂತ ದುಃಸ್ಥಿತಿಯಿದೆ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. </p>.<div><blockquote>ಶಾಸಕರು ಗಜೇಂದ್ರಗಡ-ಕುಷ್ಟಗಿ ಮುಖ್ಯರಸ್ತೆಯಿಂದ ನಾಗರಸಕೊಪ್ಪ ಗ್ರಾಮದವರೆಗೆ ಸಿಸಿ ರಸ್ತೆ ನಿರ್ಮಿಸುವ ಭರವಸೆ ನೀಡಿದ್ದಾರೆ. ಗ್ರಾಮದಲ್ಲಿನ ಮುಖ್ಯ ಚರಂಡಿಗಳ ಸ್ವಚ್ಛತೆಗೆ ಕ್ರಮ ಕೈಗೊಳ್ಳಲಾಗುವುದು </blockquote><span class="attribution">ವಿಜಯಲಕ್ಷ್ಮೀ ಮುತ್ತಣ್ಣ ಲ್ಯಾವಕ್ಕಿ ಅಧ್ಯಕ್ಷರು ಗ್ರಾಮ ಪಂಚಾಯಿತಿ ಗೋಗೇರಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>