‘ಜಿಲ್ಲೆಯ ಕಟ್ಟಕಡೆಯ ಹಳ್ಳಿ ತಾಂಡಾ, ಕೆಳ ಸಮುದಾಯದ ಜನರನ್ನು ಗುರಿಯಾಗಿಸಿ ಅವರಿಗೂ ಕ್ಷಯ ರೋಗದ ಕುರಿತು ಅರಿವು ಮೂಡಿಸಬೇಕು. ನಗರ ಪ್ರದೇಶಗಳಲ್ಲಿ ಸ್ಲಂಗಳು, ಖೈದಿಗಳು, ವೃದ್ಧಾಪ್ಯ ಕೇಂದ್ರಗಳು, ಕಟ್ಟಡ ನಿರ್ಮಾಣ ಕಾರ್ಮಿಕರು, ನಿರಾಶ್ರಿತರ ಶಿಬಿರಗಳು, ವಸತಿರಹಿತರು, ಬೀದಿ ಬದಿ ಮಕ್ಕಳನ್ನು ಗುರಿಯಾಗಿಸಿಕೊಂಡು ಆದ್ಯತೆ ಮೇರೆಗೆ ತಪಾಸಣೆ ನಡೆಸಿ ಅರಿವು ಮೂಡಿಸಬೇಕು’ ಎಂದು ಹೇಳಿದರು.