<p><strong>ನರೇಗಲ್:</strong> ‘ಸಂಸ್ಕಾರವಿಲ್ಲದ ಬದುಕು ಶೂನ್ಯಕ್ಕೆ ಸಮಾನ ಮತ್ತು ಅರ್ಥಹೀನ. ಆದ್ದರಿಂದ ತಾಯಂದಿರು ತಮ್ಮ ಮಕ್ಕಳಿಗೆ ಬಾಲ್ಯದಿಂದಲೇ ಸಂಸ್ಕಾರ ಕಲಿಸಿಕೊಡಬೇಕು’ ಎಂದು ಶಿಕ್ಷಣ ಚಿಂತಕಿ ಕಾರಟಗಿಯ ಲೀಲಾ ಮಲ್ಲಿಕಾರ್ಜುನ ಹೇಳಿದರು.</p>.<p>ನರೇಗಲ್ ಸಮೀಪದ ಹಾಲಕೆರೆ ಗ್ರಾಮದ ಅನ್ನದಾನೇಶ್ವರ ಮಠದಲ್ಲಿ ಜಾತ್ರಾ ಮಹೋತ್ಸವದ ಅಂಗವಾಗಿ ಈಚೆಗೆ ನಡೆದ ಧಾರ್ಮಿಕ ಸಭೆಯಲ್ಲಿ ‘ಮಕ್ಕಳ ಸಮಗ್ರ ಬೆಳವಣಿಗೆಯಲ್ಲಿ ಮಹಿಳೆಯ ಪಾತ್ರ’ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು.</p>.<p>‘ಮಹಿಳೆಗೆ ವಿಶೇಷ ಸ್ಥಾನಮಾನ ನೀಡಿದ ದೇಶ ನಮ್ಮದು. ತಾಯಿ ದೇವರ ಸ್ವರೂಪಿ. ಅಕ್ಕ- ತಂಗಿ, ಹೆಂಡತಿ, ಸೊಸೆ, ತಾಯಿ ಹೀಗೆ ವಿವಿಧ ಹಂತಗಳನ್ನು ದಾಟಿ ಬರುವ ಆಕೆ ಎಲ್ಲದರಲ್ಲಿಯೂ ತ್ಯಾಗಮಯಿ. ಸಮಾಜ ಅವಳ ಪ್ರತಿಭೆಗೆ, ಸಾಧನೆಗೆ ಪ್ರೋತ್ಸಾಹ ನೀಡಬೇಕು. ಅವಳನ್ನು ಕಟ್ಟಿ ಹಾಕುವ ಕೆಲಸವಾಗಬಾರದು’ ಎಂದರು.</p>.<p>‘ತಾಯಂದಿರು ಎಂದಿಗೂ ಮಕ್ಕಳ ಅಂಕಗಳ ಬಗ್ಗೆ ಯೋಚಿಸದೆ ಅವರಲ್ಲಿ ಮೌಲ್ಯಗಳನ್ನು ಬಿತ್ತುವ ಕುರಿತು ಯೋಚಿಸಬೇಕು. ಜೀವನದ ಮೌಲ್ಯಗಳನ್ನು ಮಕ್ಕಳಲ್ಲಿ ಬೆಳೆಸಲು ತಾಯಂದಿರು ಮುಂದಾಗಬೇಕು. ಮಗುವಿನ ಪ್ರತಿ ಹೆಜ್ಜೆಯಲ್ಲಿಯೂ ತಾಯಿಯ ಗಮನವಿರಬೇಕು’ ಎಂದು ಸಲಹೆ ನೀಡಿದರು.</p>.<p>ಆಶೀರ್ವಚನ ನೀಡಿದ ಹಾಲಕೆರೆಯ ಮುಪ್ಪಿನ ಬಸವಲಿಂಗ ಸ್ವಾಮೀಜಿ, ‘ಬದುಕನ್ನು ಎಂದಿಗೂ ನಿರರ್ಥಕ ಮಾಡಿಕೊಳ್ಳಬಾರದು. ಯಾರಲ್ಲಿ ಜ್ಞಾನ ಹಾಗೂ ಸಂಸ್ಕಾರ ಇರುತ್ತದೆಯೋ ಅವರ ಬದುಕು ಸಾರ್ಥಕವಾಗುತ್ತದೆ. ಈ ಜ್ಞಾನ ಸತ್ಸಂಗದಿಂದ ಬರುತ್ತದೆ. ಆದ್ದರಿಂದ ಎಂದಿಗೂ ಸತ್ಸಂಗದಲ್ಲಿ ಪಾಲ್ಗೊಳ್ಳಬೇಕು. ಊರಲ್ಲಿ ಜಾತ್ರೆ, ಶಿವಾನುಭವಗೋಷ್ಠಿಯಂತಹ ಕಾರ್ಯಗಳು ನಡೆದಾಗ ತುಂಬು ಮನಸ್ಸಿನಿಂದ ಪಾಲ್ಗೊಳ್ಳಬೇಕು’ ಎಂದರು.</p>.<p>ಎಸ್.ಎಸ್. ಸಾರಂಗಮಠ ವಿರಚಿತ ಹಾಲಕೆರೆಯ ಮಹಾತಪಸ್ವಿ ಅನ್ನದಾನೇಶ್ವರ ಮಹಿಮೆ ನಾಟಕ ಮತ್ತು ಗಿರಿರಾಜ ಹೊಸಮನಿಯವರು ಬರೆದ ಹಾಲಕೆರೆಯಿಂದ ಹಿಮಾಲಯದವರೆಗೆ ಕೃತಿಗಳು ಲೋಕಾರ್ಪಣೆಗೊಂಡವು. ಕಲ್ಲಯ್ಯ ಹಿರೇಮಠ ನೇತೃತ್ವದ ಬೆತ್ತದ ಅಜ್ಜ ಕಿರುಚಿತ್ರ ಬಿಡುಗಡೆಗೊಂಡಿತು. </p>.<p>ಒಳಬಳ್ಳಾರಿ ಸುವರ್ಣಗಿರಿ ಮಠದ ಸಿದ್ಧಲಿಂಗ ಸ್ವಾಮೀಜಿ, ನಿಡಗುಂದಿಕೊಪ್ಪದ ಶಾಖಾ ಶಿವಯೋಗ ಮಂದಿರದ ಅಭಿನವ ಚನ್ನಬಸವ ಸ್ವಾಮೀಜಿ, ವಿವಿಧ ಮಠದ ಹಿರಿಯ-ಕಿರಿಯ ಶ್ರೀಗಳು ಹಾಗೂ ರೋಣ ಅಕ್ಕನ ಬಳಗದ ಅಧ್ಯಕ್ಷೆ ಅನ್ನಪೂರ್ಣಮ್ಮ ಜಿ. ಪಾಟೀಲ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನರೇಗಲ್:</strong> ‘ಸಂಸ್ಕಾರವಿಲ್ಲದ ಬದುಕು ಶೂನ್ಯಕ್ಕೆ ಸಮಾನ ಮತ್ತು ಅರ್ಥಹೀನ. ಆದ್ದರಿಂದ ತಾಯಂದಿರು ತಮ್ಮ ಮಕ್ಕಳಿಗೆ ಬಾಲ್ಯದಿಂದಲೇ ಸಂಸ್ಕಾರ ಕಲಿಸಿಕೊಡಬೇಕು’ ಎಂದು ಶಿಕ್ಷಣ ಚಿಂತಕಿ ಕಾರಟಗಿಯ ಲೀಲಾ ಮಲ್ಲಿಕಾರ್ಜುನ ಹೇಳಿದರು.</p>.<p>ನರೇಗಲ್ ಸಮೀಪದ ಹಾಲಕೆರೆ ಗ್ರಾಮದ ಅನ್ನದಾನೇಶ್ವರ ಮಠದಲ್ಲಿ ಜಾತ್ರಾ ಮಹೋತ್ಸವದ ಅಂಗವಾಗಿ ಈಚೆಗೆ ನಡೆದ ಧಾರ್ಮಿಕ ಸಭೆಯಲ್ಲಿ ‘ಮಕ್ಕಳ ಸಮಗ್ರ ಬೆಳವಣಿಗೆಯಲ್ಲಿ ಮಹಿಳೆಯ ಪಾತ್ರ’ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು.</p>.<p>‘ಮಹಿಳೆಗೆ ವಿಶೇಷ ಸ್ಥಾನಮಾನ ನೀಡಿದ ದೇಶ ನಮ್ಮದು. ತಾಯಿ ದೇವರ ಸ್ವರೂಪಿ. ಅಕ್ಕ- ತಂಗಿ, ಹೆಂಡತಿ, ಸೊಸೆ, ತಾಯಿ ಹೀಗೆ ವಿವಿಧ ಹಂತಗಳನ್ನು ದಾಟಿ ಬರುವ ಆಕೆ ಎಲ್ಲದರಲ್ಲಿಯೂ ತ್ಯಾಗಮಯಿ. ಸಮಾಜ ಅವಳ ಪ್ರತಿಭೆಗೆ, ಸಾಧನೆಗೆ ಪ್ರೋತ್ಸಾಹ ನೀಡಬೇಕು. ಅವಳನ್ನು ಕಟ್ಟಿ ಹಾಕುವ ಕೆಲಸವಾಗಬಾರದು’ ಎಂದರು.</p>.<p>‘ತಾಯಂದಿರು ಎಂದಿಗೂ ಮಕ್ಕಳ ಅಂಕಗಳ ಬಗ್ಗೆ ಯೋಚಿಸದೆ ಅವರಲ್ಲಿ ಮೌಲ್ಯಗಳನ್ನು ಬಿತ್ತುವ ಕುರಿತು ಯೋಚಿಸಬೇಕು. ಜೀವನದ ಮೌಲ್ಯಗಳನ್ನು ಮಕ್ಕಳಲ್ಲಿ ಬೆಳೆಸಲು ತಾಯಂದಿರು ಮುಂದಾಗಬೇಕು. ಮಗುವಿನ ಪ್ರತಿ ಹೆಜ್ಜೆಯಲ್ಲಿಯೂ ತಾಯಿಯ ಗಮನವಿರಬೇಕು’ ಎಂದು ಸಲಹೆ ನೀಡಿದರು.</p>.<p>ಆಶೀರ್ವಚನ ನೀಡಿದ ಹಾಲಕೆರೆಯ ಮುಪ್ಪಿನ ಬಸವಲಿಂಗ ಸ್ವಾಮೀಜಿ, ‘ಬದುಕನ್ನು ಎಂದಿಗೂ ನಿರರ್ಥಕ ಮಾಡಿಕೊಳ್ಳಬಾರದು. ಯಾರಲ್ಲಿ ಜ್ಞಾನ ಹಾಗೂ ಸಂಸ್ಕಾರ ಇರುತ್ತದೆಯೋ ಅವರ ಬದುಕು ಸಾರ್ಥಕವಾಗುತ್ತದೆ. ಈ ಜ್ಞಾನ ಸತ್ಸಂಗದಿಂದ ಬರುತ್ತದೆ. ಆದ್ದರಿಂದ ಎಂದಿಗೂ ಸತ್ಸಂಗದಲ್ಲಿ ಪಾಲ್ಗೊಳ್ಳಬೇಕು. ಊರಲ್ಲಿ ಜಾತ್ರೆ, ಶಿವಾನುಭವಗೋಷ್ಠಿಯಂತಹ ಕಾರ್ಯಗಳು ನಡೆದಾಗ ತುಂಬು ಮನಸ್ಸಿನಿಂದ ಪಾಲ್ಗೊಳ್ಳಬೇಕು’ ಎಂದರು.</p>.<p>ಎಸ್.ಎಸ್. ಸಾರಂಗಮಠ ವಿರಚಿತ ಹಾಲಕೆರೆಯ ಮಹಾತಪಸ್ವಿ ಅನ್ನದಾನೇಶ್ವರ ಮಹಿಮೆ ನಾಟಕ ಮತ್ತು ಗಿರಿರಾಜ ಹೊಸಮನಿಯವರು ಬರೆದ ಹಾಲಕೆರೆಯಿಂದ ಹಿಮಾಲಯದವರೆಗೆ ಕೃತಿಗಳು ಲೋಕಾರ್ಪಣೆಗೊಂಡವು. ಕಲ್ಲಯ್ಯ ಹಿರೇಮಠ ನೇತೃತ್ವದ ಬೆತ್ತದ ಅಜ್ಜ ಕಿರುಚಿತ್ರ ಬಿಡುಗಡೆಗೊಂಡಿತು. </p>.<p>ಒಳಬಳ್ಳಾರಿ ಸುವರ್ಣಗಿರಿ ಮಠದ ಸಿದ್ಧಲಿಂಗ ಸ್ವಾಮೀಜಿ, ನಿಡಗುಂದಿಕೊಪ್ಪದ ಶಾಖಾ ಶಿವಯೋಗ ಮಂದಿರದ ಅಭಿನವ ಚನ್ನಬಸವ ಸ್ವಾಮೀಜಿ, ವಿವಿಧ ಮಠದ ಹಿರಿಯ-ಕಿರಿಯ ಶ್ರೀಗಳು ಹಾಗೂ ರೋಣ ಅಕ್ಕನ ಬಳಗದ ಅಧ್ಯಕ್ಷೆ ಅನ್ನಪೂರ್ಣಮ್ಮ ಜಿ. ಪಾಟೀಲ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>