ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಶೇಷ ಸ್ಥಾನಮಾನ: ಸಂಸದರ ರಾಜೀನಾಮೆಗೆ ಆಗ್ರಹ

Last Updated 30 ಮಾರ್ಚ್ 2018, 19:30 IST
ಅಕ್ಷರ ಗಾತ್ರ

ಹೈದರಾಬಾದ್: ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನಕ್ಕೆ ಆಗ್ರಹಿಸಿ ತೆಲುಗು ದೇಶಂ ಪಕ್ಷದ ಸಂಸದರು ಸೇರಿದಂತೆ ರಾಜ್ಯದ ಎಲ್ಲ ಸಂಸದರೂ ಪಕ್ಷಾತೀತವಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷ ಆಗ್ರಹಿಸಿದೆ.

‘ರಾಜ್ಯದ ಹಿತಾಸಕ್ತಿ ಕಾಪಾಡಲು ಎಲ್ಲರೂ ಒಗ್ಗೂಡಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವುದು ಅಗತ್ಯವಿದೆ. ಹೀಗಾಗಿ, ಮೊದಲು ಸಾಮೂಹಿಕ ರಾಜೀನಾಮೆ ನೀಡಬೇಕು. ಇದರಿಂದ, ಉಪಚುನಾವಣೆಗಳು ನಡೆದರೆ ಕೇಂದ್ರದ ಮೇಲೆ ಅಪಾರ ಪರಿಣಾಮ ಬೀರಲಿದೆ’ ಎಂದು ವೈಎಸ್‌ಆರ್‌ ಕಾಂಗ್ರೆಸ್‌ನ ಸಂಸದ ಮಿಥುನ್‌ ರೆಡ್ಡಿ ಪ್ರತಿಪಾದಿಸಿದ್ದಾರೆ.

‘ಚಂದ್ರಬಾಬು ನಾಯ್ಡು ಅವರು ತಮ್ಮ ಪಕ್ಷದ ಸಂಸದರಿಗೆ ರಾಜೀನಾಮೆ ನೀಡುವಂತೆ ತಿಳಿಸುವ ಮೂಲಕ ಈ ಹೋರಾಟದ ನಾಯಕತ್ವ ವಹಿಸಿಕೊಳ್ಳಲಿ. ನಂತರ ನಾವೂ ಅದನ್ನು ಪಾಲಿಸುತ್ತೇವೆ’ ಎಂದು ಅವರು ವಿವರಿಸಿದ್ದಾರೆ.

ಈಗ ನಡೆಯುತ್ತಿರುವ ಬಜೆಟ್‌ ಅಧಿವೇಶನನ ಕೊನೆ ದಿನ ಪಕ್ಷದ ಎಲ್ಲ ಸಂಸದರೂ ರಾಜೀನಾಮೆ ನೀಡಲಿದ್ದಾರೆ ಎಂದು ವೈಎಸ್‌ಆರ್‌ ಕಾಂಗ್ರೆಸ್‌ ಈಗಾಗಲೇ ಘೋಷಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT