ಗದಗ ನಗರದಲ್ಲಿ ಸೋಮವಾರ ನಡೆದ ವಿಧಾನ ಪರಿಷತ್ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿ, ‘ಕಂದಾಯಕ್ಕೆ ಸಂಬಂಧಿಸಿದ ಎಲ್ಲ ಅಧಿಕಾರ ತಹಶೀಲ್ದಾರ್ಗೇ ಇರಲಿದೆ. ಆದರೆ, ಈಗ ತಹಶೀಲ್ದಾರ್ ಕಚೇರಿಯಲ್ಲಿ ಕೊಡುತ್ತಿರುವ ಜಾತಿ ಮತ್ತು ಆದಾಯ ಪ್ರಮಾಣಪತ್ರ, ಪಹಣಿ ವಿತರಣೆ ಸೇರಿದಂತೆ ಸುಮಾರು 30ಕ್ಕೂ ಹೆಚ್ಚು ಸೇವೆಗಳನ್ನು ಒದಗಿಸುವ ಅವಕಾಶವನ್ನು ಗ್ರಾಮ ಪಂಚಾಯ್ತಿಗಳಿಗೆ ವರ್ಗಾಯಿಸಲಾಗುವುದು. ಇದಕ್ಕೆ ಅಗತ್ಯವಿರುವ ಡಿಟಿಟಲ್ ವ್ಯವಸ್ಥೆಯನ್ನು ಪಂಚಾಯ್ತಿಗಳಿಗೆ ಕಲ್ಪಿಸಲಾಗುವುದು. ಇದರಿಂದ ಕ್ರಾಂತಿಕಾರಕ ಬದಲಾವಣೆ ಆಗಲಿದೆ’ ಎಂದು ಹೇಳಿದರು.