ಗದುಗಿನ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳ ಜತೆಗೆ ಮಾತನಾಡಿದ ಅವರು, ‘ಜಮೀರ್ ಅವರಿಗೆ ಕಾನೂನು ಗೊತ್ತಿಲ್ಲ; ಜಾತಿ ರಾಜಕಾರಣ ಮಾತ್ರ ಗೊತ್ತು. ಕಿಡಿಗೇಡಿಗಳ ಕುಟುಂಬಕ್ಕೆ ಪರಿಹಾರ ನೀಡುವ ಭರವಸೆ ನೀಡುವ ಮೂಲಕ ಮತ್ತಷ್ಟು ಪ್ರಚೋದನೆ ನೀಡಿದ್ದಾರೆ. ಅವರು ಒಬ್ಬ ಶಾಸಕರಾಗಿ ಮಾಡುವ ಕರ್ತವ್ಯಕ್ಕೆ ವಿರುದ್ಧವಾಗಿ ನಡೆಯುತ್ತಿದ್ದಾರೆ’ ಎಂದು ಆರೋಪಿಸಿದ ಅವರು, ಗಲಭೆ ನಡೆಸಿದ ಸಂಘಟನೆಗಳನ್ನು ನಿಷೇಧಿಸುವ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ ಎಂದು ಹೇಳಿದರು.