‘ವ್ಯಾಪಾರಸ್ಥರು ಪಾರದರ್ಶಕವಾಗಿ ತೆರಿಗೆ ಪಾವತಿ ಮಾಡಿದರೆ, ದೇಶದ ಅಭಿವೃದ್ಧಿಗೆ ಪೂರಕವಾಗುತ್ತದೆ. ಪ್ರಾಮಾಣಿಕವಾಗಿ ತೆರಿಗೆ ಪಾವತಿಸಿ, ವ್ಯಾಪಾರ ವಹಿವಾಟನ್ನು ಸುಗಮವಾಗಿ ನಡೆಸಿಕೊಂಡು ಹೋಗಬೇಕು. ಈಗಾಗಲೇ ಜಿಎಸ್ಟಿಗೆ ಸಂಬಂಧಿಸಿದಂತೆ ಸಹಾಯವಾಣಿ ಆರಂಭಿಸಲಾಗಿದೆ. ದೂರವಾಣಿ ಕರೆ ಮಾಡಿ, ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕು’ ಎಂದು ಧಾರವಾಡ ವಾಣಿಜ್ಯ ತೆರಿಗೆ ಇಲಾಖೆ (ಆಡಳಿತ) ಜಂಟಿ ಆಯುಕ್ತ ಉದಯಶಂಕರ ಹೇಳಿದರು.