<p><strong>ಗದಗ:</strong> ‘ಅವಿಭಕ್ತ ಕುಟುಂಬದಲ್ಲಿರುವ ಪ್ರೀತಿ, ಅಂತಃಕರಣ, ವಿಶಾಲ ಮನೋಭಾವ, ಒಗ್ಗಟ್ಟು ಇವುಗಳನ್ನು ಇಂದಿನ ಪೀಳಿಗೆಗೆ ತಿಳಿಸಬೇಕಾದ ಜವಾಬ್ದಾರಿ ಪಾಲಕರ ಮೇಲಿದೆ’ ಎಂದು ಹೊಸಳ್ಳಿ ಬೂದೀಶ್ವರ ಸಂಸ್ಥಾನ ಮಠದ ಬೂದೀಶ್ವರ ಸ್ವಾಮೀಜಿ ಹೇಳಿದರು.</p>.<p>ಇಲ್ಲಿನ ವಿವೇಕಾನಂದ ನಗರದ ಕಾಶಿ ವಿಶ್ವನಾಥ ದೇವಸ್ಥಾನದ ಆವರಣದಲ್ಲಿ ರಾಮಪ್ಪ ರಂಗಪ್ಪ ಕಾಶಪ್ಪನವರ ಅಭಿಮಾನಿ ಬಳಗದ ಸಹಕಾರದೊಂದಿಗೆ ನಡೆದ ‘ಅವಿಭಕ್ತ ಕುಟುಂಬದ ಸಾರಥಿ’ ಗ್ರಂಥ ಬಿಡುಗಡೆ ಹಾಗೂ ಅಭಿನಂದನಾ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದರು.</p>.<p>‘ಅವಿಭಕ್ತ ಕುಟುಂಬವನ್ನು ಈಗಲೂ ಮುನ್ನಡೆಸುತ್ತಿರುವ ಪ್ರೀತಿ, ಬಾಂಧವ್ಯಗಳನ್ನು ಗಟ್ಟಿಯಾಗಿ ಜೋಪಾನವಾಗಿರಿಸಿಕೊಂಡಿರುವ ರಾಮಪ್ಪ ಕಾಶಪ್ಪನವರ ಕುಟುಂಬ ವರ್ಗ ಇತರರಿಗೆ ಮಾದರಿ’ ಎಂದರು.</p>.<p>ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಡಿ.ಆರ್.ಪಾಟೀಲ ಗ್ರಂಥ ಬಿಡುಗಡೆ ಮಾಡಿದರು.</p>.<p>ಅಭಿನಂದನಾ ನುಡಿಗಳನ್ನಾಡಿದ ಗದಗ ಸಾಯಿ ಮಂದಿರದ ಸಂಸ್ಥಾಪಕ ಅಧ್ಯಕ್ಷ ಎಸ್.ಬಿ.ಶೆಟ್ಟರ, ಕಾಶಪ್ಪನವರ ಸಾಮಾಜಿಕ ಕಾರ್ಯ ಹಾಗೂ ಅವಿಭಕ್ತ ಕುಟುಂಬವನ್ನು ಮುನ್ನಡೆಸಿಕೊಂಡು ಬಂದಿರುವ ರೀತಿ ಸಮಾಜಕ್ಕೆ ಮಾದರಿ ಎಂದರು.</p>.<p>‘ಅವಿಭಕ್ತ ಕುಟುಂಬದ ಸಾರಥಿ’ ಗ್ರಂಥ ಬರೆದ ಅಂದಾನೆಪ್ಪ ವಿಭೂತಿ ಅವರು, ರಾಮಪ್ಪ ಕಾಶಪ್ಪನವರು ನಡೆದು ಬಂದ ಬದುಕಿನ ದಾರಿ ಹಾಗೂ ಗ್ರಂಥದ ಬಗ್ಗೆ ವಿವರಿಸಿದರು.</p>.<p>ಕರ್ನಾಟಕ ಪ್ರದೇಶ ಕುರುಬರ ಸಂಘದ ಅಧ್ಯಕ್ಷ ಫಕ್ಕೀರಪ್ಪ ಹೆಬಸೂರ ಆಶಯ ನುಡಿಗಳನ್ನಾಡಿದರು. ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ದಿ ಪ್ರಾಧಿಕಾರದ ಆಯುಕ್ತ ಶರಣು ಗೋಗೇರಿ ಪ್ರಾಸ್ತಾವಿಕವಾಗಿ ಮಾತನಾಡಿದರು. </p>.<p>ಕನಕದಾಸ ಶಿಕ್ಷಣ ಸಮಿತಿಯ ಸಂಸ್ಥಾಪಕ ಅಧ್ಯಕ್ಷ ಬಿ.ಎಫ್.ದಂಡಿನ ಅಧ್ಯಕ್ಷತೆ ವಹಿಸಿದ್ದರು. ಗಣ್ಯರಾದ ಶಾಂತಣ್ಣ ಕಡಿವಾಲ, ಬಿ.ಎನ್.ಯರನಾಳ, ಶಂಕರ ಹಾನಗಲ್ಲ, ಎಂ.ಎನ್.ಕಾಮನಹಳ್ಳಿ, ಎ.ಕೆ.ತಮ್ಮಣ್ಣವರ, ಮಹೇಶ ತಲೇಗೌಡ್ರ, ಎಸ್.ಎಫ್.ಜಕಬಾಳ, ಸಿದ್ಧಣ್ಣ ಪಟ್ಟಣಶೆಟ್ಟಿ, ಎ.ಟಿ.ನರೇಗಲ್ಲ, ಎಸ್.ಎಸ್.ಪಾಟೀಲ, ವಿ.ಕೆ.ಗುರುಮಠ, ಎಸ್.ಕೆ.ವಂಡಕರ ಇದ್ದರು.</p>
<p><strong>ಗದಗ:</strong> ‘ಅವಿಭಕ್ತ ಕುಟುಂಬದಲ್ಲಿರುವ ಪ್ರೀತಿ, ಅಂತಃಕರಣ, ವಿಶಾಲ ಮನೋಭಾವ, ಒಗ್ಗಟ್ಟು ಇವುಗಳನ್ನು ಇಂದಿನ ಪೀಳಿಗೆಗೆ ತಿಳಿಸಬೇಕಾದ ಜವಾಬ್ದಾರಿ ಪಾಲಕರ ಮೇಲಿದೆ’ ಎಂದು ಹೊಸಳ್ಳಿ ಬೂದೀಶ್ವರ ಸಂಸ್ಥಾನ ಮಠದ ಬೂದೀಶ್ವರ ಸ್ವಾಮೀಜಿ ಹೇಳಿದರು.</p>.<p>ಇಲ್ಲಿನ ವಿವೇಕಾನಂದ ನಗರದ ಕಾಶಿ ವಿಶ್ವನಾಥ ದೇವಸ್ಥಾನದ ಆವರಣದಲ್ಲಿ ರಾಮಪ್ಪ ರಂಗಪ್ಪ ಕಾಶಪ್ಪನವರ ಅಭಿಮಾನಿ ಬಳಗದ ಸಹಕಾರದೊಂದಿಗೆ ನಡೆದ ‘ಅವಿಭಕ್ತ ಕುಟುಂಬದ ಸಾರಥಿ’ ಗ್ರಂಥ ಬಿಡುಗಡೆ ಹಾಗೂ ಅಭಿನಂದನಾ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದರು.</p>.<p>‘ಅವಿಭಕ್ತ ಕುಟುಂಬವನ್ನು ಈಗಲೂ ಮುನ್ನಡೆಸುತ್ತಿರುವ ಪ್ರೀತಿ, ಬಾಂಧವ್ಯಗಳನ್ನು ಗಟ್ಟಿಯಾಗಿ ಜೋಪಾನವಾಗಿರಿಸಿಕೊಂಡಿರುವ ರಾಮಪ್ಪ ಕಾಶಪ್ಪನವರ ಕುಟುಂಬ ವರ್ಗ ಇತರರಿಗೆ ಮಾದರಿ’ ಎಂದರು.</p>.<p>ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಡಿ.ಆರ್.ಪಾಟೀಲ ಗ್ರಂಥ ಬಿಡುಗಡೆ ಮಾಡಿದರು.</p>.<p>ಅಭಿನಂದನಾ ನುಡಿಗಳನ್ನಾಡಿದ ಗದಗ ಸಾಯಿ ಮಂದಿರದ ಸಂಸ್ಥಾಪಕ ಅಧ್ಯಕ್ಷ ಎಸ್.ಬಿ.ಶೆಟ್ಟರ, ಕಾಶಪ್ಪನವರ ಸಾಮಾಜಿಕ ಕಾರ್ಯ ಹಾಗೂ ಅವಿಭಕ್ತ ಕುಟುಂಬವನ್ನು ಮುನ್ನಡೆಸಿಕೊಂಡು ಬಂದಿರುವ ರೀತಿ ಸಮಾಜಕ್ಕೆ ಮಾದರಿ ಎಂದರು.</p>.<p>‘ಅವಿಭಕ್ತ ಕುಟುಂಬದ ಸಾರಥಿ’ ಗ್ರಂಥ ಬರೆದ ಅಂದಾನೆಪ್ಪ ವಿಭೂತಿ ಅವರು, ರಾಮಪ್ಪ ಕಾಶಪ್ಪನವರು ನಡೆದು ಬಂದ ಬದುಕಿನ ದಾರಿ ಹಾಗೂ ಗ್ರಂಥದ ಬಗ್ಗೆ ವಿವರಿಸಿದರು.</p>.<p>ಕರ್ನಾಟಕ ಪ್ರದೇಶ ಕುರುಬರ ಸಂಘದ ಅಧ್ಯಕ್ಷ ಫಕ್ಕೀರಪ್ಪ ಹೆಬಸೂರ ಆಶಯ ನುಡಿಗಳನ್ನಾಡಿದರು. ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ದಿ ಪ್ರಾಧಿಕಾರದ ಆಯುಕ್ತ ಶರಣು ಗೋಗೇರಿ ಪ್ರಾಸ್ತಾವಿಕವಾಗಿ ಮಾತನಾಡಿದರು. </p>.<p>ಕನಕದಾಸ ಶಿಕ್ಷಣ ಸಮಿತಿಯ ಸಂಸ್ಥಾಪಕ ಅಧ್ಯಕ್ಷ ಬಿ.ಎಫ್.ದಂಡಿನ ಅಧ್ಯಕ್ಷತೆ ವಹಿಸಿದ್ದರು. ಗಣ್ಯರಾದ ಶಾಂತಣ್ಣ ಕಡಿವಾಲ, ಬಿ.ಎನ್.ಯರನಾಳ, ಶಂಕರ ಹಾನಗಲ್ಲ, ಎಂ.ಎನ್.ಕಾಮನಹಳ್ಳಿ, ಎ.ಕೆ.ತಮ್ಮಣ್ಣವರ, ಮಹೇಶ ತಲೇಗೌಡ್ರ, ಎಸ್.ಎಫ್.ಜಕಬಾಳ, ಸಿದ್ಧಣ್ಣ ಪಟ್ಟಣಶೆಟ್ಟಿ, ಎ.ಟಿ.ನರೇಗಲ್ಲ, ಎಸ್.ಎಸ್.ಪಾಟೀಲ, ವಿ.ಕೆ.ಗುರುಮಠ, ಎಸ್.ಕೆ.ವಂಡಕರ ಇದ್ದರು.</p>