ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು ಗಲಭೆ ಪ್ರಕರಣ | ಶಾಸಕ ಜಮೀರ್‌ಗೆ ರಾಜಕಾರಣ ಗೊತ್ತಿಲ್ಲ: ಶೆಟ್ಟರ್‌ ಟೀಕೆ

ಡಿ.ಜೆ.ಹಳ್ಳಿಯಲ್ಲಿ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ?
Last Updated 14 ಆಗಸ್ಟ್ 2020, 13:54 IST
ಅಕ್ಷರ ಗಾತ್ರ

ಗದಗ: ಬೆಂಗಳೂರಿನ ಡಿ.ಜೆ. ಹಳ್ಳಿ ಗಲಭೆ ಪ್ರಕರಣದಲ್ಲಿ ಮೃತಪಟ್ಟವರ ಕುಟುಂಬದವರನ್ನು ಭೇಟಿ ಮಾಡಿ, ಸಾಂತ್ವನ ಹೇಳಿದ ಶಾಸಕ ಜಮೀರ್ ಅಹಮದ್‌ ಖಾನ್‌ ಅವರ ಕ್ರಮವನ್ನು ಸಚಿವ ಜಗದೀಶ್ ಶೆಟ್ಟರ್ ಟೀಕೆ ಮಾಡಿದರು.

ಗದುಗಿನ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳ ಜತೆಗೆ ಮಾತನಾಡಿದ ಅವರು, ‘ಜಮೀರ್‌ ಅವರಿಗೆ ಕಾನೂನು ಗೊತ್ತಿಲ್ಲ; ಜಾತಿ ರಾಜಕಾರಣ ಮಾತ್ರ ಗೊತ್ತು. ಕಿಡಿಗೇಡಿಗಳ ಕುಟುಂಬಕ್ಕೆ ಪರಿಹಾರ ನೀಡುವ ಭರವಸೆ ನೀಡುವ ಮೂಲಕ ಮತ್ತಷ್ಟು ಪ್ರಚೋದನೆ ನೀಡಿದ್ದಾರೆ. ಅವರು ಒಬ್ಬ ಶಾಸಕರಾಗಿ ಮಾಡುವ ಕರ್ತವ್ಯಕ್ಕೆ ವಿರುದ್ಧವಾಗಿ ನಡೆಯುತ್ತಿದ್ದಾರೆ’ ಎಂದು ಆರೋಪಿಸಿದ ಅವರು, ಗಲಭೆ ನಡೆಸಿದ ಸಂಘಟನೆಗಳನ್ನು ನಿಷೇಧಿಸುವ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ ಎಂದು ಹೇಳಿದರು.

‘ಡಿ.ಜೆ.ಹಳ್ಳಿ ಗಲಭೆ ಪ್ರಕರಣಕ್ಕೂ, ಕಾಂಗ್ರೆಸ್ ಪಕ್ಷಕ್ಕೂ ನಿಕಟ ಸಂಬಂಧ ಇದೆ’ ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ಆರೋಪಿಸಿದರು.

‘ಕೇವಲ ಒಂದು ವಾಟ್ಸ್‌ಆ್ಯಪ್‌ ಮೆಸೇಜ್‌ನಿಂದ ಎರಡು–ಮೂರು ಸಾವಿರ ಜನರು ಒಂದಡೆ ಸೇರುತ್ತಾರೆ ಅಂದರೆ ಅದು ಹೇಗೆ ಸಾಧ್ಯ. ಇದೊಂದು ಪೂರ್ವನಿಯೋಜಿತ ಕೃತ್ಯ. ಇಷ್ಟೆಲ್ಲಾ ಗಲಾಟೆ, ಹಿಂಸಾಚಾರ ನಡೆದರೂ ಕಾಂಗ್ರೆಸ್‌ ಖಂಡಿಸುತ್ತಿಲ್ಲ ಏಕೆ.’ ಎಂದು ಪ್ರಶ್ನಿಸಿದರು‌.

‘ರಾಜ್ಯದಲ್ಲಿ ಅಶಾಂತಿ ಸೃಷ್ಟಿಸಿ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೆಟ್ಟ ಹೆಸರು ತರಬೇಕು ಎನ್ನುವುದೇ ಕಾಂಗ್ರೆಸ್ ಉದ್ದೇಶವಾಗಿದೆ’ ಎಂದು ದೂರಿದರು.

ಮೃತ ಕುಟುಂಬಗಳಿಗೆ ಪರಿಹಾರ ಘೋಷಿಸಿದ್ದು ನಿಜವೇ ಎಂದು ಖಚಿತಪಡಿಸಿಕೊಳ್ಳಲು ಶಾಸಕ ಜಮೀರ್‌ ಖಾನ್‌ ಅವರನ್ನು ‘ಪ್ರಜಾವಾಣಿ’ ಸಂಪರ್ಕಿಸಿತು. ಆದರೆ, ಅವರು ಕರೆ ಸ್ವೀಕರಿಸಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT