<p><strong>ಗದಗ</strong>: ಜಿಲ್ಲೆಯ ಜೈನ ಬಸದಿಗಳನ್ನು ಜೀರ್ಣೋದ್ಧಾರ ಮಾಡುವಂತೆ ಆಗ್ರಹಿಸಿ ಗದಗ ಜಿಲ್ಲಾ ದಿಗಂಬರ ಜೈನ ಸಂಘವು ಮೈಸೂರಿನ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ಆಯುಕ್ತ ದೇವರಾಜ್ ಎ. ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು.</p>.<p>ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಗೆ ಆಧೀನಕ್ಕೆ ಒಳಪಡುವ ಗದಗ ಜಿಲ್ಲೆಯ ಜೈನ ಬಸದಿಗಳಾದ ರೋಣ ಪಟ್ಟಣದ ಭಗವಾನ 1008 ಪಾರ್ಶ್ವನಾಥ ದಿಗಂಬರ ಜೈನ ಮಂದಿರ ಜೀರ್ಣಾವಸ್ಥೆಯಲ್ಲಿದ್ದು, ಮಂದಿರದ ಸುತ್ತಮುತ್ತಲಿನ ಪ್ರದೇಶವನ್ನು ಸಂಪೂರ್ಣ ಒತ್ತುವರಿ ಮಾಡಲಾಗಿದೆ.</p>.<p>ಮುಳಗುಂದ ಪಟ್ಟಣದ ಗುಡ್ಡದಲ್ಲಿರುವ ತ್ರಿಕೂಟ ಜಿನಾಲಯ ಹಾಗೂ ಭಗವಾನ್ 1008 ಚಂದ್ರಪ್ರಭು ತೀರ್ಥಂಕರ ಮಂದಿರಗಳು ಸಂಪೂರ್ಣವಾಗಿ ಶಿಥಿಲಗೊಂಡಿವೆ.</p>.<p>ಇದೇ ರೀತಿಯಲ್ಲಿ ಲಕ್ಷ್ಮೇಶ್ವರ ಪಟ್ಟಣದ ನೇಮಿನಾಥ ಬಸದಿ (ಶಂಖ ಬಸದಿ) ಕೂಡ ಶಿಥಿಲವಾಗಿದ್ದು ಗದಗ ಪ್ರವಾಸದಲ್ಲಿರುವ ತಾವುಗಳು ಈ ಸ್ಥಳಗಳಿಗೆ ಸ್ವತಃ ಭೇಟಿ ನೀಡಿ ಕೂಲಂಕಷವಾಗಿ ಪರಿಶೀಲನೆ ನಡೆಸಿ ಪಾಳು ಬಿದ್ದಿರುವ ಜೈನ ಮಂದಿಗಳನ್ನು ಜೀರ್ಣೋದ್ಧಾರ ಮಾಡಲು ತುರ್ತು ಕ್ರಮ ಜರುಗಿಸಬೇಕು ಎಂದು ಮನವಿಯಲ್ಲಿ ವಿನಂತಿಸಿದ್ದಾರೆ.</p>.<p>ಮನವಿ ಸ್ವೀಕರಿಸಿದ ಆಯುಕ್ತ ದೇವರಾಜ್ ಅವರು, ಈ ಕುರಿತು ಪರಿಶೀಲಿಸಿ ಮುಂದಿನ ಕ್ರಮ ಜರುಗಿಸುವ ಭರವಸೆ ನೀಡಿದರು.</p>.<p>ಮನವಿ ಸಲ್ಲಿಸುವ ಸಂದರ್ಭದಲ್ಲಿ ಗದಗ ಜಿಲ್ಲಾ ದಿಗಂಬರ ಜೈನ ಸಂಘದ ಉಪಾಧ್ಯಕ್ಷ ಎಂ.ಟಿ.ಕಬ್ಬಿಣ, ಪಿ.ಜಿ.ನಾವಳ್ಳಿ, ಕಾರ್ಯದರ್ಶಿ ಪ್ರಕಾಶ ಮುತ್ತಿನ, ಜಂಟಿ ಕಾರ್ಯದರ್ಶಿ ಸಂಕಪ್ಪ ನಾವಳ್ಳಿ, ಪ್ರಾಚ್ಯವಸ್ತು ಸಂಶೋಧಕ ಅ.ದ.ಕಟ್ಟಿಮನಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ</strong>: ಜಿಲ್ಲೆಯ ಜೈನ ಬಸದಿಗಳನ್ನು ಜೀರ್ಣೋದ್ಧಾರ ಮಾಡುವಂತೆ ಆಗ್ರಹಿಸಿ ಗದಗ ಜಿಲ್ಲಾ ದಿಗಂಬರ ಜೈನ ಸಂಘವು ಮೈಸೂರಿನ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ಆಯುಕ್ತ ದೇವರಾಜ್ ಎ. ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು.</p>.<p>ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಗೆ ಆಧೀನಕ್ಕೆ ಒಳಪಡುವ ಗದಗ ಜಿಲ್ಲೆಯ ಜೈನ ಬಸದಿಗಳಾದ ರೋಣ ಪಟ್ಟಣದ ಭಗವಾನ 1008 ಪಾರ್ಶ್ವನಾಥ ದಿಗಂಬರ ಜೈನ ಮಂದಿರ ಜೀರ್ಣಾವಸ್ಥೆಯಲ್ಲಿದ್ದು, ಮಂದಿರದ ಸುತ್ತಮುತ್ತಲಿನ ಪ್ರದೇಶವನ್ನು ಸಂಪೂರ್ಣ ಒತ್ತುವರಿ ಮಾಡಲಾಗಿದೆ.</p>.<p>ಮುಳಗುಂದ ಪಟ್ಟಣದ ಗುಡ್ಡದಲ್ಲಿರುವ ತ್ರಿಕೂಟ ಜಿನಾಲಯ ಹಾಗೂ ಭಗವಾನ್ 1008 ಚಂದ್ರಪ್ರಭು ತೀರ್ಥಂಕರ ಮಂದಿರಗಳು ಸಂಪೂರ್ಣವಾಗಿ ಶಿಥಿಲಗೊಂಡಿವೆ.</p>.<p>ಇದೇ ರೀತಿಯಲ್ಲಿ ಲಕ್ಷ್ಮೇಶ್ವರ ಪಟ್ಟಣದ ನೇಮಿನಾಥ ಬಸದಿ (ಶಂಖ ಬಸದಿ) ಕೂಡ ಶಿಥಿಲವಾಗಿದ್ದು ಗದಗ ಪ್ರವಾಸದಲ್ಲಿರುವ ತಾವುಗಳು ಈ ಸ್ಥಳಗಳಿಗೆ ಸ್ವತಃ ಭೇಟಿ ನೀಡಿ ಕೂಲಂಕಷವಾಗಿ ಪರಿಶೀಲನೆ ನಡೆಸಿ ಪಾಳು ಬಿದ್ದಿರುವ ಜೈನ ಮಂದಿಗಳನ್ನು ಜೀರ್ಣೋದ್ಧಾರ ಮಾಡಲು ತುರ್ತು ಕ್ರಮ ಜರುಗಿಸಬೇಕು ಎಂದು ಮನವಿಯಲ್ಲಿ ವಿನಂತಿಸಿದ್ದಾರೆ.</p>.<p>ಮನವಿ ಸ್ವೀಕರಿಸಿದ ಆಯುಕ್ತ ದೇವರಾಜ್ ಅವರು, ಈ ಕುರಿತು ಪರಿಶೀಲಿಸಿ ಮುಂದಿನ ಕ್ರಮ ಜರುಗಿಸುವ ಭರವಸೆ ನೀಡಿದರು.</p>.<p>ಮನವಿ ಸಲ್ಲಿಸುವ ಸಂದರ್ಭದಲ್ಲಿ ಗದಗ ಜಿಲ್ಲಾ ದಿಗಂಬರ ಜೈನ ಸಂಘದ ಉಪಾಧ್ಯಕ್ಷ ಎಂ.ಟಿ.ಕಬ್ಬಿಣ, ಪಿ.ಜಿ.ನಾವಳ್ಳಿ, ಕಾರ್ಯದರ್ಶಿ ಪ್ರಕಾಶ ಮುತ್ತಿನ, ಜಂಟಿ ಕಾರ್ಯದರ್ಶಿ ಸಂಕಪ್ಪ ನಾವಳ್ಳಿ, ಪ್ರಾಚ್ಯವಸ್ತು ಸಂಶೋಧಕ ಅ.ದ.ಕಟ್ಟಿಮನಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>